ಮಲ್ಪೆಯ ಬಹದ್ದೂರ್‌ಘಡ ದ್ವೀಪಕ್ಕೆ ಶಾಸಕ, ಡಿಸಿ ಭೇಟಿ

KannadaprabhaNewsNetwork |  
Published : Feb 19, 2025, 12:46 AM IST
18ದ್ವೀಪ | Kannada Prabha

ಸಾರಾಂಶ

ಮಲ್ಪೆ ಕರಾವಳಿ ಕಾವಲು ಪೊಲೀಸ್ ವತಿಯಿಂದ ಮಲ್ಪೆ ಸಮೀಪದ ದರಿಯಾ ಬಹದ್ದೂರ್‌ಘಡ (ಲೈಟ್‌ ಹೌಸ್) ದ್ವೀಪ ಹಾಗೂ ಕೋಟೆ ದ್ವೀಪಗಳ ಭದ್ರತೆ, ಸ್ವಚ್ಛತೆ ಹಾಗೂ ಸಮಗ್ರ ಅಭಿವೃದ್ಧಿ ಧ್ಯೇಯದೊಂದಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಮಂಗಳವಾರ ಇತರ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಮಲ್ಪೆ ಕರಾವಳಿ ಕಾವಲು ಪೊಲೀಸ್ ವತಿಯಿಂದ ಮಲ್ಪೆ ಸಮೀಪದ ದರಿಯಾ ಬಹದ್ದೂರ್‌ಘಡ (ಲೈಟ್‌ ಹೌಸ್) ದ್ವೀಪ ಹಾಗೂ ಕೋಟೆ ದ್ವೀಪಗಳ ಭದ್ರತೆ, ಸ್ವಚ್ಛತೆ ಹಾಗೂ ಸಮಗ್ರ ಅಭಿವೃದ್ಧಿ ಧ್ಯೇಯದೊಂದಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಮಂಗಳವಾರ ಇತರ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ತಂಡದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅರುಣ್ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಕರಾವಳಿ ಕಾವಲು ಪೊಲೀಸ್ ಅಧೀಕ್ಷಕ ಮಿಥುನ್ ಎಚ್.ಎನ್. ನೇತೃತ್ವ ವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ಕರಾವಳಿ ಕಾವಲು ಪೊಲೀಸ್ ಉಪಾಧೀಕ್ಷಕ ತುಳಜಪ್ಪ ಸುಲ್ಫಿ, ಸಿ.ಎಸ್.ಪಿ. ಕೇಂದ್ರ ಕಚೇರಿಯ ಅಧಿಕಾರಿ, ಸಿಬ್ಬಂದಿ, ಮಲ್ಪೆ ಕರಾವಳಿ ಕಾವಲು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ಹಾಗೂ ಅಧಿಕಾರಿ ಸಿಬ್ಬಂದಿ, ಮಲ್ಪೆ ಪೊಲೀಸ್ ಠಾಣಾ ಅಧಿಕಾರಿ ಸಿಬ್ಬಂದಿ, ಕೆ.ಎನ್.ಡಿ. ಸಿಬ್ಬಂದಿ, ಉಡುಪಿ ನಗರ ಸಭೆಯ ಪೌರಕಾರ್ಮಿಕರು, ಬಂದರು ಇಲಾಖೆಯ ಅಧಿಕಾರಿಗಳು, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿ ಸಿಬ್ಬಂದಿ, ಸ್ಥಳೀಯ ವೈದ್ಯಾಧಿಕಾರಿ, ಅಗ್ನಿಶಾಮಕದಳದ ಅಧಿಕಾರಿ, ಸಿಬ್ಬಂದಿ, ಅರಣ್ಯ ಇಲಾಖೆಯ ಅಧಿಕಾರಿ ಸಿಬ್ಬಂದಿ ಹಾಗೂ ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಸುವರ್ಣ ಮತ್ತು ಮೀನುಗಾರರ ಸಂಘಟನೆ ಪದಾಧಿಕಾರಿಗಳು, ಉರಗ ತಜ್ಞರಾದ ಸ್ನೇಕ್ ಬಾಬಣ್ಣ ಹಾಗೂ ಜಲಕ್ರೀಡಾ ತರಬೇತುದಾರರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಗರದ 75 ಜಂಕ್ಷನ್‌ ಅಭಿವೃದ್ಧಿಗೆ ಗ್ರಹಣ!
ಎಚ್‌ಎಎಲ್‌ ಮತ್ತೆ ಸಾರ್ವಜನಿಕ ಬಳಕೆ ಪ್ರಸ್ತಾಪ ಪರಿಶೀಲನೆ:ಸಚಿವ