ಚನ್ನಮ್ಮಾಜಿ ಐಕ್ಯಸ್ಥಳಕ್ಕೆ ಸಚಿವ ಪರಮೇಶ್ವರ ಭೇಟಿ

KannadaprabhaNewsNetwork |  
Published : Apr 18, 2026, 02:45 AM IST
ಪರಮ್‌ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೈಲಹೊಂಗಲ ಸ್ವಾತಂತ್ರ್ಯ ಸಂಗ್ರಾಮದ ಬೆಳ್ಳಿ ಚುಕ್ಕಿ ಕಿತ್ತೂರು ರಾಣಿ ಚನ್ನಮ್ಮಾಜಿ ಅವರ ಐಕ್ಯ ಸ್ಥಳಕ್ಕೆ ಗೃಹ ಸಚಿವ ಜಿ.ಪರಮೇಶ್ವರ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದರು. ಐಕ್ಯ ಸ್ಥಳ ಹಾಗೂ ನವೀಕರಿಸಲಾದ ರಾಕ್ ಗಾರ್ಡನ್ ವೀಕ್ಷಿಸಿದ ಸಚಿವರು ಸಂತಸ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಬೈಲಹೊಂಗಲ

ಸ್ವಾತಂತ್ರ್ಯ ಸಂಗ್ರಾಮದ ಬೆಳ್ಳಿ ಚುಕ್ಕಿ ಕಿತ್ತೂರು ರಾಣಿ ಚನ್ನಮ್ಮಾಜಿ ಅವರ ಐಕ್ಯ ಸ್ಥಳಕ್ಕೆ ಗೃಹ ಸಚಿವ ಜಿ.ಪರಮೇಶ್ವರ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದರು. ಐಕ್ಯ ಸ್ಥಳ ಹಾಗೂ ನವೀಕರಿಸಲಾದ ರಾಕ್ ಗಾರ್ಡನ್ ವೀಕ್ಷಿಸಿದ ಸಚಿವರು ಸಂತಸ ವ್ಯಕ್ತಪಡಿಸಿದರು.

ನಯಾನಗರ ಗ್ರಾಮದ ಸುಖದೇವಾನಂದ ಮಠದ ಜಾತ್ರಾ ಮಹೋತ್ಸವಕ್ಕೆ ಆಗಮಿಸಿದ್ದ ಸಚಿವರು, ಬಳಿಕ ಶಾಸಕ ಮಹಾಂತೇಶ ಕೌಜಲಗಿ ಅವರ ನಿವಾಸಕ್ಕೆ ತೆರಳಿ, ಮಾಜಿ ಸಚಿವ ಶಿವಾನಂದ ಕೌಜಲಗಿ ಅವರೊಂದಿಗೆ ಕೆಲಹೊತ್ತು ಚರ್ಚೆ ನಡೆಸಿದರು. ನಂತರ ಚನ್ನಮ್ಮಾಜಿಯ ಐಕ್ಯ ಸ್ಥಳಕ್ಕೆ ತೆರಳಿ ಗೌರವ ನಮನ ಸಲ್ಲಿಸಿದರು.

ಈ ವೇಳೆ ಶಾಸಕ ಮಹಾಂತೇಶ ಕೌಜಲಗಿ ಚನ್ನಮ್ಮಾಜಿಯ ಇತಿಹಾಸ ಹಾಗೂ ನವೀಕರಿಸಲಾದ ರಾಕ್ ಗಾರ್ಡನ್ ಕುರಿತು ಸಚಿವರಿಗೆ ಮಾಹಿತಿ ನೀಡಿದರು. ನವೀಕೃತ ರಾಕ್ ಗಾರ್ಡನ್ ವೀಕ್ಷಿಸಿದ ಬಳಿಕ ಸಚಿವರು ನಯಾನಗರ ಗ್ರಾಮದ ಸುಖದೇವಾನಂದ ಮಠಕ್ಕೆ ತೆರಳಿ ಅಭಿನವ ಸಿದ್ದಲಿಂಗೇಶ್ವರ ಶ್ರೀಗಳ ಆಶೀರ್ವಾದ ಪಡೆದರು.

ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿದ ಸಚಿವರು, ರಾಜ್ಯದಲ್ಲಿಯೇ ಉತ್ತಮ ಹೆಸರು ಪಡೆದಿರುವುದಕ್ಕೆ ಹೆಮ್ಮೆ ವ್ಯಕ್ತಪಡಿಸಿದರು.

ಕಾಲೇಜಿನ ಗ್ರಂಥಾಲಯ ಅಭಿವೃದ್ಧಿಗಾಗಿ ಸ್ವತಃ ₹ 5 ಲಕ್ಷ ನೀಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕ ಆಸೀಪ್ ಶೇಠ್, ಬೆಳಗಾವಿಯ ಐಜಿಪಿ ಚೇತನಸಿಂಗ್ ರಾಥೋಡ, ಎಸ್ಪಿ ಕೆ.ರಾಮರಾಜನ್, ತಾಲೂಕಾ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಮಹಾಂತೇಶ ಕಳ್ಳಿಬಡ್ಡಿ, ಪೌರಾಯುಕ್ತೆ ಭಾಗ್ಯಶ್ರೀ ಹುಗ್ಗಿ, ಶಿವರಂಜನ್ ಬೋಳನ್ನವರ, ಪುರಸಭೆ ಮಾಜಿ ಅಧ್ಯಕ್ಷ ಬಸವರಾಜ ಜನ್ಮಟ್ಟಿ, ಬಾಬು ಕುಡಸೋಮಣ್ಣವರ, ಮಹಾಂತೇಶ ತುರಮರಿ, ಹಸನ ಗೊರವನಕೊಳ್ಳ, ಕಾರ್ತಿಕ ಪಾಟೀಲ ಸೇರಿ ಅನೇಕ ಮುಖಂಡರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಳೆ ಬಸವನ ಬಾಗೇವಾಡಿಯಿಂದ ಬಸವಜ್ಯೋತಿ ಪಾದಯಾತ್ರೆ
ಉಕ್ಕು ಸಚಿವಾಲಯದ ಹಿಂದಿ ಸಲಹಾ ಸಮಿತಿಗೆ ಡಾ.ಸುನಿತಾ ಚವ್ಹಾಣ ನೇಮಕ