ಜಗಳೂರು ತಾಲೂಕಲ್ಲಿ ಸರ್ಫೇಸಿ ಕಾಯ್ದೆ ದುರುಪಯೋಗ: ಶೀಘ್ರ ಪ್ರತಿಭಟನೆ

KannadaprabhaNewsNetwork |  
Published : Sep 03, 2025, 01:00 AM IST
02 ಜೆ.ಜಿ.ಎಲ್.1 . ಜಗಳೂರು ಪಟ್ಟಣದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರಾಜು ಇತರರು ಮಾತನಾಡಿದರು. | Kannada Prabha

ಸಾರಾಂಶ

ಎನ್‌ಬಿಎಫ್‌ಸಿ ಬ್ಯಾಂಕ್‌ಗಳು ಸರ್ಫೇಸಿ ಕಾಯ್ದೆ ದುರುಪಯೋಗ ಮಾಡಿಕೊಳ್ಳುತ್ತಿವೆ. ಇಂತಹ ಕಾಯ್ದೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೂಕ್ತ ರೀತಿಯಲ್ಲಿ ಬದಲಾವಣೆ ಮಾಡಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಹುಚ್ಚವ್ವನಹಳ್ಳಿ ಮಂಜುನಾಥ ಬಣದಿಂದ ಶನಿವಾರ ಜಗಳೂರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ರೈತ ಸಂಘದ ಪ್ರಧಾನ ಕಾರ್ಯದರ್ಶಿ ರಾಜು ಹೇಳಿದ್ದಾರೆ.

- ಸರ್ಕಾರಗಳು ಕಾಯ್ದೆಯಲ್ಲಿ ಬದಲಾವಣೆ ತರಲಿ: ರಾಜು

- - -

ಕನ್ನಡಪ್ರಭ ವಾರ್ತೆ ಜಗಳೂರು

ಎನ್‌ಬಿಎಫ್‌ಸಿ ಬ್ಯಾಂಕ್‌ಗಳು ಸರ್ಫೇಸಿ ಕಾಯ್ದೆ ದುರುಪಯೋಗ ಮಾಡಿಕೊಳ್ಳುತ್ತಿವೆ. ಇಂತಹ ಕಾಯ್ದೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೂಕ್ತ ರೀತಿಯಲ್ಲಿ ಬದಲಾವಣೆ ಮಾಡಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಹುಚ್ಚವ್ವನಹಳ್ಳಿ ಮಂಜುನಾಥ ಬಣದಿಂದ ಶನಿವಾರ ಜಗಳೂರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ರೈತ ಸಂಘದ ಪ್ರಧಾನ ಕಾರ್ಯದರ್ಶಿ ರಾಜು ಹೇಳಿದರು.

ಪಟ್ಟಣದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಗಳೂರು ತಾಲೂಕಿನ ಪಾಲನಾಯಕನಕೋಟೆ, ಮಿನುಗರಹಳ್ಳಿ ಸೇರಿದಂತೆ ವಿವಿಧ ಹಳ್ಳಿಗಳಲ್ಲಿ ಕೆಲವು ರೈತರ ಮೇಲೆ ಎನ್‌ಬಿಎಫ್‌ಸಿ ಬ್ಯಾಂಕ್‌ಗಳು ಸಾಲ ನೀಡಿ, ಸಾಲ ನೀಡಿದವರ ಮೇಲೆ ಸರ್ಫೇಸಿ ಕಾಯ್ದೆ ದುರುಪಯೋಗ ಮಾಡಿಕೊಳ್ಳುತ್ತಿವೆ. ದೌರ್ಜನ್ಯ ಮಾಡುತ್ತಿರುವುದು ಸಹ ಕಂಡುಬಂದಿದೆ ಎಂದರು.

ಕೂಲಿ ಕಾರ್ಮಿಕರಿಗೆ ಹೊಸಮನೆ ನಿರ್ಮಿಸಲು, ಹಳೇ ಮನೆ ಮೇಲೆ ಎನ್‌ಬಿಎಫ್‌ಸಿ ಬ್ಯಾಂಕ್‌ಗಳು ಸಾಲ ನೀಡುತ್ತಿವೆ. ಈ ಸಾಲ ನೀಡುವಾಗ ಎಲ್ಲ ಖಾಲಿ ಇರುವ ಫಾರಂಗಳ ಮೇಲೆ ಸಹಿ ಮಾಡಿಸಿಕೊಂಡು ಬ್ಯಾಂಕ್‌ಗಳು ದುರುಪಯೋಗ ಮಾಡಿಕೊಳ್ಳುತ್ತಿವೆ ಎಂದು ಆರೋಪಿಸಿದರು.

ಸರ್ಫೇಸ್ ಕಾಯ್ದೆಯಲ್ಲಿ ಬದಲಾವಣೆ ತರಬೇಕು ಅಥವಾ ಕಾನೂನಿನಲ್ಲಿ ಸಾಲಗಾರನಿಗೂ ಅವಕಾಶ ಇರುವಂತೆ ಉಪ ಕಾಯ್ದೆ ತರಬೇಕು. ಇಲ್ಲವಾದರೆ ಬ್ರಿಟಿಷರು ಮಾಡಿರುವ ಇಂತಹ ಕಾನೂನನ್ನು ಮೊದಲು ಸಂಪೂರ್ಣ ತೆಗೆದು ಹಾಕಬೇಕು. ಈ ಬ್ಯಾಂಕುಗಳು ದಾವಣಗೆರೆ ಜಿಲ್ಲಾ, ತಾಲೂಕು ನ್ಯಾಯಾಲಯಗಳಲ್ಲಿ ಗ್ರಾಹಕರ ವಿರುದ್ಧ ದಾವೆ ಹಾಕದೇ, ತಮಿಳುನಾಡು, ಮಹಾರಾಷ್ಟ್ರ ಸೇರಿದಂತೆ ಹೀಗೆ ಬೇರೆ ಬೇರೆ ಕಡೆಗಳಲ್ಲಿ ದಾವೆ ಹಾಕಿ, ರೈತರಿಗೆ ಅಲೆದಾಡಿಸುತ್ತವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಉಪಾಧ್ಯಕ್ಷ ಗುರುಸಿದ್ದಪ್ಪ, ತಾಲೂಕು ಹಸಿರು ಸೇನೆ ಅಧ್ಯಕ್ಷ ನಾಗಪ್ಪ, ಪದಾಧಿಕಾರಿಗಳಾದ ಕ್ಯಾಸನಹಳ್ಳಿ ಬಸಣ್ಣ, ವೀರೇಶ್, ಬೈರನಾಯ್ಕನಹಳ್ಳಿ ಅಂಜಿನಪ್ಪ, ರಾಜಣ್ಣ ಮತ್ತಿತರರು ಇದ್ದರು.

- - -

-02ಜೆ.ಜಿ.ಎಲ್.1:

PREV

Recommended Stories

ಉತ್ಪನ್ನ ಗುಣಮಟ್ಟ ಹೆಚ್ಚಿಸಿ ರಫ್ತು ಏರಿಸಿ: ರೆಡ್ಡಿ
ಪ್ಯಾರಾ ಥ್ರೋ ಬಾಲ್: ರಾಜ್ಯ ಮಹಿಳಾ ತಂಡಕ್ಕೆ ಟ್ರೋಫಿ