ಕಾಂಗ್ರೆಸ್‌ ಸರ್ಕಾರದ ಮೊದಲ ವಿಕೆಟ್ ಪತನವಾಗುವುದೇ ವರ್ಷದ ಸಾಧನೆ: ಆರ್‌.ಅಶೋಕ್‌

KannadaprabhaNewsNetwork |  
Published : Jun 01, 2024, 01:45 AM ISTUpdated : Jun 01, 2024, 10:06 AM IST
ಪೊಟೋ: 31ಎಸ್ಎಂಜಿಕೆಪಿ09ಶಿವಮೊಗ್ಗದ ವಿನೋಬನಗರದಲ್ಲಿರುವ ಮೃತ ನೌಕರ ಚಂದ್ರಶೇಖರನ್‌ ಮನೆಗೆ ಶುಕ್ರವಾರ ಸಂಜೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌  ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. | Kannada Prabha

ಸಾರಾಂಶ

  ವಾಲ್ಮೀಕಿ ನಿಗಮಕ್ಕೂ ಐಟಿ ಕಂಪನಿಗೂ ಏನು ಸಂಬಂಧ, ಪರಿಶಿಷ್ಟ ಜಾತಿ ಅಭಿವೃದ್ಧಿಗಾಗಿ ಹಣ ವಿನಿಯೋಗಿಸುವ ನಿಗಮ ಐಟಿ ಕಂಪನಿಗೆ ಹಣ ಹೇಗೆ ವರ್ಗಾಯಿಸಲಿದೆ. ಹಣಕಾಸು ಸಚಿವರಾಗಿ ಸಿದ್ದರಾಮಯ್ಯನವರೇ ಇದ್ದರೂ ಹಣಕಾಸು ಸಚಿವಾಲಯದ ಅನುಮತಿಯಿಲ್ಲದೆ ಹೇಗೆ ವರ್ಗಾವಣೆ ಆಗಿದೆ.

  ಶಿವಮೊಗ್ಗ :  ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದಿದೆ. ಒಂದು ವರ್ಷದ ಸಾಧನೆಯಲ್ಲಿ ಸಚಿವ ನಾಗೇಂದ್ರ ಮೊದಲ‌ ವಿಕೆಟ್ ಪತನವಾಗಲಿದೆ. ಮೃತ ಅಧಿಕಾರಿ ಕುಟುಂಬಕ್ಕೆ ಗೃಹ ಸಚಿವರು ಪೊಳ್ಳು ಭರವಸೆ ನೀಡಿದ್ದಾರೆ. ಜಿಲ್ಲಾಧಿಕಾರಿ ಇನ್ನೂ ಸಂತ್ರಸ್ತರ ಮನೆಗೆ ಬಂದಿಲ್ಲ.‌ ಹಾಗಾಗಿ ಸರ್ಕಾರದ ಭರವಸೆಯ ಬಗ್ಗೆ ಅನುಮಾನವಿದೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಟೀಕಿಸಿದರು.

ಶಿವಮೊಗ್ಗದ ವಿನೋಬನಗರದಲ್ಲಿರುವ ಮೃತ ಅಧಿಕಾರಿ ಚಂದ್ರಶೇಖರನ್‌ ಮನೆಗೆ ಶುಕ್ರವಾರ ಸಂಜೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಚಂದ್ರಶೇಖರನ್‌ ಸಾವು ನಿಷ್ಠಾವಂತ ಅಧಿಕಾರಿಗಳಿಗೆ ಭಯ ಹುಟ್ಟಿಸಿದೆ. ಸಿದ್ದರಾಮಯ್ಯ ಸರ್ಕಾರ ಬಂದಾಗಲೆಲ್ಲ ಅಧಿಕಾರಿಗಳು ಭಯ ಭೀತಿಗೆ ಒಳಗಾಗಿದ್ದಾರೆ. ವಾಲ್ಮೀಕಿ ನಿಗಮಕ್ಕೂ ಐಟಿ ಕಂಪನಿಗೂ ಏನು ಸಂಬಂಧ, ಪರಿಶಿಷ್ಟ ಜಾತಿ ಅಭಿವೃದ್ಧಿಗಾಗಿ ಹಣ ವಿನಿಯೋಗಿಸುವ ನಿಗಮ ಐಟಿ ಕಂಪನಿಗೆ ಹಣ ಹೇಗೆ ವರ್ಗಾಯಿಸಲಿದೆ. ಹಣಕಾಸು ಸಚಿವರಾಗಿ ಸಿದ್ದರಾಮಯ್ಯನವರೇ ಇದ್ದರೂ ಹಣಕಾಸು ಸಚಿವಾಲಯದ ಅನುಮತಿಯಿಲ್ಲದೆ ಹೇಗೆ ವರ್ಗಾವಣೆ ಆಗಿದೆ ಎಂದು ಪ್ರಶ್ನಿಸಿದರು.

ಚಂದ್ರಶೇಖರನ್‌ ಗೆ ನ್ಯಾ.ನಾಗಮೋಹನ್ ದಾಸ್ ಬೆಸ್ಟ್ ಅವಾರ್ಡ್ ನೀಡಿದ್ದಾರೆ. ಕೋವಿಡ್ ಇದ್ದಾಗ‌ ಒಂದು ತಿಂಗಳವರೆಗೆ ಐಸಿಯುವಿನಲ್ಲಿದ್ದ ಚಂದ್ರಶೇಖರ್ ಬದುಕುಳಿದಿದ್ದೇ ಹೆಚ್ಚು. ಭ್ರಷ್ಟಚಾರಿ ಅಧಿಕಾರಿ ಆಗಿದ್ದರೆ ಅವರು ಮಾಡಿರುವ 20 ಲಕ್ಷ ರು. ಸಾಲ ತೀರಿಸಿಕೊಳ್ಳುತ್ತಿದ್ದರು ಎಂದು ಹೇಳಿದರು.

