ಮಿರಾಫ್ರಾ ಟೆಕ್ನಾಲಜೀಸ್‌-ಬಂಟಕಲ್ ಎಂಜಿನಿಯರಿಂಗ್ ಕಾಲೇಜ್ ಒಡಂಬಡಿಕೆ

KannadaprabhaNewsNetwork |  
Published : May 23, 2025, 12:10 AM IST
22ಬಂಟಕಲ್ಲು | Kannada Prabha

ಸಾರಾಂಶ

ಬಂಟಕಲ್‌ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗವು ಸೆಮಿಕಂಡಕ್ಟರ್ ವಿನ್ಯಾಸ ಸೇವೆಗಳು ಮತ್ತು ಎಂಬೆಡೆಡ್ ಸಾಫ್ಟ್‌ವೇರ್ ಅಭಿವೃದ್ಧಿಯಲ್ಲಿ ಪರಿಣತಿ ಹೊಂದಿರುವ ಬೆಂಗಳೂರಿನ ಮಿರಾಫ್ರಾ ಟೆಕ್ನಾಲಜಿಸ್ ಜೊತೆ ಒಡಂಬಡಿಕೆಗೆ ಸಹಿ ಹಾಕಿದೆ.

ಕನ್ನಡಪ್ರಭ ವಾರ್ತೆ ಕಾಪು

ಇಲ್ಲಿನ ಬಂಟಕಲ್‌ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗವು ಸೆಮಿಕಂಡಕ್ಟರ್ ವಿನ್ಯಾಸ ಸೇವೆಗಳು ಮತ್ತು ಎಂಬೆಡೆಡ್ ಸಾಫ್ಟ್‌ವೇರ್ ಅಭಿವೃದ್ಧಿಯಲ್ಲಿ ಪರಿಣತಿ ಹೊಂದಿರುವ ಬೆಂಗಳೂರಿನ ಮಿರಾಫ್ರಾ ಟೆಕ್ನಾಲಜಿಸ್ ಜೊತೆ ಒಡಂಬಡಿಕೆಗೆ ಸಹಿ ಹಾಕಿದೆ.

ಈ ಪಾಲುದಾರಿಕೆಯು ಶೈಕ್ಷಣಿಕ ಕಲಿಕೆ ಮತ್ತು ಉದ್ಯಮದ ಅವಶ್ಯಕತೆಗಳ ನಡುವಿನ ಅಂತರ ಕಡಿಮೆ ಮಾಡುವ ಗುರಿ ಹೊಂದಿದೆ ಹಾಗೂ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಮಾನ್ಯತೆಯನ್ನು ಒದಗಿಸಿ ಉದ್ಯೋಗಾವಕಾಶವನ್ನು ಹೆಚ್ಚಿಸುತ್ತದೆ. ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿ ಡಾ. ರಾಧಕೃಷ್ಣ ಐತಾಳ್ ಅವರ ಉಪಸ್ಥಿತಿಯಲ್ಲಿ ಮಿರಾಫ್ರಾ ಟೆಕ್ನಾಲಜೀಸ್ ಉಪಾಧ್ಯಕ್ಷ ವಿನೋದ್ ಜಾನ್ ಮತ್ತು ಸಂಸ್ಥೆಯ ಪ್ರಾಂಶುಪಾಲ ಡಾ. ತಿರುಮಲೇಶ್ವರ ಭಟ್ ಒಡಂಬಡಿಕೆಗೆ ಸಹಿ ಹಾಕಿದರು.ಈ ಒಪ್ಪಂದದಡಿಯಲ್ಲಿ, ಮಿರಾಫ್ರಾ ಟೆಕ್ನಾಲಜೀಸ್ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸಿ, ಅರ್ಹ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶಗಳನ್ನು ನೀಡುತ್ತದೆ ಹಾಗೂ ವಿದ್ಯಾರ್ಥಿಗಳಿಗೆ ಕೈಗಾರಿಕೆಗಳಿಗೆ ಭೇಟಿ ನೀಡಲು ಅವಕಾಶ ಕಲ್ಪಿಸುತ್ತದೆ. ಇದರಿಂದಾಗಿ ವಿದ್ಯಾರ್ಥಿಗಳು ಕೈಗಾರಿಕಾ ಅಭ್ಯಾಸಗಳ ಮತ್ತು ತಂತ್ರಜ್ಞಾನಗಳ ಅನುಭವವನ್ನು ಪಡೆಯಲು ಅನುಕೂಲವಾಗುತ್ತದೆ ಹಾಗೂ ವಿದ್ಯಾರ್ಥಿಗಳಿಗೆ ಇತ್ತೀಚಿನ ಉದ್ಯಮ ಪ್ರವೃತ್ತಿಗಳು ಮತ್ತು ಅಭ್ಯಾಸಗಳ ಬಗ್ಗೆ ಅಮೂಲ್ಯವಾದ ಒಳನೋಟಗಳನ್ನು ಒದಗಿಸುವ ನಿರೀಕ್ಷೆಯಿದೆ. ತಂತ್ರಜ್ಞಾನ ಮತ್ತು ಇಂಜಿನಿಯರಿಂಗ್‌ನಲ್ಲಿ ಯಶಸ್ವಿ ವೃತ್ತಿಜೀವನಕ್ಕೆ ಅವರನ್ನು ಸಿದ್ಧಪಡಿಸುತ್ತದೆ.ಮಿರಾಫ್ರಾ ಟೆಕ್ನಾಲಜೀಸ್, ಸೆಮಿಕಂಡಕ್ಟರ್ ಮತ್ತು ಎಂಬಡೆಡ್ ಸಿಸ್ಟಮ್ಸ್ ವಲಯಗಳಲ್ಲಿ ಹೆಚ್ಚು ಅನುಭವ ಹೊಂದಿದೆ, ಹೈದರಾಬಾದ್, ಚೆನ್ನೈ, ಪುಣೆ, ಯುನೈಟೆಡ್ ಸ್ಟೇಟ್ಸ್, ಸಿಂಗಾಪುರ ಮತ್ತು ಸ್ವೀಡನ್‌ನಲ್ಲಿ ಕಚೇರಿಗಳನ್ನು ಹೊದಿದೆ. ಕಂಪನಿಯು ಎಎಸ್‌ಐಸಿ ವಿನ್ಯಾಸಕ್ಕೆ ಹೆಸರುವಾಸಿಯಾಗಿದೆ ಮತ್ತು ವಿವಿಧ ಕೈಗಾರಿಕೆಗಳಲ್ಲಿ ನವೀನ ಪರಿಹಾರಗಳನ್ನು ನೀಡುವ ೧೦೦೦ ಕ್ಕೂ ಹೆಚ್ಚು ಇಂಜಿನಿಯರ್‌ಗಳ ತಂಡ ಹೊಂದಿದೆ.ಈ ಒಡಂಬಡಿಕೆಯ ಸಂದರ್ಭ ಉಪಪ್ರಾಂಶುಪಾಲ ಡಾ. ಗಣೇಶ್ ಐತಾಳ್, ಡೀನ್‌ಗಳು ಮತ್ತು ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಮುಖ್ಯಸ್ಥ ಅರುಣ್ ಉಪಾಧ್ಯಾಯ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