ವಿಶೇಷ ಪಾಸ್ ದುರುಪಯೋಗ: ಶಾಸಕ ತರಾಟೆ

KannadaprabhaNewsNetwork |  
Published : Sep 03, 2026, 03:00 AM IST
ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ನಡೆಯಿತು | Kannada Prabha

ಸಾರಾಂಶ

ಮಡಿಕೇರಿ ಕ್ಷೇತ್ರ ಶಾಸಕರ ವಿಧಾನಸೌಧ ಪ್ರವೇಶಕ್ಕೆ ಸಂಬಂಧಿಸಿದಂತೆ ವಿಶೇಷ ಪಾಸ್ ದುರುಪಯೋಗ ಮಾಡಿರುವ ಬಗ್ಗೆ ಶಾಸಕ ಡಾ ಮಂತರ್ ಗೌಡ ವ್ಯಕ್ತಿ ಒಬ್ಬನನ್ನು ತರಾಟೆಗೆ ತೆಗೆದುಕೊಂಡ ಘಟನೆ ಬೆಳಕಿಗೆ ಬಂದಿದೆ.

ಕುಶಾಲನಗರ : ಮಡಿಕೇರಿ ಕ್ಷೇತ್ರ ಶಾಸಕರ ವಿಧಾನಸೌಧ ಪ್ರವೇಶಕ್ಕೆ ಸಂಬಂಧಿಸಿದಂತೆ ವಿಶೇಷ ಪಾಸ್ ದುರುಪಯೋಗ ಮಾಡಿರುವ ಬಗ್ಗೆ ಶಾಸಕ ಡಾ ಮಂತರ್ ಗೌಡ ವ್ಯಕ್ತಿ ಒಬ್ಬನನ್ನು ತರಾಟೆಗೆ ತೆಗೆದುಕೊಂಡ ಘಟನೆ ಬೆಳಕಿಗೆ ಬಂದಿದೆ.

ಮಡಿಕೇರಿ ಕ್ಷೇತ್ರದ ಶಾಸಕರ ವಿಶೇಷ ಪಾಸ್ ಅನ್ನು ಬೆಂಗಳೂರಿನ ವ್ಯಕ್ತಿ ಒಬ್ಬ ತನ್ನ ಕಾರಿಗೆ ಅಳವಡಿಸಿ ವಿಧಾನಸೌಧಕ್ಕೆ ಪ್ರವೇಶ ಮಾಡಿರುವ ಬಗ್ಗೆ ಮಾಹಿತಿ ತಿಳಿದ ತಕ್ಷಣ ವ್ಯಕ್ತಿಯನ್ನು ಪತ್ತೆಹಚ್ಚಿ ಆತನನ್ನು ದೂರವಾಣಿ ಮೂಲಕ ಸಂಪರ್ಕಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಕೂಡಲೇ ಪಾಸ್ ವಾಹನದಿಂದ ತೆರವುಗೊಳಿಸಿ ಸಂಬಂಧಿಸಿದವರಿಗೆ ಹಿಂತಿರುಗಿಸುವಂತೆ ಸೂಚನೆ ನೀಡಿದ್ದಾರೆ.

ಹುಂಡೈ ನೂತನ ಕಾರಿನಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಸಂಖ್ಯೆಯನ್ನು ಒಳಗೊಂಡ ಪಾಸ್ ಕಂಡ ವಿಧಾನಸೌಧ ಭದ್ರತಾ ಸಿಬ್ಬಂದಿ ತಕ್ಷಣ ಮಂತರ್ ಗೌಡ ಅವರ ಗಮನಕ್ಕೆ ತಂದಿದ್ದಾರೆ.

ಈ ಬಗ್ಗೆ ಕುಶಾಲನಗರದಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಶಾಸಕರು ಪಾಸ್ ದುರುಪಯೋಗ ಮಾಡಿರುವ ಪ್ರಕರಣವನ್ನು ಸ್ಪೀಕರ್ ಗಮನಕ್ಕೆ ತರುವುದಾಗಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೂ ಕ್ರಮವಿಲ್ಲ
ಅಭಿವೃದ್ಧಿ ಪ್ರವರ್ತಕ ಮುರುಗೇಶ ನಿರಾಣಿಗೆ 61ರ ಸಂಭ್ರಮ