ಸಿದ್ದರಾಮಯ್ಯನವರ ಕಳೆದ ಸರ್ಕಾರವಿದ್ದಾಗ ಡಿವೈಎಸ್ಪಿ ಅನುಪಮಾ ಶೆಣೈ ರೋಸತ್ತು ರಾಜೀನಾಮೆ ನೀಡಿದರು. ಕಲಬುರಗಿಯಲ್ಲಿ ಮಲ್ಲಿಕಾರ್ಜುನ ಬಂಡೆ, ಡಿ.ಕೆ ರವಿ ಸಾವು ಸಿದ್ದರಾಮಯ್ಯ ಸರ್ಕಾರದಲ್ಲಿ ನಡೆದಿದ್ದು.‌ ಭಾಗ್ಯ ಭಾಗ್ಯ ಎನ್ನುವ ಸರ್ಕಾರ ಅಧಿಕಾರಿಗಳ ಜೀವನ ಭಾಗ್ಯವನ್ನೂ ಕಿತ್ತುಕೊಂಡಿದೆ ಎಂದು ಆರೋಪಿಸಿದರು.

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗಲೆಲ್ಲ ನಾಲ್ಕು ಸಂಗತಿಗಳು ಸಂಭವಿಸುತ್ತದೆ.‌ ಒಂದು ಕಾನೂನು ಸುವ್ಯವಸ್ಥೆ ಗೂಂಡಾಗಳಿಗೆ ಗುತ್ತಿಗೆ ಆಗುತ್ತದೆ. ಎರಡು, ಹಿಂದೂಗಳಿಗೆ ರಕ್ಷಣೆ ಇಲ್ಲದಂತಾಗುತ್ತದೆ . ಮೂರು ಬರ ಎಂಬುದು ರಾಜ್ಯಕ್ಕೆ ಕಟ್ಟಿಟ್ಟ ಬುತ್ತಿಯಾಗುತ್ತದೆ. ಅಲ್ಪಸಂಖ್ಯಾತರ ಓಲೈಕೆ ಮಾಡಲಾಗುತ್ತಿದೆ. ಸಿದ್ದರಾಮಯ್ಯ ಸರ್ಕಾರ ಅಲ್ಪಾವಧಿ ಸರ್ಕಾರ ಎಂದು ಭವಿಷ್ಯ ನುಡಿದರು.‌

ತರಾತುರಿಯಲ್ಲಿ ಸಿಐಡಿಗೆ ಕೊಟ್ಟಿದ್ದೇಕೆ?

ಸರ್ಕಾರದ ಸಿಎಂ ಮತ್ತು ಡಿಸಿಎಂ ಇಬ್ಬರೂ ತರಾತುರಿಯಲ್ಲಿ ಸಭೆ ನಡೆಸುತ್ತಿದ್ದಾರೆ. ಸಿಬಿಐಗೆ ಪ್ರಕರಣ ಹೋಗುತ್ತಿದೆ ಎಂದು ಸಭೆ ನಡೆಸಲಾಗುತ್ತಿದೆ. ಸಿಐಡಿ ತನಿಖೆ‌ ಎಂಬುದೇ ದೊಂಬರಾಟ. ನೊಂದ ಕುಟುಂಬಸ್ಥರ ಅನುಮತಿ ಪಡೆದು ತನಿಖೆ ಸಿಐಡಿಗೆ ಕೊಡಬೇಕಿತ್ತು. ಆದರೆ, ಸರ್ಕಾರ ತರಾತುರಿಯಲ್ಲಿ ಸಿಐಡಿಗೆ ಹಸ್ತಾಂತರಿಸಿದ್ದು ಹೇಗೆ? ಅವ್ಯವಹಾರ ನಡೆದರೂ ಒಬ್ಬನ ಬಂಧನವಾಗಿಲ್ಲ ಎಂದು ಅಶೋಕ್‌ ವಾಗ್ದಾಳಿ ನಡೆಸಿದರು.ಡಿ.ಕೆ.ಶಿವಕುಮಾರ್‌ ವಿರುದ್ಧವೇ ವಾಮಾಚಾರ ನಡೆಸಲಾಗುತ್ತಿದೆ ಎನ್ನುತ್ತಿದ್ದಾರೆ. ಅವರ ಬಾಯಿಯಲ್ಲಿ ಹೋಮ ಹವನದ ಬಗ್ಗೆ ಹೇಳಿರುವುದು ಸಿಂಪತಿ ತೆಗೆದುಕೊಳ್ಳಲು ಹೊರಟಿರುವುದು ಸ್ಪಷ್ಟ. ಪ್ರಜ್ವಲ್ ರೇವಣ್ಣ‌ ಬಂಧನ ತಡವಾಗಿದೆ. ಪ್ರಜ್ವಲ್‌ಗೆ ಬುದ್ಧಿ ಇದ್ದಿದ್ದರೆ ಕಾನೂನಿಗೆ ಶರಣಾಗಬೇಕಿತ್ತು. ತಡವಾದರೂ ಬಂದು ಶರಣಾಗಿದ್ದಾರೆ. ತನಿಖೆಯಾಗಲಿ ಕಾನೂನು‌ ನೋಡಿಕೊಳ್ಳಲಿದೆ.

ಆರ್‌.ಅಶೋಕ್‌, ವಿಪಕ್ಷ ನಾಯಕ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''