ಮೆಣಸಿನಕಾಯಿ ಬೆಳೆಗಾರರ ಸಂಕಷ್ಟ ಆಲಿಸಿದ ಸಚಿವ ನಾಗೇಂದ್ರ

KannadaprabhaNewsNetwork |  
Published : Dec 17, 2023, 01:45 AM IST
ಬಳ್ಳಾರಿ ತಾಲೂಕಿನ ಎತ್ತಿನಬೂದಿಹಾಳ್ ಬಳಿ  ಮೆಣಸಿನಕಾಯಿ ಬೆಳೆಗಾರರನ್ನು ಭೇಟಿ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ನಾಗೇಂದ್ರ ಅವರು ರೈತರ ಸಂಕಷ್ಟಗಳನ್ನು ಆಲಿಸಿದರು. | Kannada Prabha

ಸಾರಾಂಶ

ಎಚ್ಎಲ್ ಕಾಲುವೆ ನೀರು ಬಿಡುವ ಅವಧಿ ಮುಗಿದಿದ್ದರೂ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಜತೆ ಸಭೆ ನಡೆಸಿ ಐದು ದಿನಗಳ ಕಾಲ ಕಾಲುವೆಗೆ ಹೆಚ್ಚುವರಿ ನೀರು ಬಿಡಿಸುವ ಮೂಲಕ ಜಿಲ್ಲೆಯ ತುಂಗಭದ್ರಾ ಅಚ್ಚುಕಟ್ಟುದಾರರ ಹಿತ ಕಾಪಾಡಲಾಗಿದೆ.

ಬಳ್ಳಾರಿ: ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಮೆಣಸಿನಕಾಯಿ ಬೆಳೆಗಾರ ರೈತರನ್ನು ಭೇಟಿ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ನಾಗೇಂದ್ರ ಅವರು ರೈತರ ಸಂಕಷ್ಟಗಳನ್ನು ಆಲಿಸಿದರು.

ಗ್ರಾಮಾಂತರ ಕ್ಷೇತ್ರದ ವ್ಯಾಪ್ತಿಯ ಎತ್ತಿನಬೂದಿನಹಾಳ್ ಬಳಿ ತೆರಳಿ ಮೆಣಸಿನಕಾಯಿ ಬೆಳೆಗಾರರ ಸಂಕಷ್ಟಗಳನ್ನು ಕೇಳಿದ ಸಚಿವರು, ಎಚ್ಎಲ್ ಕಾಲುವೆ ನೀರು ಬಿಡುವ ಅವಧಿ ಮುಗಿದಿದ್ದರೂ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಜತೆ ಸಭೆ ನಡೆಸಿ ಐದು ದಿನಗಳ ಕಾಲ ಕಾಲುವೆಗೆ ಹೆಚ್ಚುವರಿ ನೀರು ಬಿಡಿಸುವ ಮೂಲಕ ಜಿಲ್ಲೆಯ ತುಂಗಭದ್ರಾ ಅಚ್ಚುಕಟ್ಟುದಾರರ ಹಿತ ಕಾಪಾಡಲಾಗಿದೆ.

ಕಾಲುವೆಗೆ ನೀರು ಹರಿಸಲು ಕಾರಣರಾದ ಸಚಿವರಿಗೆ ರೈತರು ಅಭಿನಂದನೆ ಸಲ್ಲಿಸಿದರು. ಇದೇ ವೇಳೆ ಮಾತನಾಡಿದ ತುಂಗಭದ್ರಾ ರೈತ ಸಂಘದ ಅಧ್ಯಕ್ಷ ಪುರುಷೋತ್ತಗೌಡ, ಜಿಲ್ಲೆಯ ಮೆಣಸಿನಕಾಯಿ ಬೆಳೆಗಾರರು ನೀರಿಲ್ಲದೆ ತೀವ್ರ ಸಂಕಷ್ಟದಲ್ಲಿದ್ದರು. ಈ ಬಗ್ಗೆ ಸಚಿವರಲ್ಲಿ ಮನವಿ ಮಾಡಿದಾಗ ಬೆಳಗಾವಿಗೆ ಬರಲು ಹೇಳಿ, ಜಲಸಂಪನ್ಮೂಲ ಸಚಿವರು ಹಾಗೂ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಿ ನೀರು ಬಿಡಿಸುವ ಮೂಲಕ ಅನುಕೂಲ ಮಾಡಿದ್ದಾರೆ ಎಂದರು.

ಪಕ್ಷದ ಮುಖಂಡರಾದ ಗೋವರ್ಧನರೆಡ್ಡಿ, ಇಬ್ರಾಹಿಂಪುರ ನಾಗರಾಜ್, ಮುಂಡ್ಲೂರು ಶ್ರೀಧರ್, ರಾಮ್ ಪ್ರಸಾದ್, ಮುಂಡ್ರಗಿ ನಾಗರಾಜ್, ಅಣ್ಣಾ ನಾಗರಾಜ್, ಯರಗುಡಿ ಮಲ್ಲಯ್ಯ, ಗೋನಾಳ್ ನಾಗಭೂಷಣಗೌಡ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೆಡಿಯು ನಾಯಕ ನಿತೀಶ್‌ ರಾಜ್ಯಸಭೆಗೆ - ಸಿಎಂ ಸ್ಥಾನಕ್ಕೆ ರಾಜೀನಾಮೆ
ಈ ಸಾಲಲ್ಲಿ ಅಬಕಾರಿ ರಾಜಸ್ವ ಟಾರ್ಗೆಟ್‌ ಕಷ್ಟ? 11 ತಿಂಗಳಲ್ಲಿ ಮದ್ಯ ಮಾರಾಟ ಗಣನೀಯ ಕುಸಿತ