₹2.50 ಕೋಟಿ ವೆಚ್ಚದ ಶಾಲಾ ಕೊಠಡಿಗೆ ಚಾಲನೆ

KannadaprabhaNewsNetwork |  
Published : Sep 03, 2026, 02:45 AM IST
ಹಳೇ ಹುಬ್ಬಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.19ರ ನೂತನ ಕಟ್ಟಡ ನಿರ್ಮಾಣಕ್ಕೆ ಶಾಸಕ ಪ್ರಸಾದ ಅಬ್ಬಯ್ಯ ಭೂಮಿಪೂಜೆ ನೆರವೇರಿಸಿದರು. | Kannada Prabha

ಸಾರಾಂಶ

ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ದೊರೆಯುವಂತೆ ಮಾಡುವುದೇ ನನ್ನ ಪ್ರಮುಖ ಆದ್ಯತೆ. ಕ್ಷೇತ್ರದ ಶೈಕ್ಷಣಿಕ ಅಭಿವೃದ್ಧಿಗಾಗಿ ಈಗಾಗಲೇ ಕೋಟ್ಯಂತರ ರುಪಾಯಿ ಅನುದಾನ ಒದಗಿಸಲಾಗಿದೆ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.

ಹುಬ್ಬಳ್ಳಿ:

ಬಡ ಮತ್ತು ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು. ಯಾವುದೇ ಮಗು ಆರ್ಥಿಕ ಕಾರಣದಿಂದ ಶಿಕ್ಷಣದಿಂದ ವಂಚಿತವಾಗಬಾರದು ಎಂಬ ಉದ್ದೇಶದಿಂದ ಕ್ಷೇತ್ರದ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಹು-ಧಾ ಮಹಾನಗರ ಪಾಲಿಕೆಯ 73ನೇ ವಾರ್ಡಿನ ಇಂಡಿಪಂಪ್, ಹಳೇ ಹುಬ್ಬಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.19ರ ನೂತನ ಕಟ್ಟಡ ನಿರ್ಮಾಣದ (₹2.50 ಕೋಟಿ ವೆಚ್ಚ) ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ದೊರೆಯುವಂತೆ ಮಾಡುವುದೇ ನನ್ನ ಪ್ರಮುಖ ಆದ್ಯತೆ. ಕ್ಷೇತ್ರದ ಶೈಕ್ಷಣಿಕ ಅಭಿವೃದ್ಧಿಗಾಗಿ ಈಗಾಗಲೇ ಕೋಟ್ಯಂತರ ರುಪಾಯಿ ಅನುದಾನ ಒದಗಿಸಲಾಗಿದೆ. ಬಿಡ್ನಾಳದ ಆರ್.ಕೆ. ಪಾಟೀಲ ಶಾಲೆ, ಎಸ್.ಎಂ. ಕೃಷ್ಣ ನಗರ, ಬೀರಬಂದ ಓಣಿ, ಘಂಟಿಕೇರಿ, ಬಿ.ಡಿ. ಕಾರ್ಮಿಕ ನಗರ, ಸದಾಶಿವ ನಗರ ಸೇರಿದಂತೆ ಅನೇಕ ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಅನುದಾನ ನೀಡಲಾಗಿದೆ ಎಂದರು.

ಬಿಇಒ ಹನುಮಂತ ಪಡ್ನೇಶಿ, ಪಾಲಿಕೆ ಸದಸ್ಯರಾದ ಶೀಲಾ ಕಾಟ್ಕರ್, ಸಂತೋಷ ಪೂಜಾರ, ಶ್ರೀನಿವಾಸ ಬೆಳದಡಿ, ರವಿ ಯಾವಗಲ್ಲ, ಶೇಕಣ್ಣ ಬತ್ತಿ, ಬಸವರಾಜ ಸಿರಿಗೆರೆ, ವಿಠೋಬಾ ಹಿಂಡಿ, ಗಣೇಶ ಕುಂಬಾರ, ರತ್ನವ್ವ ಪಾಟೀಲ, ನಾಗರತ್ನ ಕಾಟೆ, ಪ್ರೇಮಲತಾ ಗೊಣಗಿ, ಪ್ರತಿಮಾ ಶೆಟ್ಟಿ, ಕೀರ್ತಿ, ಆರತಿ ಕೋಟಿ, ಚಂದ್ರಶೇಖರ ಹೊಸಮನಿ ಸೇರಿ ಹಲವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾಮಗಾರಿ ವಿಳಂಬ, ಕಳಪೆ ಗುಣಮಟ್ಟ: ಪೊನ್ನಣ್ಣ ಅಸಮಾಧಾನ
ಒಳಚರಂಡಿ ಜಾಲಕ್ಕೆ ಸಂಪರ್ಕ: ಡಾ. ಮಂತರ್ ಗೌಡ ಸೂಚನೆ