ಸೋಲದೇವನಹಳ್ಳಿ ನ್ಯಾಯಬೆಲೆ ಅಂಗಡಿ ಅವ್ಯವಸ್ಥೆ

KannadaprabhaNewsNetwork |  
Published : Aug 31, 2026, 02:00 AM IST
ಪೋಟೋ 9 : ನೆಲಮಂಗಲ ತಾಲ್ಲೂಕಿನ ಸೋಲದೇವನಹಳ್ಳಿ ಗ್ರಾಮದ ಸರ್ಕಾರಿ ನ್ಯಾಯಬೆಲೆ ಅಂಗಡಿಗೆ ಸಾರ್ವಜನಿಕರ ದೂರು ಬಂದ ಹಿನ್ನೆಲೆಯಲ್ಲಿ ತಾಲೂಕು ಆಹಾರ ನಿರೀಕ್ಷಕ ಜೈಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು | Kannada Prabha

ಸಾರಾಂಶ

ದಾಬಸ್‍ಪೇಟೆ: ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಸರ್ಕಾರಿ ನ್ಯಾಯಬೆಲೆ ಅಂಗಡಿ ಸಂಖ್ಯೆ-19ರಲ್ಲಿ ಅವ್ಯವಸ್ಥೆ ಹಾಗೂ ನಿಯಮ ಉಲ್ಲಂಸುತ್ತಿದ್ದು, ನ್ಯಾಯಬೆಲೆ ಅಂಗಡಿಯ ಆಹಾರ ವಿತರಕ ನರಸೇಗೌಡ ಪಡಿತರಕ್ಕಾಗಿ ಆಗಮಿಸುವುದರಿಂದ ಮುಂಚಿತವಾಗಿಯೇ ಬಯೋಮೆಟ್ರಿಕ್ ಪಡೆದುಕೊಂಡು ಬಳಿಕ ಆಹಾರ ಧಾನ್ಯ ವಿತರಿಸಲು ವಿಳಂಬ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ

ದಾಬಸ್‍ಪೇಟೆ: ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಸರ್ಕಾರಿ ನ್ಯಾಯಬೆಲೆ ಅಂಗಡಿ ಸಂಖ್ಯೆ-19ರಲ್ಲಿ ಅವ್ಯವಸ್ಥೆ ಹಾಗೂ ನಿಯಮ ಉಲ್ಲಂಸುತ್ತಿದ್ದು, ನ್ಯಾಯಬೆಲೆ ಅಂಗಡಿಯ ಆಹಾರ ವಿತರಕ ನರಸೇಗೌಡ ಪಡಿತರಕ್ಕಾಗಿ ಆಗಮಿಸುವುದರಿಂದ ಮುಂಚಿತವಾಗಿಯೇ ಬಯೋಮೆಟ್ರಿಕ್ ಪಡೆದುಕೊಂಡು ಬಳಿಕ ಆಹಾರ ಧಾನ್ಯ ವಿತರಿಸಲು ವಿಳಂಬ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ತಿಂಗಳಿಗೆ ಅವರಿಗೆ ಬೇಕಾದ 2-3 ದಿನ ಮಾತ್ರ ನ್ಯಾಯ ಬೆಲೆ ಅಂಗಡಿ ತೆರೆಯುತ್ತಿದ್ದು ಅವರು ಅಂಗಡಿ ತೆರೆದಾಗ ಕಾಯ್ದು ಸಾರ್ವಜನಿಕರು ಆಹಾರ ಧಾನ್ಯ ಪಡೆಯುವ ಅನಿವಾರ್ಯತೆ ಬಂದಿದೆ. ಸರ್ಕಾರ ನ್ಯಾಯಬೆಲೆ ಅಂಗಡಿ ದಿನ ನಿತ್ಯ ಸರಿಯಾದ ಸಮಯಕ್ಕೆ ತೆರೆಯಲು ಆದೇಶ ಮಾಡಿದ್ದರೂ ಸರ್ಕಾರದ ಆದೇಶಕ್ಕೆ ಬೆಲೆ ಇಲ್ಲದಂತಾಗಿದೆ. ಇದರಿಂದ ಪಡಿತರ ಪಡೆಯಲು ಬರುವ ಸಾರ್ವಜನಿಕರು ಪದೇಪದೇ ಅಂಗಡಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಬಯೋಮೆಟ್ರಿಕ್ ಪಡೆದ ಬಳಿಕವೂ ಪಡಿತರ ವಿತರಣೆಗೆ ವಿಳಂಬ ಮಾಡುತ್ತಿರುವ ಕುರಿತು ಸಾರ್ವಜನಿಕರು ಪ್ರಶ್ನಿಸಿದರೆ, ವಿತರಕರ ಕುಟುಂಬದ ಸದಸ್ಯರ ಮೂಲಕ ಪ್ರಶ್ನಿಸುವವರಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

