ಸೋಮವಾರಪೇಟೆ: ಅಭಿವೃದ್ಧಿ ಕಾಮಗಾರಿಗೆ ಶಾಸಕ ಭೂಮಿ ಪೂಜೆ

KannadaprabhaNewsNetwork |  
Published : Oct 19, 2025, 01:02 AM IST
ಉದ್ದೇಶ | Kannada Prabha

ಸಾರಾಂಶ

64 ಲಕ್ಷ ರು. ಗಳ ಅಭಿವೃದ್ಧಿ ಕಾಮಗಾರಿಗೆ ಶಾಸಕ ಭೂಮಿಪೂಜೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಗಣ್ಯರು ಉಪಸ್ಥಿತರಿದ್ದರು.

ಕನ್ನಡಪ್ರಭ ವಾರ್ತೆ ಸೋಮವಾರಪೇಟೆ

ಪಟ್ಟಣದ ಆಯುಷ್ ಇಲಾಖೆಯ ಆಯುರ್ವೇದಿಕ್, ಹೋಮಿಯೋಪಥಿ ಮತ್ತು ನೇಚುರೋಪಥಿ ಆಸ್ಪತ್ರೆಯಲ್ಲಿನ 64 ಲಕ್ಷ ರು. ಗಳ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಮಂತರ್‌ಗೌಡ ಸೋಮವಾರ ಭೂಮಿ ಪೂಜೆ ನೆರವೇರಿಸಿದರು.ನಂತರ ಅವರು ಮಾತನಾಡಿ, ಜಿಲ್ಲಾ ಪಂಚಾಯಿತಿಯಿಂದ ಅನುದಾನ ಬಿಡುಗಡೆಯಾಗಿದ್ದು ಕಾಮಗಾರಿ ಗುಣಮಟ್ಟದಾಗಿರಬೇಕು. ಆಯುಷ್ ಇಲಾಖೆಯ ಆಸ್ಪತ್ರೆಯಲ್ಲಿ ಉತ್ತಮ ಆರೋಗ್ಯಸೇವೆ ಸಿಗುತ್ತಿದೆ. ವಾರದಲ್ಲಿ 50 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ರೋಗಿಗಳು ದೂರದೂರಿಗೆ ಹೋಗಿ ಹಣ ಖರ್ಚು ಮಾಡಿಕೊಳ್ಳಬಾರದು ಹಾಗು ಸ್ಥಳೀಯವಾಗಿಯೇ ಉಚಿತ ಆರೋಗ್ಯ ಚಿಕಿತ್ಸೆ ನೀಡಬೇಕೆಂಬ ಉದ್ದೇಶ ಸರ್ಕಾರಕ್ಕಿದ್ದು ಜನರು ಆಸ್ಪತ್ರೆಯ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಅಲ್ಟ್ರಾಸೌಂಡ್ ಮಸಜ್ ಸೆಂಟರ್ ಕೂಡ ಇದೆ ಎಂದು ಹೇಳಿದರು.ಹೈಟೆಕ್ ಪಂಚಕರ್ಮ ಘಟಕ, ಶಸ್ತ್ರಚಿಕಿತ್ಸಾ ಘಟಕ, ಹಳೆ ಕಟ್ಟಡ ದುರಸ್ತಿ ಕಾಮಗಾರಿ ನಡೆಯಲಿದೆ. ಆಸ್ಪತ್ರೆಯಲ್ಲಿ ಸ್ವಚ್ಛತೆಗೂ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್, ತಾಲೂಕು ಗ್ಯಾರೆಂಟಿ ಸಮಿತಿ ಅಧ್ಯಕ್ಷ ಕಾಂತರಾಜು, ಸೂಡ ಅಧ್ಯಕ್ಷ ಕೆ.ಎ.ಆದಂ, ಅಯುಷ್ ಇಲಾಖೆಯ ಜಿಲ್ಲಾ ಅಧಿಕಾರಿ ಡಾ. ಶ್ವೇತಾ, ಆಡಳಿತಾಧಿಕಾರಿ ಕಾವೇರಪ್ಪ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಅರುಣ್, ಪ್ರಮುಖರಾದ ಪಂಚಾಯಿತಿ ಸದಸ್ಯರಾದ ಶೀಲಾ ಡಿಸೋಜ, ಮೃತ್ಯುಂಜಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್, ಯುವ ಕಾಂಗ್ರೆಸ್ ಅಧ್ಯಕ್ಷ ಡಿ.ಯು. ಕಿರಣ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣಕ್ಕೆ ಸಿದ್ಧಗಂಗಾ ಮಠದ ಕೊಡುಗೆ ಅನನ್ಯ
ಪಟ್ಟಣದ ಬೀದಿ ಬದಿ ವ್ಯಾಪಾರಸ್ಥರ ಹಿತ ಕಾಪಾಡಿ