ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ನಡೆದ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.
ರೈತ ದೇಶದ ಬೆನ್ನುಲುಬು ಅದೇ ರೀತಿ ಕಾರ್ಮಿಕನೂ ಸಹ ದೇಶದ ಬೆನ್ನೆಲುಬಾಗಿದ್ದಾನೆ. ರೈತ ತನ್ನ ಪಾಲಿನ ಕೆಲಸ ಮಾಡದಿದ್ದರೆ ಜನರಿಗೆ ಅನ್ನ ಸಿಗವುದಿಲ್ಲ. ಅದೇ ರೀತಿ ಕಾರ್ಮಿಕ ತನ್ನ ಪಾಲಿನ ಕೆಲಸ ಮಾಡದಿದ್ದರೆ ಜನರಿಗೆ ಬೇರೆ ರೀತಿಯ ಕೆಲಸಗಳು ಆಗುವುದಿಲ್ಲ. ದೇಶದ ಆರ್ಥಿಕತೆಯನ್ನು ಅಯಾ ದೇಶದ ಕಾರ್ಮಿಕರ ಸಂಖ್ಯೆಯನ್ನು ಪರಿಗಣಿಸಿ ನಿರ್ಧಾರ ಮಾಡಲಾಗುತ್ತದೆ. ಇದರಿಂದಲೇ ಜಿಡಿಪಿಯನ್ನು ಸಹ ನಿರ್ಧಾರ ಮಾಡಲಾಗುತ್ತದೆ ಎಂದು ಹೇಳಿದರು.ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕಾರ್ಮಿಕರಿಗಾಗಿ ವಿವಿಧ ರೀತಿಯ ಯೋಜನೆಯನ್ನು ಜಾರಿ ಮಾಡಿದೆ.
ಬಡಗಿ ಕಾರ್ಮಿಕರ ಸಂಘದ ಅಧ್ಯಕ್ಷ ಜಾಕಿರ್ ಹುಸೇನ್ ಮಾತನಾಡಿ, ಕಾರ್ಮಿಕರಿಗೆ ಸರ್ಕಾರ ವಿವಿಧ ರೀತಿಯ ಸೌಲಭ್ಯವನ್ನು ನೀಡಬೇಕಿದೆ. ಕಾರ್ಮಿಕರಿಗೆ ಸರ್ಕಾರದ ವತಿಯಿಂದ ಸಿಗುವಂತಹ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ಕಾರ್ಮಿಕ ಇಲಾಖೆ ನೀಡಬೇಕಿದೆ ಎಂದರು.
ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್.ಕೆ.ಸರ್ದಾರ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಕಾರ್ಮಿಕರ ಪಾತ್ರ ಬಹಳಷ್ಟು ಇದೆ. ಅವರು ಹಾಕಿದ ಮತದಿಂದ ಪಕ್ಷ ಅಧಿಕಾರ ಹಿಡಿಯಲು ಸಾಧ್ಯವಾಗಿದೆ. ಇದನ್ನು ಮನಗಂಡು ಶಾಸಕರಾದವರು ಕಾರ್ಮಿಕರ ಹಿತವನ್ನು ಕಾಯಬೇಕಿದೆ. ಕಾರ್ಮಿಕರನ್ನು ಅಧಿಕಾರಸ್ಥರು ಎಂದಿಗೂ ಸಹ ಮರೆಯಬಾರದು. ಕಾರ್ಮಿಕರನ್ನು ಜೊತೆಯಲ್ಲಿ ಇಟ್ಟುಕೊಂಡಲ್ಲಿ ಮುಂದಿನ ಬಾರಿಯೂ ಸಹ ನಮ್ಮ ಪಕ್ಷ ಹೆಚ್ಚಿನ ಸ್ಥಾನವನ್ನು ಪಡೆಯಲು ಅನುಕೂಲವಾಗುತ್ತದೆ ಎಂದರು.ಈ ಸಂದರ್ಭದಲ್ಲಿ ಡಿಸಿಸಿ ಅಧ್ಯಕ್ಷ ತಾಜ್ಪೀರ್, ಟಿಪ್ಪು ಖಾಸಿಂಆಲಿ, ಪ್ರಕಾಶ್ ರಾಮನಾಯ್ಕ್, ಖುದ್ದುಸ್, ಮಂಜುನಾಥ್, ಅಕ್ಬರ್, ಸಮೀವುಲ್ಲಾ, ಯೂಸಿಫ್, ಹಸೀನ, ಅಬ್ದುಲ್ ರಹಿಂ, ಜ್ಯೋತಿ ಲಕ್ಷ್ಮಿ, ನಾಗರಾಜ್,ಸಂಪತ್ ಕುಮಾರ್, ಮೈಲಾರಪ್ಪ, ಸಚಿನ್ ಮುಂತಾದವರು ಹಾಜರಿದ್ದರು.