ದೂರು ನೀಡಲೂ ಹಿಂದೇಟು:

ನ್ಯಾಯಬೆಲೆ ಅಂಗಡಿಯಲ್ಲಿನ ಸಮಸ್ಯೆಗಳ ಕುರಿತು ಹಲವು ಬಾರಿ ಆಹಾರ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಸೂಕ್ತ ಕ್ರಮ ಕೈಗೊಳ್ಳುವ ಬದಲು ರಾಜೀ ಸಂಧಾನದ ಮೂಲಕ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಾಗಿದೆ. ಇದೀಗ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಆಹಾರ ವಿತರಕ ಹಾಗೂ ಅವರ ಕುಟುಂಬದವರಿಂದ ತೊಂದರೆಯಾಗಬಹುದು ಎಂಬ ಭೀತಿಯಿಂದ ಕೆಲ ಸಾರ್ವಜನಿಕರು ಇಲಾಖೆಗೆ ಅಧಿಕೃತ ದೂರು ನೀಡಲು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಆಹಾರ ನಿರೀಕ್ಷಕ ಭೇಟಿ:

ಸ್ಥಳೀಯರಿಂದ ಬಂದ ದೂರಿನ ಹಿನ್ನೆಲೆಯಲ್ಲಿ ತಾಲೂಕು ಆಹಾರ ನಿರೀಕ್ಷಕ ಜೈಕುಮಾರ್ ಅವರು ಸೋಲದೇವನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ನ್ಯಾಯಬೆಲೆ ಅಂಗಡಿಯ ಕಾರ್ಯವೈಖರಿ ಕುರಿತು ಪರಿಶೀಲಿಸಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು ಬಯೋಮೆಟ್ರಿಕ್ ಪಡೆದು ಹಲವು ದಿನಗಳ ಬಳಿಕ ಪಡಿತರ ನೀಡಲಾಗುತ್ತಿದೆ ಹಾಗೂ ಈ ಬಗ್ಗೆ ಪ್ರಶ್ನಿಸುವವರಿಗೆ ಬೆದರಿಕೆ ಹಾಕಲಾಗುತ್ತಿದೆ ಎಂದು ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.

ಪೋಟೋ 9 :

ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಸರ್ಕಾರಿ ನ್ಯಾಯಬೆಲೆ ಅಂಗಡಿಗೆ ಸಾರ್ವಜನಿಕರ ದೂರು ಬಂದ ಹಿನ್ನೆಲೆಯಲ್ಲಿ ತಾಲೂಕು ಆಹಾರ ನಿರೀಕ್ಷಕ ಜೈಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಹವಾಲು ಆಲಿಸಿ ಪರಿಹಾರ ಸೂಚಿಸಿದ ಸಚಿವ ಬಸವಂತಪ್ಪ
ಸುಸ್ಥಿತಿಯ ಕಾಂಪೌಂಡ್ ಕೆಡವಿ, ಮರುನಿರ್ಮಾಣಕ್ಕೆ ತಡೆ