ಕನ್ನಡಪ್ರಭ ವಾರ್ತೆ ಪಿರಿಯಾಪಟ್ಟಣ
ಪಟ್ಟಣದ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ತಾಲೂಕು ಜೆಡಿಎಸ್ ಘಟಕದ ವತಿಯಿಂದ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಆಡಳಿತ ಹೊಂದಿರುವ ಸಹಕಾರ ಸಂಘಗಳನ್ನು ಸೂಪರ್ ಸೀಡ್ ಮಾಡಿಸಿ ಆಡಳಿತಾಧಿಕಾರಿಗಳನ್ನು ನೇಮಿಸುವುದು. ಅವಧಿ ಮುಗಿದಿರುವ ಸಹಕಾರ ಸಂಘಗಳಿಗೆ ಚುನಾವಣೆ ನಡೆಸದಿರುವುದು, ಆಯಕಟ್ಟಿನ ಜಾಗಗಳಲ್ಲಿ ಭ್ರಷ್ಟರನ್ನು ತಂದು ಕೂರಿಸುವುದು ಸೇರಿದಂತೆ ಸರ್ವಾಧಿಕಾರಿ ವರ್ತನೆ ತೋರುತ್ತಿರುವ ಸಚಿವ ಕೆ. ವೆಂಕಟೇಶ್ ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಳ್ಳುತ್ತಿರುವುದು ಖಂಡನೀಯ ಎಂದರು.
ಮುಂದಿನ ದಿನಗಳಲ್ಲಿ ಜೆಡಿಎಸ್ ಕಾರ್ಯಕರ್ತರು ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.ಬಿಜೆಪಿ ವಿರುದ್ಧ ರಾಷ್ಟ್ರದಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಮತ ಚೋರಿ ಅಭಿಯಾನ ಹಾಸ್ಯಾಸ್ಪದವಾಗಿದ್ದು ಸಚಿವ ಕೆ. ವೆಂಕಟೇಶ್ ನಮ್ಮ ತಾಲೂಕಿನಲ್ಲಿನ ವಿವಿಧ ಸಹಕಾರ ಸಂಘಗಳಲ್ಲಿ ಅನಧಿಕೃತವಾಗಿ ಮತದಾರರನ್ನು ಸೇರ್ಪಡೆಗೊಳಿಸುವ ಮೂಲಕ ಮತ ಚೋರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
ಪ್ರತಿ ಗ್ರಾಪಂ ಒಂದು ಪಿಎಸಿಸಿಎಸ್ ಇರಬೇಕು ಎಂಬ ಕೇಂದ್ರ ಸರ್ಕಾರದ ನಿರ್ದೇಶನದಂತೆ ತಾಲೂಕಿನಲ್ಲಿ ಹೊಸದಾಗಿ 7 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಸ್ಥಾಪಿಸಲಾಗುತ್ತಿದ್ದು, ಎಲ್ಲೆಲ್ಲಿ ಜೆಡಿಎಸ್ ಬೆಂಬಲಿತರು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಿ ಅಧಿಕಾರ ಹಿಡಿಯುತ್ತಿದ್ದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಇವೆಯೋ ಅವುಗಳನ್ನು ಉದ್ದೇಶಪೂರ್ವಕವಾಗಿ ಒಡೆದು ಹೊಸದಾಗಿ ಸಹಕಾರ ಸಂಘಗಳನ್ನು ಸ್ಥಾಪಿಸುವ ಮೂಲಕ ರೈತರ ಮೇಲೆ ಮತ್ತು ಷೇರುದಾರರ ಮೇಲೆ ದಬ್ಬಾಳಿಕೆ ನಡೆಸಲಾಗುತ್ತಿದೆ ಎಂದು ದೂರಿದರು.
ಈ ವೇಳೆ ತಾಲೂಕು ಜೆಡಿಎಸ್ ಅಧ್ಯಕ್ಷ ಅಣ್ಣಯ್ಯ ಶೆಟ್ಟಿ, ಜೆಡಿಎಸ್ ಕಾನೂನು ಸಲಹೆಗಾರ ವಕೀಲ ಜೆ.ಎಸ್. ನಾಗರಾಜ್, ಮುಖಂಡರಾದ ರಾಜೇಗೌಡ, ಬಿ.ಆರ್. ಸತೀಶ್, ಪಿ.ಸಿ. ಕೃಷ್ಣ, ಪಿ.ಕೆ. ಕುಮಾರ್, ಮಂಜುನಾಥ್ ಸಿಂಗ್, ನಿರಂಜನ್, ಎ.ಆರ್. ನವೀನ್, ಸುರೇಶ್, ರವಿ, ಬಸವರಾಜು, ಮುತ್ತುರಾಜು, ನಂಜೇಗೌಡ, ಮುಕುಂದಚಾರಿ ವಿವಿಧ ಗ್ರಾಮದ ಮುಖಂಡರು ಇದ್ದರು.