ಗಾಯಾಳು ನೆರವಿಗೆ ಧಾವಿಸಿದ ಸಚಿವ ಎಸ್‌ಎಸ್‌ಎಂ

KannadaprabhaNewsNetwork |  
Published : Sep 15, 2025, 01:00 AM IST
14ಕೆಡಿವಿಜಿ5-ದಾವಣಗೆರೆ ಹೊರ ವಲಯದ ಜಿನೆಸಿಸ್ ರೆಸಾರ್ಟ್ ಬಳಿ ದ್ವಿಚಕ್ರ ವಾಹನ ಸವಾರ ಅಪಘಾತದಲ್ಲಿ ಗಾಯಗೊಂಡಿದ್ದನ್ನು ಗಮನಿಸಿ ಆತನ ನೆರವಿಗೆ ಧಾವಿಸಿರುವ ಸಚಿವ ಎಸ್ಸೆಸ್ ಮಲ್ಲಿಕಾರ್ಜುನ. ...............14ಕೆಡಿವಿಜಿ6-ದಾವಣಗೆರೆ ಹೊರ ವಲಯದ ಜಿನೆಸಿಸ್ ರೆಸಾರ್ಟ್ ಬಳಿ ದ್ವಿಚಕ್ರ ವಾಹನ ಸವಾರ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಪಾಲಿಕೆ ಮಾಜಿ ಸದಸ್ಯ ಜಿ.ಎಸ್.ಮಂಜುನಾಥ ಗಡಿಗುಡಾಳ, ಸಚಿವರ ಅಂಗರಕ್ಷಕ ನಟರಾಜ್ ಜೀಪಿನಲ್ಲಿ ಮಲಗಿಸುತ್ತಿರುವುದು. ................14ಕೆಡಿವಿಜಿ7-ದಾವಣಗೆರೆ ಹೊರ ವಲಯದ ಜಿನೆಸಿಸ್ ರೆಸಾರ್ಟ್ ಬಳಿ ದ್ವಿಚಕ್ರ ವಾಹನ ಸವಾರ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸುಮಾರು ಹೊತ್ತು ಅಲ್ಲಿಯೇ ನರಳಾಡುತ್ತಿರುವುದು. | Kannada Prabha

ಸಾರಾಂಶ

ಅಪರಿಚಿತ ವಾಹನ ಡಿಕ್ಕಿ ಹೊಡೆದು ರಸ್ತೆಯಲ್ಲಿ ಗಂಭೀರ ಗಾಯಗೊಂಡು ಬಿದ್ದಿದ್ದ ದ್ವಿಚಕ್ರ ವಾಹನ ಸವಾರರನ್ನು ಕಂಡ ತಕ್ಷಣವೇ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಗಾಯಾಳು ನೆರವಿಗೆ ಧಾವಿಸಿ, ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಘಟನೆ ಹೊರವಲಯದ ಜಿನೆಸಿಸ್ ರೆಸಾರ್ಟ್ ಬಳಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ.

- ರಾಷ್ಟ್ರೀಯ ಹೆದ್ದಾರಿ ಪಕ್ಕ ಲಾರಿ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ - ಬೆಂಗಾವಲು ಪಡೆ ವಾಹನದಲ್ಲಿ ಆಸ್ಪತ್ರೆಗೆ ರವಾನೆ, ಸೂಕ್ತ ಚಿಕಿತ್ಸೆಗೂ ಸಚಿವರಿಂದ ಕ್ರಮ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ಅಪರಿಚಿತ ವಾಹನ ಡಿಕ್ಕಿ ಹೊಡೆದು ರಸ್ತೆಯಲ್ಲಿ ಗಂಭೀರ ಗಾಯಗೊಂಡು ಬಿದ್ದಿದ್ದ ದ್ವಿಚಕ್ರ ವಾಹನ ಸವಾರರನ್ನು ಕಂಡ ತಕ್ಷಣವೇ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಗಾಯಾಳು ನೆರವಿಗೆ ಧಾವಿಸಿ, ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಘಟನೆ ಹೊರವಲಯದ ಜಿನೆಸಿಸ್ ರೆಸಾರ್ಟ್ ಬಳಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ.

