-ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ವಿಚಾರ
ಮಾಗಡಿ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಶಾಸಕ ಬಾಲಕೃಷ್ಣ ಅವರು ಗಂಡಸ್ತನದ ರಾಜಕೀಯ ಮಾಡಬೇಕಿತ್ತು, ಜೆಡಿಎಸ್ನಲ್ಲಿ ಗೆದ್ದಿದ್ದ ನಾಲ್ವರು ಸದಸ್ಯರನ್ನು ಹಣದ ಆಮಷವೊಡ್ಡಿ ಸೆಳೆದುಕೊಂಡು, ನಮ್ಮ ಪಕ್ಷದ ಮಹಿಳೆಯನ್ನು ಸೋಲಿಸುವ ಮೂಲಕ ಹಿಂದುಳಿದ ವರ್ಗಕ್ಕೆ ಅನ್ಯಾಯವೆಸಗಿದ್ದಾರೆ ಎಂದು ಮಾಜಿ ಶಾಸಕ ಎ.ಮಂಜುನಾಥ್ ವಾಗ್ದಾಳಿ ನಡೆಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಗಡಿ ಪುರಸಭೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಮಾಗಡಿ ಪಟ್ಟಣದ ಜನತೆ ಸ್ಪಷ್ಟ ಬಹುಮತ ನೀಡಿದ್ದರು. 12 ಸದಸ್ಯರ ಜೊತೆಗೆ ಬಿಜೆಪಿ ಸದಸ್ಯೆ, ಎಂಪಿ ಮತ ಸೇರಿ ಒಟ್ಟು 14 ಸದಸ್ಯರ ಬಲ ಹೊಂದಿದ್ದು ನಾವು ಚುನಾವಣೆ ಸಂದರ್ಭದಲ್ಲಿ ನೀಡಿದ ಆಶ್ವಾಸನೆಯಂತೆ, ಜೆಡಿಎಸ್ ಬೆಂಬಲಿತ ಮೂವರು ಸದಸ್ಯರಿಗೆಗೆ ಅಧ್ಯಕ್ಷ ಹುದ್ದೆಯ ಅಧಿಕಾರ ಹಂಚಿಕೆ ಮಾಡಿಕೊಳ್ಳುತ್ತಿದ್ದೆವು. ಆದರೆ ಶಾಸಕ ಬಾಲಕೃಷ್ಣ ಗಂಡಸ್ತನದ ರಾಜಕೀಯ ಮಾಡದೆ, ನಮ್ಮ ಪಕ್ಷದ ಸದಸ್ಯರಿಗೆ ಹಣದ ಆಸೆ ತೋರಿಸಿ ಅವರಿಂದ ಮತ ಹಾಕಿಸಿಕೊಳ್ಳದೆ ತಟಸ್ಥವಾಗಿ ಉಳಿಸಿಕೊಳ್ಳುವ ಮೂಲಕ ನಮ್ಮ ಅಭ್ಯರ್ಥಿಯನ್ನು ಸೋಲಿಸಿದ್ದು ಈ ಸೋಲನ್ನು ನಾನು ಒಪ್ಪಿಕೊಳ್ಳುತ್ತೇನೆ. ಹಿಂದುಳಿದ ವರ್ಗದ ಮಹಿಳೆಗೆ ಅಧಿಕಾರ ತಪ್ಪಿಸಿದ ಕೀರ್ತಿ ಶಾಸಕ ಬಾಲಕೃಷ್ಣ್ಣರವರಿಗೆ ಸಲ್ಲುತ್ತದೆ ಎಂದು ಆರೋಪಿಸಿದರು.ವಿಪ್ ಉಲ್ಲಂಘಿಸಿದ ಸದಸ್ಯರ ವಿರುದ್ಧ ಕ್ರಮ:
ಶಾಸಕರು ಗಂಡಸ್ತನದ ರಾಜಕೀಯ ಮಾಡಲಿ:
ಪಟ್ಟಣದ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿದ್ದರೆ ನೀವು ಅಧ್ಯಕ್ಷ ಸ್ಥಾನ ಪಡೆದುಕೊಳ್ಳಲಿ ಆಗ ಯಾರೂ ಶಾಸಕರ ವಿರುದ್ಧ ಮಾತನಾಡುವುದಿಲ್ಲ. ನೀವು ಮಾಡಿರುವುದು ಗಂಡಸ್ತನದ ರಾಜಕೀಯ ಅಲ್ಲ, ಜೆಡಿಎಸ್ ಪಕ್ಷದಿಂದ ಬಿ ಫಾರಂ ನೀಡಿ ಮನೆ ಮನೆಗೆ ತೆರಳಿ ಮತ ಕೇಳಿ ಹಣ ಖರ್ಚು ಮಾಡಿ ಅವರನ್ನು ಗೆಲ್ಲಿಸಿಕೊಂಡು ಬಂದ ಮೇಲೆ ನಮ್ಮ ಪಕ್ಷದ ಸದಸ್ಯರನ್ನು ಎತ್ತಿಕೊಂಡು ಹೋಗಿ ತಮ್ಮ ಮಕ್ಕಳೆಂದು ಅವರಿಗೆ ಮದುವೆ ಮುಂಜಿ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದರು.ಈ ಹಿಂದೆಯೂ ಇದೇ ರೀತಿ ಬಾಲಕೃಷ್ಣ ನಮ್ಮ ಪಕ್ಷದ ನಾಲ್ವರು ಸದಸ್ಯರನ್ನು ಹಣ ಆಮಿಷವೊಡ್ಡಿ ಅವರನ್ನು ಕರೆದುಕೊಂಡು ಹೋಗಿ ಅಧಿಕಾರ ಪಡೆದುಕೊಂಡರು ಈಗ ಆ ನಾಲ್ವರ ಸದಸ್ಯರ ರಾಜಕೀಯ ಸ್ಥಿತಿ ಈಗ ಯಾವ ರೀತಿ ಇದೇ ಪಟ್ಟಣದ ಜನತೆಗೆ ಗೊತ್ತಿದೆ. ಸರ್ಕಾರದಿಂದ ಕೊಳ್ಳೆ ಹೊಡೆದ ಹಣವಿದೆ, ಅಧಿಕಾರ ಇದೆ ನೀವು ಹೇಳಿದರೆ ಪೊಲೀಸ್ ಇಲಾಖೆಯವರು ಕೇಳುತ್ತಾರೆ ಎಂಬ ದರ್ಪದಲ್ಲಿ ಪುರಸಭಾ ಚುನಾವಣೆ ನಡೆಸಿ ಗೆಲುವು ಸಾಧಿಸಿದ್ದೀರಾ, ಅಧಿಕಾರ ಹಣ ಶಾಶ್ವತವಾಗಿ ಇರುತ್ತೆ ಎಂದು ಬಾಲಕೃಷ್ಣ ಅಂದುಕೊಂಡಿದ್ದಾರೆ ಮಂಜುನಾಥ್ ವಾಗ್ದಾಳಿ ನಡೆಸಿದರು.
ಇದೇ ವೇಳೆ ಪುರಸಭೆ ಜೆಡಿಎಸ್ ಸದಸ್ಯರು ಹಾಗೂ ಮುಖಂಡರು ಭಾಗವಹಿಸಿದ್ದರು.