ಕನ್ನಡಪ್ರಭ ವಾರ್ತೆ ಪಾಂಡವಪುರ
ಬಳಿಕ ಮಾತನಾಡಿದ ಶಾಸಕರು, ತಾಲೂಕಿನ ಹಳೇಬೀಡು, ಸುಂಕಾತೊಣ್ಣೂರು ಭಾಗದ ಹಲವು ಗ್ರಾಮಗಳಿಗೆ ಪಾಂಡವಪುರ ಹಾಗೂ ಮಹದೇಶ್ವರಪುರ ಗ್ರಾಮದ ವಿದ್ಯುತ್ ಸಬ್ ಸ್ಟೇಷನ್ನಿಂದ ವಿದ್ಯುತ್ ವಿತರಣೆ ಮಾಡಲಾಗುತ್ತಿತ್ತು. ವಿದ್ಯುತ್ ಲೈನ್ ಉದ್ದವಾದ ಹಿನ್ನೆಲೆಯಲ್ಲಿ ಹೋಲ್ಟೇಜ್ ಸಮಸ್ಯೆಯಾಗಿ ರೈತರಿಗೆ ಸಾಕಷ್ಟು ಅನಾನುಕೂಲ ಉಂಟಾಗುತ್ತಿತ್ತು. ಆ ಹಿನ್ನೆಲೆಯಲ್ಲಿ ಚೀಕನಹಳ್ಳಿ ಬಳಿ ವಿದ್ಯುತ್ ಸಬ್ ಸ್ಟೇಷನ್ ನಿರ್ಮಾಣ ಮಾಡಲಾಗಿದೆ. ಮುಂದಿನ ದಿನದಲ್ಲಿ ಈ ಭಾಗದ ರೈತರಿಗೆ ಇಲ್ಲಿದಲೇ ವಿದ್ಯುತ್ ವಿತರಣೆ ಮಾಡಲಾಗುವುದು ಎಂದರು.
ಅವಮಾನ ವೈಪರಿತ್ಯದಿಂದ ಕಾಲಕಾಲಕ್ಕೆ ಮಳೆಯಾಗುತ್ತಿಲ್ಲ. ಇದರಿಂದ ವಿದ್ಯುತ್ ಸಮಸ್ಯೆ ಉಂಟಾಗಲಿದೆ. ರೈತರು ತಮ್ಮ ಜಮೀನುಗಳ ಬಳಿ ಸೋಲಾರ್ ಪ್ಲಾಂಟ್ ನಿರ್ಮಾಣ ಮಾಡಿಕೊಳ್ಳಬೇಕು. ತಾಲೂಕಿನ ಹಲವೆಡೆ ಸೋಲಾರ್ ಪವರ್ ಪ್ಲಾಂಟ್ ಗಳನ್ನು ನಿರ್ಮಾಣ ಮಾಡಲು ಕ್ರಮವಹಿಸಲಾಗಿದೆ ಎಂದರು.ಮಂಡ್ಯ ಜಿಲ್ಲೆಯಲಿಯೇ ಅತಿ ಹೆಚ್ಚು ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಇರುವುದರಿಂದ ಈ ಭಾಗಕ್ಕೆ ಆಸ್ಪತ್ರೆ ಮಂಜೂರು ಮಾಡಿಸುವುದು ಬಹಳ ಕಷ್ಟದ ವಿಷಯವಾಗಿದೆ. ಕೈಗಾರಿಕೆ ಆರಂಭಿಸುವುದಕ್ಕೆ ಮಾಣಿಕ್ಯನಹಳ್ಳಿ ಗೇಟ್ ಬಳಿಕ 10 ಎಕರೆ ಜಮೀನು ಗುರುತಿಸಲಾಗಿದೆ. ಅಲ್ಲಿ ಕೈಗಾರಿಕೆ ಸ್ಥಾಪನೆಗೆ, ಅಲ್ಲಲ್ಲಿ ಕೋಲ್ಡ್ ಸ್ಟೋರೆಜ್ ತೆರೆಯಲು, ಸುಂಕಾತೊಣ್ಣೂರು ಏತ ನೀರಾವರಿಯಿಂದ ಹಳೇಬೀಡು ಕೆರೆಗೂ ನೀರು ತುಂಬಿಸಲು ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.