ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಭೀಮಣ್ಣ ನಾಯ್ಕ ಚಾಲನೆ

KannadaprabhaNewsNetwork |  
Published : Jan 09, 2025, 12:45 AM IST
ಸಿದ್ದಾಪುರ ತಾಲೂಕಿನ ಕಾನಗೋಡಿನಲ್ಲಿ ಭೀಮಣ್ಣ ನಾಯ್ಕ ಅವರು ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು. | Kannada Prabha

ಸಾರಾಂಶ

ಕಾನಗೋಡ ಗ್ರಾಪಂ ವ್ಯಾಪ್ತಿಯ ಚಂದ್ರಗುತ್ತಿ ಮುಖ್ಯ ರಸ್ತೆಯಿಂದ ಹಳ್ಳಿಬೈಲ್, ಮಾರಿಗುಡಿ ಮಾರ್ಗವಾಗಿ ಬಾಸಿಂಗ್ ಕಟ್ಟೆಯವರೆಗಿನ ರಸ್ತೆ ಕಳೆದ ಅನೇಕ ವರ್ಷಗಳಿಂದ ದುರಸ್ತಿ ಕಾಣದೇ ಸಂಪೂರ್ಣ ಹದಗೆಟ್ಟು ಸಂಚಾರಕ್ಕೆ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.

ಸಿದ್ದಾಪುರ: ತಾಲೂಕಿನ ಕಾನಗೋಡ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾದ ಚಂದ್ರಗುತ್ತಿ ಮುಖ್ಯ ರಸ್ತೆಯಿಂದ ಮಾರಿಗುಡಿ ಮಾರ್ಗದ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಭೀಮಣ್ಣ ನಾಯ್ಕ ಭೂಮಿಪೂಜೆ ನೆರವೇರಿಸಿದರು.ಕಾನಗೋಡ ಗ್ರಾಪಂ ವ್ಯಾಪ್ತಿಯ ಚಂದ್ರಗುತ್ತಿ ಮುಖ್ಯ ರಸ್ತೆಯಿಂದ ಹಳ್ಳಿಬೈಲ್, ಮಾರಿಗುಡಿ ಮಾರ್ಗವಾಗಿ ಬಾಸಿಂಗ್ ಕಟ್ಟೆಯವರೆಗಿನ ರಸ್ತೆ ಕಳೆದ ಅನೇಕ ವರ್ಷಗಳಿಂದ ದುರಸ್ತಿ ಕಾಣದೇ ಸಂಪೂರ್ಣ ಹದಗೆಟ್ಟು ಸಂಚಾರಕ್ಕೆ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.

ಗ್ರಾಮಸ್ಥರು ಶಾಸಕ ಭೀಮಣ್ಣ ನಾಯ್ಕ ಅವರಲ್ಲಿ ಮನವಿ ಮಾಡಿ ಅದ್ಯತೆಯ ಮೇರೆಗೆ ರಸ್ತೆ ನಿರ್ಮಿಸಿಕೊಡುವಂತೆ ಆಗ್ರಹಿಸಿದ್ದರು. ಶಾಸಕರು ಸ್ಥಳೀಯರ ಮನವಿಗೆ ಸ್ಪಂದಿಸಿ ರಸ್ತೆಗೆ ಅನುದಾನ ನೀಡಿದ್ದು, ಮಂಗಳವಾರ ಕಾನಗೋಡಿನ ಮಾರಿಕಾಂಬಾ ದೇವಿಗೆ ಪೂಜೆ ಸಲ್ಲಿಸಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಪ್ರಸಕ್ತ ಸಾಲಿನ ಫೆಬ್ರವರಿಯಲ್ಲಿ ಕಾನಗೋಡ ಜಾತ್ರೆ ಇರುವುದರಿಂದ ತಕ್ಷಣ ಕೆಲಸ ಪ್ರಾರಂಭಿಸಿ ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.ಈ ಸಂದರ್ಭದಲ್ಲಿ ಕಾನಗೋಡ ಗ್ರಾಪಂ ಅಧ್ಯಕ್ಷ ಶಿವರಾಯ ನಾಯ್ಕ, ಭೂ ನ್ಯಾಯ ಮಂಡಳಿ ಸದಸ್ಯ ಎಚ್.ಕೆ. ಶಿವಾನಂದ, ಮಾರಿಕಾಂಬಾ ದೇವಸ್ಥಾನದ ಅಧ್ಯಕ್ಷ ಕೆರಿಯಾ ನಾಯ್ಕ ಸಣ್ಣಟ್ಟಿ, ಪ್ರಧಾನ ಕಾರ್ಯದರ್ಶಿ ಶಂಕರ ನಾಯ್ಕ ಹಾಗೂ ಗ್ರಾಮಸ್ಥರು ಇದ್ದರು.ಬೈಕ್ ಸವಾರನಿಗೆ ₹೨೨೫೦೦ ದಂಡ

