ಕನ್ನಡಪ್ರಭ ವಾರ್ತೆ ತಿಕೋಟಾ
ಮಳೆಯಿಂದ ಹಾನಿಯಾಗಿರುವ ಬೆಳೆಗಳನ್ನು ನಿಯಮಾನುಸಾರ ಸಮೀಕ್ಷೆ ನಡೆಸಬೇಕು. ಸಮೀಕ್ಷಾ ಕಾರ್ಯಕ್ಕೆ ನೂತನ ತಂತ್ರಜ್ಞಾನಗಳನ್ನು ಬಳಸಿ ಬೆಳೆಗಳ ಜೊತೆಗೆ ಹಾನಿಗೊಳಗಾದ ಮನೆಗಳ ಕುರಿತು ಹಾಗೂ ಇತರೆ ಅಂಶಗಳ ಕುರಿತು ಸಹ ಸಮೀಕ್ಷೆ ನಡೆಸಬೇಕು. ಮುಂಜಾಗ್ರತಾ ಸುರಕ್ಷಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದರು.
ಈ ವೇಳೆ ಜಿಲ್ಲಾಧಿಕಾರಿ ಟಿ.ಭೂಬಾಲನ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ, ಎಸ್ಪಿ ಋಷಿಕೇಶ ಸೋನಾವಣೆ, ತಿಕೋಟಾ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪುರ, ಬಬಲೇಶ್ವರ ಕಾರ್ಯನಿರ್ವಾಹಕ ಅಧಿಕಾರಿ ವ್ಹಿ.ಎಸ್.ಹಿರೇಮಠ ಸೇರಿದಂತೆ ಕೃಷಿ, ತೋಟಗಾರಿಕೆ ಸೇರಿ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.