ಕನ್ನಡಪ್ರಭ ವಾರ್ತೆ ಬೀದರ್
ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುಜಿಸಿ ವೇತನ ಪಡೆಯುವ ಉಪನ್ಯಾಸಕರು, ಡಿಸಿಸಿ ಬ್ಯಾಂಕ್ ಹಾಗೂ ಪಿಕೆಪಿಎಸ್ನ ಕಾರ್ಯದರ್ಶಿಗಳನ್ನು ತಮ್ಮ ಚುನಾವಣಾ ಕಾರ್ಯದಲ್ಲಿ ಬಳಸಿಕೊಳ್ಳುತಿದ್ದಾರೆ. ಆದರೆ ಜಿಲ್ಲಾಧಿಕಾರಿಗಳು ಇದರಲ್ಲಿ ಯಾರು ಶಾಮಿಲಾಗಿಲ್ಲ ಎಂದು ಸಮಜಾಯುಷಿ ನೀಡಿದ್ದರು. ಆದರೆ ಸೋಮವಾರ ನಾಲ್ವರು ಪಿಕೆಪಿಎಸ್ ಅಧಿಕಾರಿಗಳು ಅಮಾನತು ಮಾಡುವ ಮೂಲಕ ಖಂಡ್ರೆ ಅಧಿಕಾರ ದುರ್ಬಳಕೆ ಮಾಡಿದ್ದು ಸಾಕ್ಷಿಯಾಗಿದೆ ಎಂದರು.
ಶರಣು ಮೋದಿ ಬಗ್ಗೆ ಚಕಾರವೆತ್ತುತ್ತಿಲ್ಲ:ಅಧಿಕಾರದಲ್ಲಿದ್ದು ಲೂಟಿ ಮಾಡಿದ ಹಣದಿಂದ ಚುನಾವಣೆ ಎದುರಿಸುತ್ತಿದ್ದಾರೆ. ಡಿಸಿಸಿ ಬ್ಯಾಂಕ್ ಮೇಲೆ ದಾಳಿ ನಡೆದಾಗ ಕಲಬುರಗಿಯಲ್ಲಿ ಶರಣು ಮೋದಿಯವರನ್ನು ಪಕ್ಕಗೆ ಕೂಡಿಸಿಕೊಂಡು ಪತ್ರಿಕಾಗೋಷ್ಠಿ ನಡೆಸಿದ್ದರು. ಆದರೆ ಈಗ ಅದೇ ಶರಣು ಮೋದಿ 2 ಕೋಟಿ ಹಣದೊಂದಿಗೆ ಸಿಕ್ಕಿ ಬಿದ್ದಿದ್ದು ಆ ಹಣ ಕೂಡ ಖಂಡ್ರೆ ಅವರದ್ದು ಎಂದು ಹೇಳಲಾಗಿದೆ. ಭ್ರಷ್ಟಾಚಾರದಲ್ಲಿ ಮುಳುಗಿದ ಖಂಡ್ರೆ ಕುಟುಂಬ ಶರಣು ಮೋದಿ ಬಗ್ಗೆ ಚಕಾರ ಎತ್ತಿಲ್ಲ. ಅಲ್ಲದೇ ನೇಹಾ ಹಿರೇಮಠ ವಿಷಯದಲ್ಲಿ ಇಲ್ಲಿಯವರೆಗೆ ಬಾಯಿ ಬಿಚ್ಚಿಲ್ಲ ಏಕೆ ಎಂದು ಖೂಬಾ ಪ್ರಶ್ನಿಸಿದರು.
ಕಾಂಗ್ರೆಸ್ ಅಭ್ಯರ್ಥಿ ಸೋಲು ಖಚಿತ: ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನವಾಗುವುದು ಗ್ಯಾರಂಟಿ, ಬೀದರ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನ ಅಮರ ಖಂಡ್ರೆ ಕಳೆದುಕೊಳ್ಳುವುದು ಪಕ್ಕಾ. ಮತ್ತೆ ಉಮಾಕಾಂತ ನಾಗಮಾರಪಳ್ಳಿ ಅವರೆ ಬ್ಯಾಂಕ್ನ ಅಧ್ಯಕ್ಷರಾಗುವುದು ಗ್ಯಾರಂಟಿ ಎಂದ ಅವರು, ಎಷ್ಟೇ ಪ್ರಯತ್ನಪಟ್ಟರೂ ಕನಿಷ್ಠ 3 ಲಕ್ಷ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸುವುದು ಗ್ಯಾರಂಟಿ ಎಂದರು.
ಪತ್ರಿಕಾ ಗೋಷ್ಠಿಯಲ್ಲಿ ಬಿಜೆಪಿ ಕಲಬುರಗಿ ವಿಭಾಗೀಯ ಸಹ ಪ್ರಭಾರಿ ಈಶ್ವರಸಿಂಗ್ ಠಾಕೂರ್, ಮಾಜಿ ಬೂಡಾ ಅಧ್ಯಕ್ಷ ಬಾಬುವಾಲಿ, ನಗರಸಭೆ ಸದಸ್ಯ ಶಶಿ ಹೊಸಳ್ಳಿ, ಪಕ್ಷದ ಸಹ ವಕ್ತಾರ ಬಸವರಾಜ ಪವಾರ, ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಜ್ಯ ಕಾರ್ಯಾಧ್ಯಕ್ಷ ಫರ್ನಾಂಡಿಸ್ ಹಿಪ್ಪಳಗಾಂವ, ದಯಾನಂದ, ಸ್ವಾಮಿದಾಸ ಕೆಂಪೆನೋರ್ ಸೇರಿದಂತೆ ಅನೇಕರು ಇದ್ದರು.