ನೂತನ ಬಸ್ ಸಂಚಾರಕ್ಕೆ ಸಚಿವರಿಂದ ಚಾಲನೆ

KannadaprabhaNewsNetwork |  
Published : Apr 22, 2026, 03:00 AM IST
ಆಲಮಟ್ಟಿ ಉದ್ಯಾನವನಕ್ಕೆ ನೂತನ ಬಸ್ ಸಂಚಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ವಿಜಯಪುರದಿಂದ ಆಲಮಟ್ಟಿ ಉದ್ಯಾನವನಕ್ಕೆ ಹೊಸದಾಗಿ ಆರಂಭಗೊಂಡ ನೂತನ ಸಾರಿಗೆ ಬಸ್ ಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ವಿಜಯಪುರದಿಂದ ಆಲಮಟ್ಟಿ ಉದ್ಯಾನವನಕ್ಕೆ ಹೊಸದಾಗಿ ಆರಂಭಗೊಂಡ ನೂತನ ಸಾರಿಗೆ ಬಸ್ ಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಜಯಪುರ ವಿಭಾಗದಿಂದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಇವರ ಸೂಚನೆಯಂತೆ ವಿಜಯಪುರದಿಂದ ಜಿಲ್ಲೆಯ ಪ್ರೇಕ್ಷಣೀಯ ಸ್ಥಳ ಆಲಮಟ್ಟಿ ಉದ್ಯಾನವನಕ್ಕೆ ನೂತನ ಸಾರಿಗೆಯನ್ನು ಆರಂಭಗೊಳಿಸಲಾಗಿದೆ. ಈ ಸಾರಿಗೆಯು ಪ್ರತಿದಿನ ಆರು ಸರತಿಯಲ್ಲಿ ವಿಜಯಪುರದಿಂದ ಆಲಮಟ್ಟಿ ಉದ್ಯಾನವನಕ್ಕೆ ಹೋಗಿ ಬರಲಿದೆ. ಮೊದಲನೇ ಪಾಳಿ ಬೆಳಗ್ಗೆ 10 ಗಂಟೆಗೆ ವೀರ ರಾಣಿ ಕಿತ್ತೂರ ಚೆನ್ನಮ್ಮ ಕೇಂದ್ರ ಬಸ್ ನಿಲ್ದಾಣದಿಂದ ಆರಂಭಗೊಳ್ಳಲಿದೆ. ಆಲಮಟ್ಟಿಯ ಉದ್ಯಾನವನದಿಂದ ಕೊನೆಯ ಬಸ್ ರಾತ್ರಿ 8.20ಕ್ಕೆ ಮರಳಿ ವಿಜಯಪುರಕ್ಕೆ ಬಸ್ ಆಗಮಿಸಲಿದೆ. ಬಳಿಕ ಮಾತನಾಡಿದ ಸಚಿವರು, ಪ್ರೇಕ್ಷಣೀಯ ಸ್ಥಳಗಳಿಗೆ ಹೊಸದಾಗಿ ತನ್ನ ಸಂಚಾರ ಆರಂಭಿಸಲಿರುವ ಈ ಬಸ್ ಸೌಲಭ್ಯವನ್ನು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ.ಆನಂದ.ಕೆ, ಜಿಪಂ ಸಿಇಒ ರಿಷಿ ಆನಂದ, ಕೆಕೆಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ, ವಿಜಯಪುರ ಮೂರನೇ ಘಟಕದ ವ್ಯವಸ್ಥಾಪಕ ಎಸ್.ಎಂ.ವಾಲೀಕಾರ, ಸಹಾಯಕ ಸಂಚಾರ ವ್ಯವಸ್ಥಾಪಕ ಜಾನಪ್ಪ ಹುಗ್ಗೆಣ್ಣನವರ, ಪ್ರವಾಸೋದ್ಯಮ ಇಲಾಖೆ ಅನೀಲಕುಮಾರ ಬಣಜಿಗೇರ, ಮುಖಂಡೆ ಮಹಾದೇವಿ ಗೋಕಾಕ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೂವರು ಸಾಧಕರಿಗೆ ಗೌಡಾ ಪ್ರದಾನ
ವಿದ್ಯಾರ್ಥಿಗಳಿಗೆ ಗಳಿಕೆ ಕೌಶಲ್ಯ ತರಬೇತಿ ವ್ಯವಸ್ಥೆ