ಮುಷ್ಕರಕ್ಕೆ ನೌಕರರಿಂದ ಮಿಶ್ರ ಪ್ರತಿಕ್ರಿಯೆ

KannadaprabhaNewsNetwork |  
Published : Aug 06, 2025, 01:30 AM IST
ಬುಸ್‌ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮಂಗಳವಾರ ನಡೆದ ಸಾರಿಗೆ ನೌಕರರ ಮುಷ್ಕರಕ್ಕೆ ನೌಕರರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವು ನೌಕರರು ಕರ್ತವ್ಯಕ್ಕೆ ಹಾಜರಾದರೆ, ಇನ್ನು ಕೆಲವರು ಗೌರಾಗಿದ್ದರು. ಹೀಗಾಗಿ, ಬಸ್‌ ಸಂಚಾರ ಬಂದ್‌ ಆಗಿದ್ದರಿಂದ ಬೇರೆ ಬೇರೆ ಜಿಲ್ಲೆಗಳಿಂದ ಆಗಮಿಸಿದ್ದ ಪ್ರಯಾಣಿಕರು ಖಾಸಗಿ ವಾಹನಗಳನ್ನೇ ಅವಲಂಬಿಸುವಂತಾಗಿತ್ತು. ಜಿಲ್ಲೆಯಲ್ಲಿ ಖಾಸಗಿ ಬಸ್‌ಗಳ ಬಳಕೆ ಕಡಿಮೆ ಇರುವುದರಿಂದ, ಜನರು ತಮ್ಮ ಕೆಲಸ ಕಾರ್ಯಗಳಿಗೆ ಸ್ವಂತ ವಾಹನಗಳ ಮೊರೆ ಹೋಗಿದ್ದರು. ಬೇರೆ ಬೇರೆ ಜಿಲ್ಲೆಗಳಿಗೆ ಹೋಗಬೇಕಿದ್ದ 500ಕ್ಕೂ ಅಧಿಕ ಬಸ್‌ಗಳಲ್ಲಿ ಕೇವಲ 147 ಬಸ್‌ಗಳು ಮಾತ್ರ ಜಿಲ್ಲೆಯ ವಿವಿಧ ತಾಲೂಕುಗಳಿಗೆ ಸಂಚರಿಸಿದವು.

ಕನ್ನಡಪ್ರಭ ವಾರ್ತೆ ವಿಜಯಪುರ

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮಂಗಳವಾರ ನಡೆದ ಸಾರಿಗೆ ನೌಕರರ ಮುಷ್ಕರಕ್ಕೆ ನೌಕರರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವು ನೌಕರರು ಕರ್ತವ್ಯಕ್ಕೆ ಹಾಜರಾದರೆ, ಇನ್ನು ಕೆಲವರು ಗೌರಾಗಿದ್ದರು. ಹೀಗಾಗಿ, ಬಸ್‌ ಸಂಚಾರ ಬಂದ್‌ ಆಗಿದ್ದರಿಂದ ಬೇರೆ ಬೇರೆ ಜಿಲ್ಲೆಗಳಿಂದ ಆಗಮಿಸಿದ್ದ ಪ್ರಯಾಣಿಕರು ಖಾಸಗಿ ವಾಹನಗಳನ್ನೇ ಅವಲಂಬಿಸುವಂತಾಗಿತ್ತು. ಜಿಲ್ಲೆಯಲ್ಲಿ ಖಾಸಗಿ ಬಸ್‌ಗಳ ಬಳಕೆ ಕಡಿಮೆ ಇರುವುದರಿಂದ, ಜನರು ತಮ್ಮ ಕೆಲಸ ಕಾರ್ಯಗಳಿಗೆ ಸ್ವಂತ ವಾಹನಗಳ ಮೊರೆ ಹೋಗಿದ್ದರು. ಬೇರೆ ಬೇರೆ ಜಿಲ್ಲೆಗಳಿಗೆ ಹೋಗಬೇಕಿದ್ದ 500ಕ್ಕೂ ಅಧಿಕ ಬಸ್‌ಗಳಲ್ಲಿ ಕೇವಲ 147 ಬಸ್‌ಗಳು ಮಾತ್ರ ಜಿಲ್ಲೆಯ ವಿವಿಧ ತಾಲೂಕುಗಳಿಗೆ ಸಂಚರಿಸಿದವು.

