- ಸಂಬಂಧಿಸಿದವರ ಮೇಲೆ ಎಫ್ಐಆರ್ ದಾಖಲಿಸಲು ರೈತ ಸಂಘಟನೆಗಳ ಬಿಗಿಪಟ್ಟುಕನ್ನಡಪ್ರಭ ವಾರ್ತೆ, ಕಡೂರು
ಕಲ್ಕೆರೆ ಗ್ರಾಪಂ ಈ ಹಿಂದಿನ ವಿ.ಎ. ಪಾಲಾಕ್ಷಪ್ಪ,ಕಂಪ್ಯೂಟರ್ ಆಪರೇಟರ್ ಮಲ್ಲಿಕಾರ್ಜುನ್ ಮತ್ತು 4 ಜನ ಮಧ್ಯವರ್ತಿಗಳು ಸೇರಿ ಪರಿಹಾರದ ಕೋಟ್ಯಂತರ ರು. ವಂಚಿಸಿ ಬೇರೆಯವರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಪ್ರತಿಭಟನಕಾರರು ಆರೋಪಿಸಿದರು.
ಪ್ರಕರಣ ಬೆಳಕಿಗೆ ಬಂದು ಒಂದೂವರೆ ತಿಂಗಳಾದರೂ ಜಿಲ್ಲಾ , ತಾಲೂಕು ಆಡಳಿತಾಧಿಕಾರಿಗಳು ರಾಜಕೀಯ ವ್ಯಕ್ತಿಗಳ ಮಾತಿಗೆ ಮನ್ನಣೆ ನೀಡಿ ಇದುವರೆಗೂ ಯಾರೊಬ್ಬರನ್ನು ಬಂಧಿಸದೇ ಕಾಲಹರಣ ಮಾಡುತ್ತಿದ್ದಾರೆ. ಶುಕ್ರವಾರ ಕಲ್ಕೆರೆ ಯಿಂದ ಕಡೂರು ತಹಸೀಲ್ದಾರ್ ಕಚೇರಿಗೆ ಮಧ್ಯರಾತ್ರಿ ಬಂದು ಧರಣಿ ನಡೆಸುತ್ತಿದ್ದೇವೆ. ಈ ವರೆವಿಗೂ ಯಾರೊಬ್ಬ ಅಧಿಕಾರಿ ಬಂದು ಮಾತನಾಡಿಸಿಲ್ಲ ಎಂದು ಜಿಲ್ಲಾ ರೈತ ಸಂಘದ ಅಧ್ಯಕ್ಷ ಬಿ.ಎಚ್.ರವಿ, ಫಯಾಜ್ ಹಾಗೂ ಪ್ರದೀಪ್ ಆಕ್ರೋಶ ವ್ಯಕ್ತಪಡಿಸಿದರು.ಸುಮಾರು 4 ಗಂಟೆಗೆ ತರೀಕೆರೆ ಉಪ ವಿಭಾಗಾಧಿಕಾರಿ ಡಾ.ಕಾಂತರಾಜ್ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ತನಿಖೆ ಸಾಗಿದ್ದು ಈಗಾಗಲೇ 940 ಪ್ರಕರಣ ಗುರುತಿಸಿದೆ. ಅಕ್ರಮ ಹಣ ವರ್ಗಾವಣೆಯಾಗಿರುವುದು ಕಂಡು ಬಂದಿದೆ. ಯಾರ ಹಣ ಯಾರಿಗೆ ಹೋಗಿದೆ, ಯಾರಿಗೆ ನ್ಯಾಯವಾಗಿ ಹೋಗಬೇಕಾಗಿತ್ತು ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದು ಇನ್ನು 3 ದಿನಗಳಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಲಿದ್ದೇವೆ ಎಂದು ತಿಳಿಸುತ್ತಿದ್ದಂತೆ ಪ್ರತಿಭಟನಕಾರರು ನಾವು ಇದನ್ನು ಒಪ್ಪುವುದಿಲ್ಲ. ಕೂಡಲೆ ಅವರನ್ನು ಅಮಾನತು ಮಾಡಿ ಆದೇಶ ನೀಡಬೇಕು ಹಾಗೂ ತಪ್ಪಿತಸ್ಥರನ್ನು ರಕ್ಷಿಸುವ ಕೆಲಸ ಅಧಿಕಾರಿಗಳು ಮಾಡುತ್ತಿದ್ದಾರೆ. ತಪ್ಪಿತಸ್ಥರ ಹೆಸರನ್ನು ನಾವೇ ಹೇಳುತ್ತೇವೆ. ಕೂಡಲೇ ಅವರನ್ನು ಬಂಧಿಸಿ ಎಂದರು.
ಭ್ರಷ್ಟ ಅಧಿಕಾರಿಗಳಿಗೆ ಧಿಕ್ಕಾರ ಎಂದು ರೈತರು ಕೂಗುತ್ತಾ , ಸ್ಥಳಕ್ಕೆ ಜಿಲ್ಲಾಧಿಕಾರಿಗಳೇ ಬಂದು ತಪ್ಪಿತಸ್ಥರ ಅಮಾನತು ಮಾಡಲು ಆಗ್ರಹಿಸಿ ಧರಣಿ ಮುಂದುವರೆಸಿದರು.
---ಬಾಕ್ಸ್ ---ಕಲ್ಕೆರೆಯಿಂದ ಶುಕ್ರವಾರ ರಾತ್ರಿ 52 ಕಿ.ಮೀ ಪಾದಯಾತ್ರೆ ನಡೆಸಿ ಕಡೂರು ತಾಲೂಕು ಕಚೇರಿಗೆ ರಾತ್ರಿ 11 ಗಂಟೆಗೆ ಬಂದರೆ ಇಲ್ಲಿ ಯಾರೂ ನಮ್ಮನ್ನು ಕೇಳಲಿಲ್ಲ ಎಂದು ರೈತರು ಬೇಸರ ವ್ಯಕ್ತಪಡಿಸಿದರು.
3ಕೆಕೆಡಿಯು2.
3ಕೆಕೆಡಿಯು2ಎ.