ಕನ್ನಡಪ್ರಭವಾರ್ತೆ ಸೋಮವಾರಪೇಟೆ
ಸೋಮವಾರಪೇಟೆ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಸಂದರ್ಭ ಅವರು ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನೀಡಿದ ಐದು ಜನಪರ ಗ್ಯಾರಂಟಿಗಳು ಪ್ರತಿ ಮನೆಗೂ ತಲುಪಿದ್ದು, ನುಡಿದಂತೆ ನಡೆದಿದ್ದೇವೆ ಎಂದು ಹೇಳಿದರು.ಕಾರ್ಯಕರ್ತರು ಪಕ್ಷದ ಪರವಾಗಿ ಪ್ರಚಾರ ಮಾಡುವಾಗ ದೇಶಕ್ಕಾಗಿ ಕಾಂಗ್ರೆಸ್ ಪಕ್ಷ ಕೊಟ್ಟ ಕೊಡುಗೆಗಳನ್ನು ಕುಟುಂಬದವರಿಗೆ ತಿಳಿಸಬೇಕು. ಬಿಜೆಪಿಯ ಭ್ರಷ್ಟ ಆಡಳಿತದ ಬಗ್ಗೆ ತಿಳಿಸಬೇಕು. ರೈತ, ಕಾರ್ಮಿಕ, ಬಡವರ ವಿರೋಧಿ ನೀತಿಯನ್ನು ಜನರಿಗೆ ತಲುಪಿಸಬೇಕು. ಈ ನಿಟ್ಟಿನಲ್ಲಿ ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ. ಬಿ. ಸತೀಶ್, ಮಾಜಿ ಎಂಎಲ್ಸಿ ವೀಣಾ ಅಚ್ಚಯ್ಯ, ಡಿಸಿಸಿ ಉಪಾಧ್ಯಕ್ಷ ಕೆ.ಎಂ.ಲೋಕೇಶ್, ನಗರ ಅಧ್ಯಕ್ಷ ಎಚ್.ಎ.ನಾಗರಾಜು, ಪ್ರಮುಖರಾದ ಶೀಲಾ ಡಿಸೋಜ, ಕೆ.ಎ.ಆದಂ, ಕೆ.ಎ.ಯಾಕೂಬ್, ಸುನಿಲ್, ಎಚ್.ಆರ್.ಸುರೇಶ್, ವಿ.ಎ.ಲಾರೇನ್ಸ್, ಬಿ.ಎನ್.ಬಸವರಾಜ್ ಇದ್ದರು.