ಅಳ‍ಗವಾಡಿ, ಶಿರೂರು ಗ್ರಾಪಂನಲ್ಲಿ ಅವ್ಯವಹಾರ: ತನಿಖೆಗಾಗಿ ಲೋಕಾಕ್ಕೆ ಮನವಿ

KannadaprabhaNewsNetwork |  
Published : Aug 21, 2025, 01:00 AM IST
20ಎಚ್‌ಯುಬಿ34ನವಲಗುಂದ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಲೋಕಾಯುಕ್ತರು ಆಯೋಜಿಸಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ಅಳಗವಾಡಿ ಗ್ರಾಮಸ್ಥರು ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

15ನೇ ಹಣಕಾಸು ಯೋಜನೆಯಲ್ಲಿ ಗ್ರಾಮದ ಅಭಿವೃದ್ಧಿ ಹೆಸರಿನಲ್ಲಿ ಕೊಟ್ಯಂತರ ರುಪಾಯಿಗಳ ನಕಲಿ ಬಿಲ್‌ಗಳನ್ನು ಸೃಷ್ಠಿಸಲಾಗಿದೆ. ಗ್ರಾಪಂ ಅಧ್ಯಕ್ಷರು ಅಧಿಕಾರ ದುರ್ಬಳಕೆ ಮಾಡಿಕೊಂಡು ಸರ್ಕಾರಿ ಜಾಗವನ್ನು ತಮ್ಮ ಕುಟುಂಬಸ್ಥರ ಹೆಸರಿಗೆ ವರ್ಗಾಯಿಸಿಕೊಂಡಿದ್ದಾರೆ.

ನವಲಗುಂದ: ತಾಲೂಕಿನ ಅಳಗವಾಡಿ ಗ್ರಾಪಂನಲ್ಲಿ 15ನೇ ಹಣಕಾಸು ಯೋಜನೆಯಡಿ ಕೋಟ್ಯಾಂತರ ರುಪಾಯಿಗಳ ಅವ್ಯವಹಾರ ನಡೆದಿದೆ, ಗ್ರಾಪಂ ಅಧ್ಯಕ್ಷರು ಹಾಗೂ ಪಿಡಿಒಗಳು ಸೇರಿ ಸರ್ಕಾರಿ ಜಾಗೆಯನ್ನು ಅಧ್ಯಕ್ಷರ ಕುಟುಂಬದವರ ಹೆಸರಿಗೆ ಬದಲಾವಣೆ ಮಾಡಿದ್ದಾರೆಂದು ಆರೋಪಿಸಿ ಅಳಗವಾಡಿ ಗ್ರಾಮಸ್ಥರು ಬುಧವಾರ ಜಿಲ್ಲಾ ಲೋಕಾಯುಕ್ತ ಎಸ್ಪಿ ಎಸ್.ಟಿ. ಸಿದ್ಧಲಿಂಗಪ್ಪ ಅವರಿಗೆ ಮನವಿ ಸಲ್ಲಿಸಿದರು.

ಬುಧವಾರ ಇಲ್ಲಿನ ತಾಪಂ ಸಭಾಭವನದಲ್ಲಿ ಜಿಲ್ಲಾ ಲೋಕಾಯುಕ್ತ ಪೊಲೀಸರು ಆಯೋಜಿಸಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ದೂರು ಸಲ್ಲಿಸಿದ ಅಳಗವಾಡಿ ಗ್ರಾಮಸ್ಥರು ಈ ಕುರಿತಾಗಿ ಜಿಪಂ ಸಿಇಒ, ತಾಪಂ ಇಒ ಹಾಗೂ ತಹಸೀಲ್ದಾರರಿಗೆ ಹಲವಾರು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.