ದಾವಣಗೆರೆ ತಾಲೂಕಿನ ಅಮೃತ ನಗರ ಗ್ರಾಮದ ವಾಸಿಯಾದ ಮಂಜುನಾಥ ಗಾಯಗೊಂಡ ವ್ಯಕ್ತಿ. ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕಿನಲ್ಲಿ ಬರುವಾಗ ಈ ಅಪಘಾತ ಸಂಭವಿಸಿದೆ.

ಹರಿಹರ ತಾಲೂಕಿನ ಹನಗವಾಡಿ ಗ್ರಾಮದ ಕಾರ್ಯಕ್ರಮವೊಂದರಲ್ಲಿ ಭಾಗಿಯಾದ ನಂತರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್‌. ಮಲ್ಲಿಕಾರ್ಜುನ ಹಳೆ ಬಾತಿ ಗ್ರಾಮದ ದರ್ಗಾದ ಕಾಮಗಾರಿ ವೀಕ್ಷಿಸಿದರು. ಅನಂತರ ಬೈಪಾಸ್ ರಸ್ತೆಯ ಮಾರ್ಗವಾಗಿ ದಾವಣಗೆರೆ ಕಡೆಗೆ ಹೊರಟಿದ್ದರು. ಸಚಿವರು ಬರುವ ಮಾರ್ಗದಲ್ಲೇ ಕೆಲ ನಿಮಿಷಗಳ ಮುಂಚೆ ಅಪರಿಚಿತ ಲಾರಿ ಡಿಕ್ಕಿ ಹೊಡೆದಿದ್ದರಿಂದ ಬೈಕ್ ಸವಾರ ತೀವ್ರವಾಗಿ ಗಾಯಗೊಂಡು ರಸ್ತೆ ಬದಿ ಬಿದ್ದು ಒದ್ದಾಡುತ್ತಿದ್ದುದನ್ನು ಸಚಿವರು ಗಮನಿಸಿದರು.

ತಕ್ಷಣವೇ ತಮ್ಮ ವಾಹನವನ್ನು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ನಿಲ್ಲಿಸಿ, ಗಾಯಾಳು ಬೈಕ್ ಸವಾರನನ್ನು ತಮ್ಮ ಬೆಂಗಾವಲು ಪಡೆಯ ವಾಹನದಲ್ಲಿ ಮಲಗಿಸಿ, ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆಂದು ಕಳಿಸಿದರು. ಪಾಲಿಕೆ ಮಾಜಿ ಸದಸ್ಯರಾದ ಜಿ.ಎಸ್.ಮಂಜುನಾಥ ಗಡಿಗುಡಾಳ, ಆವರಗೆರೆ ಸುರೇಶ, ಕಾಂಗ್ರೆಸ್ ಮುಖಂಡರಾದ ಬಿ.ಕೆ.ಪರಶುರಾಮ ಮಾಗಾನಹಳ್ಳಿ, ಬೂದಾಳ ಬಾಬು ಇತರರು ಗಾಯಾಳುವನ್ನು ವಾಹನಕ್ಕೆ ಎತ್ತಿಹಾಕುವಲ್ಲಿ ನೆರವಾದರು.

ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ ಅವರ ಬೆಂಗಾವಲು ಪಡೆಯ ಎಎಸ್ಐ ದಾದಾಪೀರ್‌, ಅಂಗರಕ್ಷಕ ನಟರಾಜ ಗಾಯಾಳುವನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದು ದಾಖಲಿಸಿದರು. ಸಚಿವರು ಸಹ ಜಿಲ್ಲಾಸ್ಪತ್ರೆ ಮಾರ್ಗದವರೆಗೂ ಬಂದು ಜಿಲ್ಲಾಸ್ಪತ್ರೆ ವೈದ್ಯಾಧಿಕಾರಿಗಳಿಗೆ ಗಾಯಾಳುವಿಗೆ ತುರ್ತಾಗಿ ಚಿಕಿತ್ಸೆ ವ್ಯವಸ್ಥೆ ಮಾಡಲು ಸೂಚಿಸಿದರು. ಅಗತ್ಯ ಬಿದ್ದರೆ ಹೆಚ್ಚಿನ ಚಿಕಿತ್ಸೆಗೆ ಎಸ್‌.ಎಸ್. ಹೈಟೆಕ್ ಆಸ್ಪತ್ರೆಗೆ ಕರೆದೊಯ್ಯುವಂತೆಯೂ ಸೂಚನೆ ನೀಡಿದರು.