ವಿದ್ಯಾರ್ಥಿಗಳ ಪರದಾಟ

ಶಾಲಾ-ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳು ಸರಿಯಾದ ಬಸ್‌ ವ್ಯವಸ್ಥೆ ಸಿಗದೆ ಕೇಂದ್ರ ಬಸ್‌ ನಿಲ್ದಾಣದಲ್ಲಿ ಪರದಾಡಿದರು. ಪ್ರಯಾಣಿಕರು ತಮ್ಮ ತಮ್ಮ ಸ್ಥಳಗಳಿಗೆ ಹೋಗಲು ಬಸ್‌ ಬಾರದ ಕಾರಣ ಖಾಸಗಿ ವಾಹನಗಳ ಮೊರೆ ಹೋಗಿದ್ದರು. ನಿತ್ಯ ಬಸ್‌ಗಳಿಂದ ಕೂಡಿರುತ್ತಿದ್ದ ಬಸ್‌ ನಿಲ್ದಾಣ ಇಂದು ಖಾಸಗಿ ವಾಹನಗಳಿಂದ ತುಂಬಿತ್ತು. ಇನ್ನೊಂದೆಡೆ ಕೇಂದ್ರ ಬಸ್‌ ನಿಲ್ದಾಣದಲ್ಲಿ ಸಾಲು ಸಾಲಾಗಿ ಬಸ್‌ಗಳು ನಿಂತಿದ್ದರೆ, ಬಸ್‌ ನಿಲ್ದಾಣವೆಲ್ಲ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿತ್ತು.ತಾಲೂಕುಗಳಿಗೆ ಸಂಚಾರ:

ಬೆಳಗ್ಗೆ ಕೆಲಕಾಲ ಸಂಚರಿಸದ ಬಸ್‌ಗಳು 10ಗಂಟೆ ಬಳಿಕ ವಿವಿಧ ತಾಲೂಕುಗಳಿಗೆ ಸಂಚರಿಸಲು ಆರಂಭಗೊಂಡವು. ಈ ವೇಳೆ ಬಸ್‌ಗಳು ರಸ್ತೆಯಲ್ಲಿ ಕಂಡಕೂಡಲೇ ಪ್ರಯಾಣಿಕರು ತಮ್ಮ ತಮ್ಮ ಊರುಗಳಿಗೆ ಹೋಗಲು ಅಣಿಯಾದರು. ಸಂಜೆಯ ವೇಳೆಗೆ ಎಲ್ಲ ಬಸ್‌ ಸಂಚಾರವು ಎಂದಿನಂತೆ ಸುಗಮವಾಗಿ ಆರಂಭವಾಗಿತ್ತು.ಕೋಟ್:ಜಿಲ್ಲಾ ಕೇಂದ್ರದಿಂದ ಬೇರೆ ಬೇರೆ ತಾಲೂಕುಗಳಿಗೆ 147 ಬಸ್‌ಗಳನ್ನು ಬಿಡಲಾಗಿದೆ. ನಗರದಲ್ಲಿ ಸಂಚರಿಸುವವರಿಗೆ ಅಷ್ಟೇನು ಸಮಸ್ಯೆಯಾಗಿಲ್ಲ. ಒಟ್ಟಿನಲ್ಲಿ ಪ್ರಯಾಣಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳಲಾಗಿದೆ. ಎಲ್ಲಿಯೂ ಯಾವುದೇ ರೀತಿಯ ಸಮಸ್ಯೆಗಳು ಅಥವಾ ಗಲಾಟೆಗಳು ಆಗದಂತೆ ನೋಡಿಕೊಳ್ಳಲಾಗಿದೆ. ಸಂಜೆಯ ವೇಳೆಗೆ ಎಲ್ಲ ಬಸ್‌ಗಳು ಆರಂಭವಾಗಿವೆ.ನಾರಾಯಣಪ್ಪ ಕುರುಬರ, ಕೆಎಸ್‌ಆರ್‌ಟಿಸಿ ಡಿಸಿ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡ್ರಗ್ಸ್‌ ವಿರುದ್ಧ ಸಿಎಂ ತವರಿಂದಲೇ ಹೋರಾಟ : ವಿಜಯೇಂದ್ರ
ಚಿಕ್ಕಮಗಳೂರು ಗಿರಿಧಾಮಗಳಲ್ಲಿ ಪ್ರವಾಸಿಗರ ಕಾರುಬಾರು