ಶಾಸಕ ಸಿ,ಪುಟ್ಟರಂಗಶೆಟ್ಟಿ ಅಭಿಮಾನಿ ಬಳಗದಿಂದ ಚಾಮರಾನಗರ ಜಿಲ್ಲಾಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ

KannadaprabhaNewsNetwork |  
Published : Dec 01, 2024, 01:30 AM IST
ಶಾಸಕ ಸಿ. ಪುಟ್ಟರಂಗಶೆಟ್ಟರ ಹುಟ್ಟು ಹಬ್ಬ : ಅಭಿಮಾನಿಗಳ ಬಳಗದಿಂದ ಜಿಲ್ಲಾ ಅಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ | Kannada Prabha

ಸಾರಾಂಶ

ಚಾಮರಾಜನಗರದ ಕ್ಷೇತ್ರದ ಶಾಸಕರು ಹಾಗೂ ಎಂಎಸ್‌ಐಎಲ್‌ನ ಅಧ್ಯಕ್ಷ ಶಾಸಕ ಸಿ.ಪುಟ್ಟರಂಗಶೆಟ್ಟಿಯ ೭೦ನೇ ವರ್ಷ ಹುಟ್ಟುಹಬ್ಬದ ಅಂಗವಾಗಿ ಅವರ ಅಭಿಮಾನಿ ಬಳಗದಿಂದ ನಗರದ ಜಿಲ್ಲಾ ಅಸ್ಪತ್ರೆಯಲ್ಲಿರುವ ಒಳ ರೋಗಿಗಳಿಗೆ ಹಣ್ಣು ಹಂಪಲು ಹಾಗೂ ಬ್ರೆಡ್ ವಿತರಣೆ ಮಾಡಲಾಯಿತು.

ಚಾಮರಾಜನಗರ: ಕ್ಷೇತ್ರದ ಶಾಸಕರು ಹಾಗೂ ಎಂಎಸ್‌ಐಎಲ್‌ನ ಅಧ್ಯಕ್ಷ ಶಾಸಕ ಸಿ.ಪುಟ್ಟರಂಗಶೆಟ್ಟಿಯ ೭೦ನೇ ವರ್ಷ ಹುಟ್ಟುಹಬ್ಬದ ಅಂಗವಾಗಿ ಅವರ ಅಭಿಮಾನಿ ಬಳಗದಿಂದ ನಗರದ ಜಿಲ್ಲಾ ಅಸ್ಪತ್ರೆಯಲ್ಲಿರುವ ಒಳ ರೋಗಿಗಳಿಗೆ ಹಣ್ಣು ಹಂಪಲು ಹಾಗೂ ಬ್ರೆಡ್ ವಿತರಣೆ ಮಾಡಲಾಯಿತು.

ಈಗಾಗಲೇ ಚಾಮರಾಜೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಪುಟ್ಟರಂಗಶೆಟ್ಟಿಗೆ ಭಗವಂತ ಇನ್ನು ಹೆಚ್ಚಿನ ಆಯುಷ್ಯ ಆರೋಗ್ಯವನ್ನು ಕೊಡಲಿ. ಅವರು ಸಚಿವರಾಗಿ ಇನ್ನು ಹೆಚ್ಚಿನ ಅವಧಿ ಜನ ಸೇವೆ ಮಾಡುವ ಅವಕಾಶವನ್ನು ಕಲ್ಪಿಸಲಿ ಎಂದು ಅಭಿಮಾನಿಗಳು ಪ್ರಾರ್ಥಿಸಿದರು.

ಬ್ಲಾಕ್ ಅಧ್ಯಕ್ಷ ಮಹಮದ್ ಅಸ್ಗರ್ ಮಾತನಾಡಿ, ಶಾಸಕ ಸಿ.ಪುಟ್ಟರಂಗಶೆಟ್ಟಿ ನಾಲ್ಕು ಬಾರಿ ಕ್ಷೇತ್ರದ ಆಯ್ಕೆಯಾಗಿ ಹೆಚ್ಚಿನ ಅಭಿವೃದ್ದಿ ಮಾಡುವ ಜತೆಗೆ ಜನಾನುರಾಗಿ ನಾಯಕರಾಗಿದ್ದಾರೆ. ಅವರಿಗೆ ಸಂಪುಟದಲ್ಲಿ ಸಚಿವ ಸ್ಥಾನ ಲಭಿಸಲಿ ಎಂದರು.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ. ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವಶೆಟ್ಟಿ, ಎಸ್‌ಪಿಕೆ ಉಮೇಶ್, ಎಪಿಎಂಸಿ ನಿರ್ದೇಶಕ ಆಲೂರು ಪ್ರದೀಪ್, ಚುಡಾ ಸದಸ್ಯರಾದ ರಾಜೇಂದ್ರ, ತಾಪಂ ಮಾಜಿ ಸದಸ್ಯ ಎಸ್.ರಾಜು, ನಗರಸಭಾ ಮಾಜಿ ಸದಸ್ಯ ಪುಟ್ಟಸ್ವಾಮಿ, ಮುಖಂಡರಾದ ಕರಿನಂಜನಪುರ ಸ್ವಾಮಿ, ಕಾಗಲವಾಡಿ ಮೋಳೆ ಶ್ರೀನಿವಾಸಶೆಟ್ಟಿ, ಕಾಗಲವಾಡಿ ಚಂದ್ರು, ವೈದ್ಯಾಕೀಯ ಅಸ್ಪತ್ರೆಯ ಡಿನ್ ಮಂಜುನಾಥ್, ಜಿಲ್ಲಾ ಸರ್ಜನ್ ಕೆ.ಆರ್.ಮಹೇಶ್, ಸ್ಥಾನಿಕ ವೈದ್ಯಾಧಿಕಾರಿ ಮಹೇಶ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಬ್ಬಳ್ಳಿ ವಿವಸ್ತ್ರ ಕೇಸ್‌ನಲ್ಲಿ ತಲೆದಂಡಕ್ಕೆ ಬಿಜೆಪಿ ಗಡುವು
ಶೀಘ್ರ ‘ಬಾಕಿ ಲಕ್ಷ್ಮಿ’ ಬಿಡುಗಡೆ - ಬಿಪಿಎಲ್‌ ರದ್ದಾದವರಿಗೆ ಇಲ್ಲ ಗೃಹಲಕ್ಷ್ಮಿ ಹಣ