ಕನ್ನಡಪ್ರಭವಾರ್ತೆ ಚಳ್ಳಕೆರೆ
ನಗರದ ಬಿಜೆಪಿ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಬಿಜೆಪಿ ಎಸ್ಟಿ ಮೋರ್ಚಾ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಪ್ರತಿಭಟನೆ ಬಗ್ಗೆ ಪೂರ್ವಸಿದ್ದತೆಯಲ್ಲಿ ಮಾತನಾಡಿದರು.
ವಿಪರ್ಯಾಸವೆಂದರೆ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಚುನಾಯಿತ ಕಾಂಗ್ರೆಸ್ ಸಚಿವರು, ಹಾಗೂ ಶಾಸಕರಿದ್ದರೂ ಇದರ ಬಗ್ಗೆ ಚಕಾರವೆತ್ತುತ್ತಿಲ್ಲ. ಕಳೆದ ಮೇ ತಿಂಗಳಲ್ಲಿ ಬಿಜೆಪಿಯ ನಿರಂತರ ಪ್ರತಿಭಟನೆಗೆ ಗಲಿಬಿಲಿಗೊಂಡು ಕಾಂಗ್ರೆಸ್ ಬಿ.ನಾಗೇಂದ್ರರವರ ರಾಜೀನಾಮೆ ಪಡೆಯಿತು. ಪರಿಶಿಷ್ಟ ವರ್ಗದ 187 ಕೋಟಿ ಹಣ ದುರುಪಯೋಗ ಹಿನ್ನೆಲೆ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬ್ಯಾಂಕ್ ಅಧಿಕಾರಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಸದ್ದಾರೆ. ಆದರೆ ಸಚಿವರಾಗಲಿ ಅಥವಾ ಸರ್ಕಾರವಾಗಲಿ ದುರುಪಯೋಗವಾದ ಬಗ್ಗೆ ಯಾವುದೇ ಸ್ವಷ್ಟ ಮಾಹಿತಿ ನೀಡುತ್ತಿಲ್ಲ. ಇವರ ಧನದಾಹಕ್ಕೆ ಎರಡೂ ಜನಾಂಗಗಳನ್ನು ಬಲಿಪಶು ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಜೂ.28ರ ಶುಕ್ರವಾರ ಅನುದಾನ ದುರುಪಯೋಗದ ಬಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.ಯುವ ಮುಖಂಡ ಕೆ.ಟಿ. ಕುಮಾರಸ್ವಾಮಿ ಮಾತನಾಡಿ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಲಜ್ಜೆಗೆಟ್ಟ ಸರ್ಕಾರವಾಗಿದೆ. ಇದುವರೆಗೂ ಸರ್ಕಾರದಿಂದ ಯಾವುದೇ ಅಭಿವೃದ್ದಿ ಕಾರ್ಯಗಳು ನಡೆದಿಲ್ಲ. ವಿಶೇಷವೆಂದರೆ ಎಲ್ಲಾ ಇಲಾಖೆಯಲ್ಲೂ ಹಣದ ಕೊರತೆ ಎದ್ದು ಕಾಣುತ್ತಿದೆ. ಸರ್ಕಾರದಲ್ಲಿ ಪಾರದರ್ಶಕತೆ ಮಾಯವಾಗಿದೆ. ಸಚಿವರು ಮತ್ತು ಶಾಸಕರು ತಮ್ಮ ವೈಯಕ್ತಿಕ ಹಿತಾಸಕ್ತಿ ಅನುಗುಣವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪರಿಶಿಷ್ಟ ವರ್ಗದ ಸುಮಾರು 15 ಶಾಸಕರಿದ್ದರೂ ಸರ್ಕಾರದ ವಿರುದ್ಧ ಮಾತನಾಡದೇ ಮೌನಕ್ಕೆ ಜಾರಿರುವುದು ಬೇಸರದ ಸಂಗತಿ ಎಂದರು.
೨೪ಸಿಎಲ್ಕೆ೧
ಚಳ್ಳಕೆರೆ ನಗರದ ಬಿಜೆಪಿ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಬಿಜೆಪಿ ಎಸ್ಟಿ ಮೋರ್ಚಾ ಪದಾಧಿಕಾರಿಗಳ ಸಭೆಯಲ್ಲಿ ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ಮಾತನಾಡಿದರು.