ಕನ್ನಡಪ್ರಭ ವಾರ್ತೆ ಕೆ.ಆರ್. ನಗರ
ಪಟ್ಟಣದ ಆಡಳಿತ ಸೌಧದ ಕಚೇರಿಯಲ್ಲಿರುವ ಕೃಷ್ಣರಾಜೇಂದ್ರ ಸಭಾಂಗಣದಲ್ಲಿ ಶನಿವಾರ ಶಾಸಕ ಡಿ. ರವಿಶಂಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾರ್ವಜನಿಕರು, ಚುನಾಯಿತ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಯಿತು.
ಶಾಸಕ ಡಿ. ರವಿಶಂಕರ್ ಮಾತನಾಡಿ, ಫೆ. 10 ರಿಂದ 21ರವರೆಗೆ ಅರ್ಕೇಶ್ವರ ಸ್ವಾಮಿಯವರ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯಲಿದ್ದು, ತಾಲೂಕು ಆಡಳಿತ, ಪುರಸಭೆ ಮತ್ತು ತಾಲೂಕು ಪಂಚಾಯಿತಿಯವರು ಇತರೆ ಎಲ್ಲ ಇಲಾಖೆಗಳ ಅಧಿಕಾರಿಗಳ ಜತೆ ಸಮನ್ವಯತೆ ಸಾಧಿಸಿ ಉತ್ತಮವಾಗಿ ಜಾತ್ರೆ ನಡೆಸಲು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.ಮೂರು ತಾಸುಗಳ ಕಾಲ ಸುದೀರ್ಘ ಸಭೆ ನಡೆಸಿದ ಶಾಸಕರು, ಸಾರ್ವಜನಿಕರು ಮತ್ತು ಅಧಿಕಾರಿಗಳಿಂದ ಸಲಹೆ ಸೂಚನೆಗಳನ್ನು ಪಡೆದು ಇಲಾಖಾವಾರು ಜವಾಬ್ದಾರಿ ಹಂಚಿದದಲ್ಲದೆ, ಈ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ನಾಳೆಯಿಂದಲೆ ದೇವಾಲಯವನ್ನು ಸ್ವಚ್ಛಗೊಳಿಸಿ ಜಾತ್ರಾ ಸಿದ್ಧತೆ ಆರಂಭಿಸಬೇಕೆಂದು ಹೇಳಿದರಲ್ಲದೆ, ದೇವಾಲಯದ ಸುತ್ತ ಪೂರ್ಣವಾಗಿ ಕಸ ಮುಕ್ತ ವಲಯ ಮಾಡಿ ನಿಗದಿತ ಸ್ಥಳದಲ್ಲಿ ಸಿಹಿ ತಿಂಡಿ ಮತ್ತು ಇತರೆ ಅಂಗಡಿಗಳು ಇರುವಂತೆ ನೋಡಿಕೊಂಡು ಮತ್ತೊಮ್ಮೆ ಎಲ್ಲ ಅಧಿಕಾರಿಗಳು ಸಭೆ ನಡೆಸಿ ನನಗೆ ವರದಿ ನೀಡಬೇಕೆಂದು ತಾಕೀತು ಮಾಡಿದರು.
ಪುರಸಭೆ ಮಾಜಿ ಅಧ್ಯಕ್ಷರಾದ ಕೆ. ಜಿ. ಸುಬ್ರಹ್ಮಣ್ಯ, ನರಸಿಂಹರಾಜು, ಸದಸ್ಯ ಶಂಕರಸ್ವಾಮಿ, ಮಾಜಿ ಸದಸ್ಯ ಕೆ. ವಿನಯ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ಮಹದೇವ್, ನಗರ ಕಾಂಗ್ರೆಸ್ ಅಧ್ಯಕ್ಷ ಎಂ. ಜೆ. ರಮೇಶ್, ಪ್ರಧಾನ ಕಾರ್ಯದರ್ಶಿ ಮಹದೇವ್ ವಕ್ತಾರ ಸೈಯದ್ ಜಾಬೀರ್ ತಾಲೂಕು ಕಾಂಗ್ರೆಸ್ ಪ. ವಿಭಾಗದ ಅಧ್ಯಕ್ಷ ಮಹದೇವ ನಾಯಕ, ಎಸ್.ಟಿಎಪಿಸಿಎಂಎಸ್ ನಿರ್ದೇಶಕ ಡಿ.ಸಿ. ರವಿ, ತಹಸೀಲ್ದಾರ್ ಸಿ.ಎಸ್. ಪೂರ್ಣಿಮಾ, ತಾಪಂ ಇಒ ಜಿ.ಕೆ. ಹರೀಶ್, ತಾಲೂಕು ಆರೋಗ್ಯಾಧಿಕಾರಿ ಡಾ. ಡಿ. ನಟರಾಜು, ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಬಿ.ಜೆ. ನವೀನ್, ಸೆಸ್ಕಾಂ ಎಇಇ ಅರ್ಕೇಶ್ವರ ಮೂರ್ತಿ, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಎಸ್.ಎಂ. ಅಶೋಕ್ ಕುಮಾರ್, ಪುರಸಭೆ ಮುಖ್ಯಾಧಿಕಾರಿ ಡಾ. ಜಯಣ್ಣ ಇದ್ದರು.
- 10 ರಿಂದ ಜಾನುವಾರುಗಳ ಜಾತ್ರೆಕನ್ನಡಪ್ರಭ ವಾರ್ತೆ ಕೆ.ಆರ್. ನಗರ
ಆ ನಂತರ 18ರಂದು ಭಾನುವಾರ ಕಾವೇರಿ ನದಿಯಲ್ಲಿ ತಪ್ಪೋತ್ಸವ ಜರುಗಲಿದ್ದು, 11 ದಿನಗಳು ನಡೆಯಲಿರುವ ಜಾತ್ರಾ ಮಹೋತ್ಸವಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.