15ನೇ ಹಣಕಾಸು ಯೋಜನೆಯಲ್ಲಿ ಗ್ರಾಮದ ಅಭಿವೃದ್ಧಿ ಹೆಸರಿನಲ್ಲಿ ಕೊಟ್ಯಂತರ ರುಪಾಯಿಗಳ ನಕಲಿ ಬಿಲ್‌ಗಳನ್ನು ಸೃಷ್ಠಿಸಲಾಗಿದೆ. ಗ್ರಾಪಂ ಅಧ್ಯಕ್ಷರು ಅಧಿಕಾರ ದುರ್ಬಳಕೆ ಮಾಡಿಕೊಂಡು ಸರ್ಕಾರಿ ಜಾಗವನ್ನು ತಮ್ಮ ಕುಟುಂಬಸ್ಥರ ಹೆಸರಿಗೆ ವರ್ಗಾಯಿಸಿಕೊಂಡಿದ್ದಾರೆಂದು ಆರೋಪಿಸಿದ ಗ್ರಾಮಸ್ಥರು ಶೀಘ್ರ ತನಿಖೆ ನಡೆಸುವಂತೆ ಮನವಿ ಮಾಡಿದರು.

ಶಿರೂರು ಗ್ರಾಪಂ ವ್ಯಾಪ್ತಿಯ ಆಹೆಟ್ಟಿ ಗ್ರಾಮಸ್ಥರು 2021ರಿಂದ ಗ್ರಾಪಂನಲ್ಲಿ ನಡೆದ ಅವ್ಯವಹಾರ ತನಿಖೆ ನಡೆಸುವಂತೆ ಮನವಿ ಸಲ್ಲಿಸಿದರು.

ಮನವಿಗೆ ಸ್ಪಂದಿಸಿದ ಲೋಕಾಯುಕ್ತರು ಈ ಕುರಿತಾಗಿ ಸೂಕ್ತ ತನಿಖೆ ನಡೆಸಿ ಕೂಡಲೇ ವರದಿ ಸಲ್ಲಿಸುವಂತೆ ತಾಪಂ ಇಒ ಭಾಗ್ಯಶ್ರೀ ಜಹಗೀರದಾರ ಅವರಿಗೆ ಸೂಚಿಸಿದರು.

ನಂತರ ತಾಲೂಕಿನ ನಾನಾ ಇಲಾಖೆಯಲ್ಲಿನ ಅಭಿವೃದ್ಧಿ ಕೆಲಸಗಳ ಕುರಿತಾಗಿ ಅಧಿಕಾರಿಗಳಿಂದ ಲೋಕಾಯುಕ್ತರು ಮಾಹಿತಿ ಪಡೆದರಲ್ಲದೇ ದಿನಪತ್ರಿಕೆಗಳಲ್ಲಿ ಬರುವ ದೂರುಗಳನ್ನು ಸಂಬಂಧಿಸಿದ ಅಧಿಕಾರಿಗಳು ನಿರ್ಲಕ್ಷ ಮಾಡಿದಲ್ಲಿ ಲೋಕಾಯುಕ್ತದಲ್ಲಿ ಸ್ವಯಂಪ್ರೇರಣೆಯಿಂದ ದೂರು ದಾಖಲಿಸಿಕೊಳ್ಳುವುದಾಗಿ ಎಚ್ಚರಿಸಿದರು.

ಲೋಕಾಯುಕ್ತ ಡಿ.ಎಸ್.ಪಿ ಬಿ.ಎನ್. ಪಾಟೀಲ್, ಸಿಪಿಐ ಪ್ರಸಾದ ಪನೇಕರ, ತಹಸೀಲ್ದಾರ್ ಸುಧೀರ ಸಾಹುಕಾರ, ತಾಪಂ ಇಒ ಭಾಗ್ಯಶ್ರೀ ಜಹಗೀರದಾರ ಹಾಗೂ ಲೋಕಾಯುಕ್ತ ಸಿಬ್ಬಂದಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನರೇಗಾ ಮರುಜಾರಿವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ
ಡ್ರಗ್ಸ್‌ ವಿರುದ್ಧ ಸಿಎಂ ತವರಿಂದಲೇ ಹೋರಾಟ : ವಿಜಯೇಂದ್ರ