ಕನ್ನಡಪ್ರಭ ವಾರ್ತೆ ಮಂಗಳೂರು
ಮಂಗಳೂರು ವಿವಿ ಮಂಗಳಾ ಸಭಾಂಗಣದಲ್ಲಿ ಅಂತರ್ ವಿಶ್ವವಿದ್ಯಾನಿಲಯ ಕಬಡ್ಡಿ ಚಾಂಪಿಯನ್ಸಿಪ್ ಪ್ರಶಸ್ತಿ ಗೆದ್ದುಕೊಂಡ ಮಂಗಳೂರು ವಿವಿ ತಂಡದ ಸದಸ್ಯರನ್ನು ಶನಿವಾರ ಸನ್ಮಾನಿಸಿ ಮಾತನಾಡಿದರು.
ವಿಶ್ವವಿದ್ಯಾಲಯಗಳು ಈಗ ಹಲವು ಸಮಸ್ಯೆಗಳನ್ನು ಎದುರಿಸುತ್ತಿವೆಯಾದರೂ ಇದರ ನಡುವೆ ಕ್ರೀಡಾ ಸ್ಪೂರ್ತಿಯನ್ನು ಬೆಳೆಸುವ ಕಾರ್ಯ ಆಗಬೇಕಿದೆ. ಶಿಕ್ಷಕ ವೃತ್ತಿ ಎನ್ನುವುದು ಅತ್ಯಂತ ಪವಿತ್ರವಾದ್ದು. ಉತ್ತಮ ಶಿಕ್ಷಣ ಕೊಟ್ಟು ಮೌಲ್ಯಾಧಾರಿತ ವ್ಯಕ್ತಿಯನ್ನು ರೂಪಿಸುವ ಜವಬ್ಧಾರಿಯೂ ಅವರ ಮೇಲಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಪ್ರೊಫೆಸರ್, ಡೀನ್ ಯಾವಾಗ ಆಗೋದು ಎನ್ನುವ ಮನೋಭಾವನೆ ಹೆಚ್ಷಾಗುತ್ತಿದೆಯೇ ಕನಸು ವಿನಃ, ತಾನು ಕ್ರೀಡಾ, ಶಿಕ್ಷಣ ಕ್ಷೇತ್ರಕ್ಕೆ ನೀಡಬೇಕಾದ ಕೊಡುಗೆಗಳ ಬಗ್ಗೆ ಚಿಂತನೆ ಕಡಿಮೆಯಾಗುತ್ತಿದೆ ಎಂದರು.ಮಂಗಳೂರು ವಿವಿಯ ಕುಲಪತಿ ಪ್ರೊ.ಜಯರಾಜ್ ಅಮೀನ್ ಅಧ್ಯಕ್ಷತೆ ವಹಿಸಿದ್ದರು.
ಇತ್ತೀಚೆಗೆ ರಾಷ್ಟ್ರಮಟ್ಟದ ಅಂತರ್ ವಿಶ್ವವಿದ್ಯಾನಿಲಯ ಕಬಡ್ಡಿ ಚಾಂಪಿಯನ್ಶಿಪ್ನಲ್ಲಿ ಪ್ರಶಸ್ತಿ ಗೆದ್ದುಕೊಂಡ ಮಂಗಳೂರು ವಿವಿ ತಂಡದ ಸದಸ್ಯರನ್ನು ಸನ್ಮಾನಿಸಲಾಯಿತು.
ದೈಹಿಕ ಶಿಕ್ಷಣ ವಿಭಾಗದ ಡಾ.ಜೆರಾಲ್ಡ್ ಸಂತೋಷ್ ಡಿಸೋಜಾ ಪರಿಚಯಿಸಿದರು. ಹಣಕಾಸು ಅಧಿಕಾರಿ ಪ್ರೊ.ವೈ.ಸಂಗಪ್ಪ ವಂದಿಸಿದರು. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಧನಂಜಯ ಕುಂಬ್ಳೆ ನಿರೂಪಿಸಿದರು.