ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಸಚಿವ ಮಲ್ಲಿಕಾರ್ಜುನ್ ಭೂಮಿ ಪೂಜೆ

KannadaprabhaNewsNetwork |  
Published : Feb 16, 2024, 01:46 AM IST
ಕ್ಯಾಪ್ಷನಃ15ಕೆಡಿವಿಜಿ31ಃದಾವಣಗೆರೆಯ ನಿಟ್ಟುವಳ್ಳಿ ಸರ್ಕಾರಿ ಶಾಲೆಯ ನೂತನ ಕೊಠಡಿಗಳ ಭೂಮಿ ಪೂಜೆ ಸಂದರ್ಭದಲ್ಲಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಪರೇಡ್‌ನಲ್ಲಿ ವಿಜೇತರಾದ ಸೇವಾದಳ ತಂಡಕ್ಕೆ ಪಾರಿತೋಷಕ ವಿತರಿಸಿದರು. | Kannada Prabha

ಸಾರಾಂಶ

ಅನೇಕ ಖಾಸಗಿ ಶಾಲೆಗಳ ಮಧ್ಯೆ ಈ ಸರ್ಕಾರಿ ಶಾಲೆ 550 ಮಕ್ಕಳಿಗೆ ಶಿಕ್ಷಣ ನೀಡುತ್ತಿರುವುದು ಇಲ್ಲಿಯ ಶಿಕ್ಷಕರ ಅರ್ಪಣಾ ಮನೋಭಾವನೆ ಸೇವೆಗೆ ಸಾಕ್ಷಿಯಾಗಿದೆ. ಮುಂದೆಯೂ ಇದೆ ರೀತಿ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವಂತೆ ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್‌ನಲ್ಲಿ ವಿಜೇತರಾದ ಸೇವಾದಳ ತಂಡಕ್ಕೆ ಪಾರಿತೋಷಕ ವಿತರಿಸಿ ಮಕ್ಕಳ ಸಾಧನೆಗೆ ಅಭಿನಂದಿಸಿದರು.

ಕನ್ನಡಪ್ರಭ ವಾರ್ತೆ ದಾವಣಗೆರೆ

ನಗರದ ನಿಟ್ಟುವಳ್ಳಿಯ ಸರ್ಕಾರಿ ಆರ್‌ಎಂಎಸ್‌ಎ ಶಾಲೆಯಲ್ಲಿ ಗುರುವಾರ ₹41.50 ಲಕ್ಷದ ವಿವೇಕ ಯೋಜನೆಯಡಿ ನಿರ್ಮಿಸುತ್ತಿರುವ ನೂತನ ಕೊಠಡಿಗಳ ಭೂಮಿ ಪೂಜೆ ಕಾರ್ಯಕ್ರಮ ನಡೆಯಿತು.

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಅನೇಕ ಖಾಸಗಿ ಶಾಲೆಗಳ ಮಧ್ಯೆ ಈ ಸರ್ಕಾರಿ ಶಾಲೆ 550 ಮಕ್ಕಳಿಗೆ ಶಿಕ್ಷಣ ನೀಡುತ್ತಿರುವುದು ಇಲ್ಲಿಯ ಶಿಕ್ಷಕರ ಅರ್ಪಣಾ ಮನೋಭಾವನೆ ಸೇವೆಗೆ ಸಾಕ್ಷಿಯಾಗಿದೆ. ಮುಂದೆಯೂ ಇದೆ ರೀತಿ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವಂತೆ ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್‌ನಲ್ಲಿ ವಿಜೇತರಾದ ಸೇವಾದಳ ತಂಡಕ್ಕೆ ಪಾರಿತೋಷಕ ವಿತರಿಸಿ ಮಕ್ಕಳ ಸಾಧನೆಗೆ ಅಭಿನಂದಿಸಿದರು.

ಈ ವಾರ್ಡಿನ ಪಾಲಿಕೆ ಸದಸ್ಯರಾದ ಸವಿತಾ ಹುಲ್ಮನಿ ಗಣೇಶ್‌ರವರ ಶಿಕ್ಷಣದ ಆಸಕ್ತಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು ಶಾಲೆಗೆ ಬೇಕಾಗುವ ಇನ್ನುಳಿದ ವ್ಯವಸ್ಥೆಗಳ ಮಂಜೂರು ಮಾಡುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಬಿಇಒ ಡಾ.ಪುಷ್ಪಲತಾ, ಪಾಲಿಕೆ ಸದಸ್ಯರು, ಎಸ್‌ಡಿಎಂಸಿ ಅಧ್ಯಕ್ಷರು, ಪದಾಧಿಕಾರಿಗಳು, ಆಯುಕ್ತರು, ಇಂಜಿನಿಯರ್, ಗುತ್ತಿಗೆದಾರರು, ಶಾಲಾ ಸಿಬ್ಬಂದಿ ಹಾಜರಿದ್ದರು. ಮುಖ್ಯ ಶಿಕ್ಷಕ ಎಂ.ಸುರೇಶ್ ಸ್ವಾಗತಿಸಿದರು, ಕೆ.ಟಿ.ಜಯಪ್ಪ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ತಡೆ : ತೇಜಸ್ವಿ ಸೂರ್ಯ
ಜಿಬಿಎ ಪಾಲಿಕೆಗಳ ಚುನಾವಣೆಯಲ್ಲಿ ಬ್ಯಾಲೆಟ್‌ ಮತದಾನಕ್ಕೆ ತೊಂದರೆ ಆಗದಂತೆ ಕ್ರಮ: ಸುನೀಲ್ ಕುಮಾರ್‌