ಅಪಘಾತ-ಗಾಯಾಳುಗಳ ಆಸ್ಪತ್ರೆಗೆ ಸೇರಿಸಿದ ಸಚಿವ ತಂಗಡಗಿ

KannadaprabhaNewsNetwork |  
Published : Dec 09, 2024, 12:47 AM IST
ರಸ್ತೆ ಅಪಘಾತದಲ್ಲಿ ಗಾಯಗೊಂಡವರನ್ನು ಆ್ಯಂಬುಲೆನ್ಸ್‌ನಲ್ಲಿ ಕೊಪ್ಪಳ ಜಿಲ್ಲಾಸ್ಪತ್ರೆಗೆ ಕೊಂಡೊಯ್ಯುತ್ತಿರುವುದು. | Kannada Prabha

ಸಾರಾಂಶ

ರಸ್ತೆ ಅಪಘಾತದಲ್ಲಿ ಗಾಯಗೊಂಡು ರಸ್ತೆಯ ಮೇಲೆ ಬಿದ್ದಿದ್ದ ದಂಪತಿ ಹಾಗೂ ಅವರ ಮಗುವನ್ನು ಸಕಾಲದಲ್ಲಿ ಆಸ್ಪತ್ರೆಗೆ ಸಾಗಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಮಾನವೀಯತೆ ಮೆರೆದಿದ್ದಾರೆ.

ಕನ್ನಡಪ್ರಭ ವಾರ್ತೆ ಮುನಿರಾಬಾದ್ರಸ್ತೆ ಅಪಘಾತದಲ್ಲಿ ಗಾಯಗೊಂಡು ರಸ್ತೆಯ ಮೇಲೆ ಬಿದ್ದಿದ್ದ ದಂಪತಿ ಹಾಗೂ ಅವರ ಮಗುವನ್ನು ಸಕಾಲದಲ್ಲಿ ಆಸ್ಪತ್ರೆಗೆ ಸಾಗಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಮಾನವೀಯತೆ ಮೆರೆದಿದ್ದಾರೆ.ಭಾನುವಾರ ಸಂಜೆ 8 ಗಂಟೆಗೆ ಸಚಿವ ಶಿವರಾಜ್ ತಂಗಡಗಿ ಕೊಪ್ಪಳದಲ್ಲಿ ಮೀಟಿಂಗ್ ಮುಗಿಸಿಕೊಂಡು ರಾಷ್ಟ್ರೀಯ ಹೆದ್ದಾರಿ 50 ಮಾರ್ಗವಾಗಿ ಕನಕಗಿರಿಗೆ ತೆರಳುತ್ತಿರುವಾಗ ಸಮೀಪದ ಶಹಾಪುರ ಗ್ರಾಮದ ಬಳಿ ದ್ವಿಚಕ್ರ ವಾಹನ ಸವಾರ ಹಾಗೂ ಆತನ ಹೆಂಡತಿ, ಮಗು ಅಪಘಾತಕ್ಕೀಡಾಗಿ ರಸ್ತೆಯ ಮೇಲೆ ಬಿದ್ದಿರುವುದು ಸಚಿವರ ಗಮನಕ್ಕೆ ಬಂದಿದೆ. ತಕ್ಷಣ ಸಚಿವರು ಮುನಿರಾಬಾದ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಸುನಿಲ್ ಅವರಿಗೆ ಕರೆ ಮಾಡಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡುವಂತೆ ಸೂಚಿಸಿದರು.

ಕಾರ್ಯಪ್ರವೃತ್ತರಾದ ಸಬ್ ಇನ್‌ಸ್ಪೆಕ್ಟರ್ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳನ್ನು ಸಂಪರ್ಕಿಸಿ ಆ್ಯಂಬುಲೆನ್ಸ್‌ ಕಳುಹಿಸುವಂತೆ ಹೇಳಿದರು. ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ತಕ್ಷಣ ಆ್ಯಂಬುಲೆನ್ಸ್‌ ಕಳುಹಿಸಿ, ಗಾಯಗೊಂಡ ದಂಪತಿ ಹಾಗೂ ಮಗುವನ್ನು ಸಕಾಲದಲ್ಲಿ ಕೊಪ್ಪಳ ಜಿಲ್ಲಾಸ್ಪತ್ರೆಗೆ ಸೇರಿಸಿದರು.

ಹೊಸಪೇಟೆಯಿಂದ ಕುಕನೂರು ತಾಲೂಕಿನ ಯಡಿಯಾಪುರ ಗ್ರಾಮಕ್ಕೆ ದಂಪತಿ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ದ್ವಿಚಕ್ರ ವಾಹನ ಚಾಲಕ ಚಿದಾನಂದ, ಅವರ 6 ವರ್ಷದ ಪುತ್ರಿ ಈರಮ್ಮ ಗಾಯಗೊಂಡಿದ್ದಾರೆ. ಅವರ ಪತ್ನಿಗೆ ಯಾವುದೇ ಗಾಯವಾಗಿಲ್ಲ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ
ಹೋರಾಟಗಾರರ ಮೇಲಿನ ಎಲ್ಲ ಕೇಸ್ ಹಿಂಪಡೆಯಿರಿ