ಕುಡಿಯುವ ನೀರಿನ ಸಮಸ್ಯೆ ವ ಬಗೆಹರಿಸುವೆ ಶಾಸಕ ಸಿಮೆಂಟ್ ಮಂಜು

KannadaprabhaNewsNetwork |  
Published : Jun 22, 2026, 01:45 AM IST
21ಎಚ್ಎಸ್ಎನ್11 :  | Kannada Prabha

ಸಾರಾಂಶ

ಸಾರ್ವಜನಿಕರ ಅನುಕೂಲಕ್ಕಾಗಿ ಪಟ್ಟಣದ ಹೊಸ ಬಸ್ ನಿಲ್ದಾಣ ಹಾಗೂ ಹಳೇ ಸಂತೇವೇರಿ ಬಡಾವಣೆಯಲ್ಲಿ ತಲಾ ₹5ಲಕ್ಷ ವೆಚ್ಚದಲ್ಲಿ ಒಟ್ಟು 10 ಲಕ್ಷ ರು. ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಇಂದು ಲೋಕಾರ್ಪಣೆ ಮಾಡಲಾಗುತ್ತಿದೆ. ಇದರಿಂದ ಜನರಿಗೆ ಅತ್ಯಂತ ಕಡಿಮೆ ದರದಲ್ಲಿ ಶುದ್ಧ ಕುಡಿಯುವ ನೀರು ದೊರಕುವಂತಾಗಿದೆ. ಪಟ್ಟಣದಲ್ಲಿ ಅಮೃತ್ 2 ಯೋಜನೆಯಡಿ ಸುಮಾರು 15 ಕೋಟಿ ರು. ವೆಚ್ಚದಲ್ಲಿ ಇಡೀ ಪಟ್ಟಣಕ್ಕೆ ಶುದ್ಧ ನೀರು ಕುಡಿಯುವ ನೀರು ಸರಬರಾಜು ಮಾಡುವ ಕಾಮಗಾರಿ ಪ್ರಗತಿಯಲ್ಲಿದ್ದು, ಈ ಕಾಮಗಾರಿ ಮುಗಿದರೆ ಪ್ರತಿಯೊಂದು ಕುಟುಂಬಗಳಿಗೂ ಶುದ್ಧ ಕುಡಿಯುವ ನೀರು ದೊರಕುತ್ತದೆ ಎಂದರು.

ಕನ್ನಡಪ್ರಭ ವಾರ್ತೆ ಸಕಲೇಶಪುರ

ಸುಮಾರು 15 ಕೋಟಿ ರು. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಶುದ್ದ ಕುಡಿಯುವ ನೀರಿನ ಘಟಕ ಶೀಘ್ರದಲ್ಲಿ ಲೋಕಾರ್ಪಣೆಯಾಗುವುದು ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.

ಪಟ್ಟಣದ ಹೊಸ ಬಸ್ ನಿಲ್ದಾಣ ಹಾಗೂ ಹಳೇ ಸಂತೇವೇರಿ ಬಡಾವಣೆಗಳಲ್ಲಿ ನಿರ್ಮಾಣವಾಗಿರುವ ಶುದ್ದ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿ ಮಾತನಾಡಿ, ಸಾರ್ವಜನಿಕರ ಅನುಕೂಲಕ್ಕಾಗಿ ಪಟ್ಟಣದ ಹೊಸ ಬಸ್ ನಿಲ್ದಾಣ ಹಾಗೂ ಹಳೇ ಸಂತೇವೇರಿ ಬಡಾವಣೆಯಲ್ಲಿ ತಲಾ ₹5ಲಕ್ಷ ವೆಚ್ಚದಲ್ಲಿ ಒಟ್ಟು 10 ಲಕ್ಷ ರು. ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಇಂದು ಲೋಕಾರ್ಪಣೆ ಮಾಡಲಾಗುತ್ತಿದೆ. ಇದರಿಂದ ಜನರಿಗೆ ಅತ್ಯಂತ ಕಡಿಮೆ ದರದಲ್ಲಿ ಶುದ್ಧ ಕುಡಿಯುವ ನೀರು ದೊರಕುವಂತಾಗಿದೆ. ಪಟ್ಟಣದಲ್ಲಿ ಅಮೃತ್ 2 ಯೋಜನೆಯಡಿ ಸುಮಾರು 15 ಕೋಟಿ ರು. ವೆಚ್ಚದಲ್ಲಿ ಇಡೀ ಪಟ್ಟಣಕ್ಕೆ ಶುದ್ಧ ನೀರು ಕುಡಿಯುವ ನೀರು ಸರಬರಾಜು ಮಾಡುವ ಕಾಮಗಾರಿ ಪ್ರಗತಿಯಲ್ಲಿದ್ದು, ಈ ಕಾಮಗಾರಿ ಮುಗಿದರೆ ಪ್ರತಿಯೊಂದು ಕುಟುಂಬಗಳಿಗೂ ಶುದ್ಧ ಕುಡಿಯುವ ನೀರು ದೊರಕುತ್ತದೆ ಎಂದರು.

ಈ ಸಂದರ್ಭದಲ್ಲಿ ಪುರಸಭಾ ಮುಖ್ಯಾಧಿಕಾರಿ ಮಹೇಶ್ವರಪ್ಪ, ಬಿಜೆಪಿ ಮುಖಂಡರುಗಳಾದ ವಿನಯ್, ನವೀನ್ ಶೆಟ್ಟಿ, ಮದನ್, ಚಂದ್ರಣ್ಣ ಮುಂತಾದವರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಎಚ್ಚರಿಕೆ ಅಗತ್ಯ
ಯೋಗದಿಂದ ಆರೋಗ್ಯಕರ ಜೀವನ ಸಾಧ್ಯ ಎಂದ ಸಂಸದ