ಸಾರ್ವಜನಿಕರ ಕುಂದು ಕೊರತೆ ಆಲಿಸಿದ ಸಚಿವ ಮಂಕಾಳ ವೈದ್ಯ

KannadaprabhaNewsNetwork |  
Published : Apr 20, 2025, 01:47 AM IST
ಅಹವಾಲು ಆಲಿಸಿದರು  | Kannada Prabha

ಸಾರಾಂಶ

ಅಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಸೂಕ್ತ ನಿರ್ದೇಶನ ನೀಡಿ ಶೀಘ್ರದಲ್ಲಿ ಅವುಗಳಿಗೆ ಪರಿಹಾರ ಒದಗಿಸುವಂತೆ ಸೂಚಿಸಿದ್ದು ಮಾತ್ರವಲ್ಲದೇ ಕೆಲವು ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ನಿರ್ದೇಶನ ನೀಡಿದರು.

ಕಾರವಾರ: ಹೊನ್ನಾವರ ತಾಲೂಕಿನ ಸಚಿವರ ಕಚೇರಿಯಲ್ಲಿ ಶನಿವಾರ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧ ಗ್ರಾಮಗಳ ಜನತೆಯ ಸಮಸ್ಯೆಗಳನ್ನು ಆಲಿಸಿದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯಸಾರ್ವಜನಿಕರ ಎಲ್ಲ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿದರು.ಜನತಾ ದರ್ಶನ ಕಾರ್ಯಕ್ರಮದಲ್ಲಿ 100ಕ್ಕೂ ಅಧಿಕ ಮನವಿಗಳನ್ನು ಆಲಿಸಿದ ಸಚಿವರು ಹಲವು ಸಮಸ್ಯೆಗಳ ಕುರಿತಂತೆ ಸಂಬಂದಪಟ್ಟ ಅಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಸೂಕ್ತ ನಿರ್ದೇಶನ ನೀಡಿ ಶೀಘ್ರದಲ್ಲಿ ಅವುಗಳಿಗೆ ಪರಿಹಾರ ಒದಗಿಸುವಂತೆ ಸೂಚಿಸಿದ್ದು ಮಾತ್ರವಲ್ಲದೇ ಕೆಲವು ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ನಿರ್ದೇಶನ ನೀಡಿದರು.

ಕಾರ್ಯಕ್ರಮದಲ್ಲಿ ಮಕ್ಕಳ ಆರೋಗ್ಯದ ಸಮಸ್ಯೆಗಳ ಕುರಿತಂತೆ ಅನಾರೋಗ್ಯ ಪೀಡಿತ ಮಕ್ಕಳೊಂದಿಗೆ ಆಗಮಿಸಿದ್ದ ತಾಯಂದಿರಿಗೆ ಸಾಂತ್ವನ ಹೇಳಿ, ನೆರವಿನ ಭರವಸೆ ನೀಡಿದರು. ಅನಾರೋಗ್ಯ ಪೀಡಿತರು ಮತ್ತು ಹಿರಿಯ ನಾಗರೀಕರಿರ ಸಮಸ್ಯೆಗಳನ್ನು ಆಲಿಸಲು ಆದ್ಯತೆ ನೀಡಿದ ಸಚಿವರು, ಜನತಾ ದರ್ಶನಕ್ಕೆ ಆಗಮಿಸಿದ್ದ ಪ್ರತಿಯೊಬ್ಬರ ಅಹವಾಲುಗಳನ್ನು ಅತ್ಯಂತ ತಾಳ್ಮೆಯಿಂದ ಆಲಿಸಿ, ಗಂಭೀರ ಪ್ರಕರಣಗಳ ಕುರಿತಂತೆ ನಿರಂತರವಾಗಿ ಫಾಲೋ ಅಪ್ ಮಾಡಿ ವರದಿ ನೀಡುವಂತೆ ಆಪ್ತ ಸಹಾಯಕರಿಗೆ ತಿಳಿಸಿದರು.

ವಸತಿ ಸಮಸ್ಯೆಯ ಬಗ್ಗೆ ತಿಳಿಸಿದ ಸಾರ್ವಜನಿಕರ ಮನವಿಗಳನ್ನು ಆಲಿಸಿದ ಸಚಿವರು, ಈ ಪ್ರದೇಶಗಳಿಗೆ ಖುದ್ದು ಭೇಟಿ ನೀಡುವಂತೆ ಆಪ್ತ ಸಹಾಯಕರಿಗೆ ಸೂಚಿಸಿದರು. ಮನೆಯ ಬಗ್ಗೆ ಮನವಿ ಸಲ್ಲಿಸಿದ ಮೀನುಗಾರರಿಗೆ ಆದ್ಯತೆಯಲ್ಲಿ ಮನೆ ಒದಗಿಸುವುದಾಗಿ ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!