ಕನ್ನಡಪ್ರಭ ವಾರ್ತೆ ಕಮಲನಗರ
ಮನೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕುಟುಂಬದ ಸದಸ್ಯರೊಂದಿಗೆ ಸಂವಾದ ನಡೆಸಿದ ಅವರು, ನಿಮ್ಮ ಮನೆಯಲ್ಲಿ ಎಷ್ಟು ಜನರಿದ್ದಾರೆ? ಎಷ್ಟು ಎನ್ಯುಮರೇಷನ್ ಅರ್ಜಿಗಳನ್ನು ಭರ್ತಿ ಮಾಡಿದ್ದೀರಿ? ಆನ್ಲೈನ್ನಲ್ಲಿ ಎಂಟ್ರಿ ಆಗಿದೆಯೇ? ಫಾರ್ಮ್ ಭರ್ತಿ ಅಥವಾ ಸಲ್ಲಿಕೆಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಇದೆಯೇ? ಎಂದು ವಿಚಾರಿಸಿ ಮಾಹಿತಿ ಪಡೆದರು. ಜನರ ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲೇ ಅಗತ್ಯ ಮಾರ್ಗದರ್ಶನ ನೀಡಿದರು.
ಈ ಸಂದರ್ಭದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯ ಮಹತ್ವವನ್ನು ವಿವರಿಸಿದ ಅವರು, ಅರ್ಹ ಪ್ರತಿಯೊಬ್ಬ ಮತದಾರರು ಎನ್ಯುಮರೇಷನ್ ಫಾರ್ಮ್ ಅನ್ನು ತಪ್ಪದೇ ಭರ್ತಿ ಮಾಡಿ ನಿಗದಿತ ಅವಧಿಯೊಳಗೆ ಸಲ್ಲಿಸುವಂತೆ ಮನವಿ ಮಾಡಿದರು.ಸಂಚಾರದ ವೇಳೆ ಅನೇಕ ಮನೆಗಳಲ್ಲಿ ಎಸ್ಐಆರ್ ಎನ್ಯುಮರೇಷನ್ ಫಾರ್ಮಗಳನ್ನು ಪಡೆದು ಅವುಗಳನ್ನು ಭರ್ತಿ ಮಾಡದೇ ಹಾಗೆಯೇ ಇಟ್ಟುಕೊಂಡಿರುವುದು ಗಮನಕ್ಕೆ ಬಂದಿದೆ. ಇಂತಹ ಮತದಾರರು ವಿಳಂಬ ಮಾಡದೇ ಫಾರ್ಮ್ಗಳನ್ನು ಸಂಪೂರ್ಣವಾಗಿ ಭರ್ತಿ ಮಾಡಿ, ನಿಗದಿತ ಅವಧಿಯೊಳಗೆ ತಮ್ಮ ವ್ಯಾಪ್ತಿಯ ಬೂತ್ ಮಟ್ಟದ ಅಧಿಕಾರಿಗಳಿಗೆ (ಬಿಎಲ್ಓ) ಸಲ್ಲಿಸಬೇಕು ಎಂದು ತಿಳಿಸಿದರು.
ಔರಾದ (ಬಿ) ಹಾಗೂ ಕಮಲನಗರ ತಾಲೂಕಿನ ಪ್ರತಿಯೊಬ್ಬ ಅರ್ಹ ಮತದಾರರು ಈ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ, ತಮ್ಮ ಎನ್ಯುಮರೇಷನ್ ಫಾರ್ಮ್ಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು ಎಂದರು.