ಸುಮಾರು ಹೊತ್ತಿನ ನಂತರ ಗಾಯಾಳು ಮಂಜು ಅವರಿಗೆ ಫೋನ್ ಮೂಲಕ ಸಂಪರ್ಕಿಸಿದ ಸಚಿವ ಎಸ್‌.ಎಸ್. ಮಲ್ಲಿಕಾರ್ಜುನ ಧೈರ್ಯ ತುಂಬಿದರು. ಶೀಘ್ರ ಗುಣಮುಖ ಆಗುವಂತೆ ಹಾರೈಸಿದರು. ಸಕಾಲಕ್ಕೆ ಮಂಜುನಾಥ್‌ ನೆರವಿಗೆ ಧಾವಿಸಿದ್ದಕ್ಕಾಗಿ ಕುಟುಂಬದವರು, ಸ್ನೇಹಿತರು ಸಚಿವ ಎಸ್‌ಎಸ್‌ಎಂ ಅವರಿಗೆ ಕೃತಜ್ಞತೆ ಅರ್ಪಿಸಿದ್ದಾರೆ.

- - -

-14ಕೆಡಿವಿಜಿ5:

ದಾವಣಗೆರೆಯ ಜಿನೆಸಿಸ್ ರೆಸಾರ್ಟ್ ಬಳಿ ದ್ವಿಚಕ್ರ ವಾಹನ ಸವಾರ ಅಪಘಾತದಲ್ಲಿ ಗಾಯಗೊಂಡಿದ್ದನ್ನು ಗಮನಿಸಿ ಸಚಿವ ಎಸ್.ಎಸ್‌. ಮಲ್ಲಿಕಾರ್ಜುನ ನೆರವಿಗೆ ಧಾವಿಸಿದರು. -14ಕೆಡಿವಿಜಿ6:

ದಾವಣಗೆರೆಯ ಜಿನೆಸಿಸ್ ರೆಸಾರ್ಟ್ ಬಳಿ ದ್ವಿಚಕ್ರ ವಾಹನ ಸವಾರ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಪಾಲಿಕೆ ಮಾಜಿ ಸದಸ್ಯ ಜಿ.ಎಸ್.ಮಂಜುನಾಥ ಗಡಿಗುಡಾಳ, ಸಚಿವರ ಅಂಗರಕ್ಷಕ ನಟರಾಜ್ ಜೀಪಿನಲ್ಲಿ ಮಲಗಿ, ಚಿಕಿತ್ಸೆಗೆ ರವಾನಿಸಿದರು. -14ಕೆಡಿವಿಜಿ7:

ದಾವಣಗೆರೆ ಜಿನೆಸಿಸ್ ರೆಸಾರ್ಟ್ ಬಳಿ ದ್ವಿಚಕ್ರ ವಾಹನ ಸವಾರ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸುಮಾರು ಹೊತ್ತು ಅಲ್ಲಿಯೇ ನರಳಾಡುತ್ತಿರುವುದು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿವಶಂಕರಪ್ಪ ಕರ್ನಾಟಕ ರತ್ನಕ್ಕೆ ಅರ್ಹ : ಶ್ರೀ
ಮೈಸೂರು ಹೀಲಿಯಂ ಸಿಲಿಂಡರ್‌ ಸ್ಫೋಟ : ಎನ್‌ಐಎ ಭೇಟಿ