ಭಟ್ಕಳ: ವಾಹನಾ ಚಾಲನಾ ಪರವಾನಗಿ ಹೊಂದಿರದೇ, ಹೆಲ್ಮೇಟ್ ಧರಿಸದೇ, ಮದ್ಯ ಸೇವನೆ ಮಾಡಿ ಬೈಕ್ ಚಲಾಯಿಸಿದ್ದು ಅಲ್ಲದೇ ಪೊಲೀಸರ ಜತೆ ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂದಿಸಿದಂತೆ ಬುಧವಾರ ವಿಚಾರಣೆ ನಡೆಸಿದ ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯ ಬೈಕ್ ಸವಾರನಿಗೆ ₹೨೨೫೦೦ ದಂಡ ವಿಧಿಸಿ ಆದೇಶಿಸಿದೆ.ಕಳೆದ ಡಿ. ೩೧ರಂದು ಭಟ್ಕಳ ನಗರ ಠಾಣಾ ಪಿಎಸ್‌ಐ ನವೀನ್ ನಾಯ್ಕ ಅವರು ನಗರದ ಪಿಎಲ್‌ಡಿ ಬ್ಯಾಂಕ್ ಬಳಿ ವಾಹನಾ ತಪಾಸಣಾ ನಡೆಸುತ್ತಿರುವಾಗ ಜಾಲಿ ನಿವಾಸಿ ಬೋರಾ ಸಿಂಗ್ ಅವರ ಬೈಕ್‌ನ್ನು ತಡೆಹಿಡಿದು ತಪಾಸಣೆ ಮಾಡುತ್ತಿರುವ ಸಂದರ್ಭದಲ್ಲಿ ಆತನ ಬಳಿ ವಾಹನ ಚಾಲನಾ ಪರವಾನಗಿ ಇರಲಿಲ್ಲ. ಹೆಲ್ಮೆಟ್ ಕೂಡ ಧರಿಸಿರಲಿಲ್ಲ ಹಾಗೂ ಮದ್ಯ ಸೇವನೆ ಮಾಡಿ ದ್ವಿಚಕ್ರ ವಾಹನ ಚಲಾವಣೆ ಮಾಡಿರುವುದು ಕೂಡಾ ಖಾತ್ರಿಯಾಗಿತ್ತು.ಈ ಬಗ್ಗೆ ದಂಡ ತುಂಬುವಂತೆ ಪಿಎಸ್‌ಐ ನವೀನ ಅವರು ಬೋರಾಸಿಂಗ್ ಬಳಿ ಹೇಳಿದಾಗ ಅವರು ಮದ್ಯ ಸೇವನೆಯ ಅಮಲಿನಲ್ಲಿ ಪೊಲೀಸರ ಜತೆ ಅನುಚಿತವಾಗಿ ವರ್ತಿಸಿದ್ದರು. ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಅಪರಾಧಿಗೆ ದಂಡ ವಿಧಿಸಿ ತೀರ್ಪು ನೀಡಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!