- ಶಾಸಕ ಜಿ.ಡಿ. ಹರೀಶ್ ಗೌಡ ವಿಶ್ವಾಸ
ಫೋಟೋ- 21ಎಂವೈಎಸ್ 60- ಹುಣಸೂರು ತಾಲೂಕು ಮರೂರು ಕಾವಲ್ ಗ್ರಾಮದಲ್ಲಿ ಶಾಸಕ ಜಿ.ಡಿ. ಹರೀಶ್ ಗೌಡ ಲೋಕಸಭಾ ಚುನಾವಣೆಯಲ್ಲಿ ಹಿನ್ನೆಲೆಯಲ್ಲಿ ಮತದಾನ ಮಾಡಿಸುವಂತೆ ಕಾರ್ಯಕರ್ತರಿಗೆ ಮಾಹಿತಿ ನೀಡಿದರು.
---ಕನ್ನಡಪ್ರಭ ವಾರ್ತೆ ಹುಣಸೂರು
ತಾಲೂಕಿನ ಹರವೆ, ಹಿರೀಕ್ಯಾತನಹಳ್ಳಿ, ಕಟ್ಟೆ ಮಳಲವಾಡಿ, ಮೋದೂರು, ಗ್ರಾಪಂ ವ್ಯಾಪ್ತಿಯ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದ ಜೆಡಿಎಸ್ ಪಕ್ಷದ ಕಾರ್ಯಕರ್ತರು ಯಾವುದೇ ಗೊಂದಲಗಳನ್ನು ಮಾಡಿಕೊಳ್ಳುವ ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ಪ್ರಾಮಾಣಿಕವಾಗಿ ಮೈತ್ರಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು.
ಇನ್ನು ಕಾಂಗ್ರೆಸ್ ಅಭ್ಯರ್ಥಿಗಳು ಮನೆಮನೆಗೆ ತೆರಳಿ ಗ್ಯಾರಂಟಿ ಕಾರ್ಡ್ ನೀಡಿ ಆಧಾರ್ ಕಾರ್ಡ್ ನಂಬರ್ ಬರೆಸು ನೀಡುತ್ತಿದ್ದಾರೆ. ಇದರ ಬಗ್ಗೆ ತಿಳಿ ಹೇಳಬೇಕು. 1 ಲಕ್ಷ ಕೊಡುವುದಕ್ಕೆ ಆಗುವುದಿಲ್ಲ. ಏಕೆಂದರೆ 40 ಕೋಟಿ ಬಿಪಿಎಲ್ ಕಾರ್ಡ್ ಗಳಿವೆ. ಇದಕ್ಕೆ 40 ಲಕ್ಷ ಕೋಟಿ ಅನುದಾನ ಬೇಕಾಗುತ್ತದೆ. ನಮ್ಮ ಕೇಂದ್ರ ಸರ್ಕಾರದ ಬಜೆಟ್ 47 ಲಕ್ಷ ಕೋಟಿ ಇದೆ. ಇದು ಬರಿ ಸುಳ್ಳು, ಜೊತೆಗೆ ಅಂಬೇಡ್ಕರ್ ಸಂವಿಧಾನ ಬದಲಾವಣೆ ಬಗ್ಗೆ ಅಪಪ್ರಚಾರದ ಬಗ್ಗೆ ಮೋದಿ ಈಗಾಗಲೇ ಮತ್ತೊಮ್ಮೆ ಅಂಬೇಡ್ಕರ್ ಹುಟ್ಟಿಬಂದರೂ ಸಂವಿಧಾನ ತೆಗೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಎಲ್ಲಾ ರಾಜ್ಯದ 28 ಕ್ಷೇತ್ರಗಳು ಎರಡು ಪಕ್ಷದ ಕಾರ್ಯಕರ್ತರಲ್ಲಿ ಹೊಂದಾಣಿಕೆ ಇದೆ. ಯಾವುದೇ ಗೊಂದಲ ಮಾಡಿಕೊಳ್ಳದೆ ಪ್ರಾಮಾಣಿಕವಾಗಿ ಪಕ್ಷದ ಪರವಾಗಿ ಕೆಲಸ ಮಾಡುತ್ತಾರೆ. ಕಾರ್ಯಕರ್ತರು ಯಾವುದೇ ನಿರೀಕ್ಷೆಗಳನ್ನು ಇಟ್ಟುಕೊಳ್ಳದೆ ಕೆಲಸ ಮಾಡಿ ಹುಣಸೂರಿನಲ್ಲಿ 95 ಲಕ್ಷ ಮತಗಳನ್ನು ಪಡೆದು ಜೆಡಿಎಸ್ ಕ್ಷೇತ್ರವಾಗಿದೆ. ಜೆಡಿಎಸ್ ಬಿಜೆಪಿ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಬೇಕು. ಇದರಿಂದ ಕ್ಷೇತ್ರದಲ್ಲಿ ಅನುದಾನ ಹೆಚ್ಚಾಗಿ ತರಲು ಕೇಂದ್ರದ ಅನುದಾನ ತರಲು ಸಹಾಯವಾಗುತ್ತದೆ ಎಂದು ಅವರು ತಿಳಿಸಿದರು.
ಈ ವೇಳೆ ತಾಲೂಕು ಜೆಡಿಎಸ್ ಮುಖಂಡ ಹರವೆ ಶ್ರೀಧರ್, ಕಟ್ಟೆಮಳಲವಾಡಿ ಗ್ರಾಪಂ ಅಧ್ಯಕ್ಷೆ ಚಿನ್ನು ಮುತ್ತು, ಮಾಜಿ ಅಧ್ಯಕ್ಷೆ ಕೂತೇ ಜಾಬಿ, ಮಾಜಿ ಉಪಾಧ್ಯಕ್ಷ ಅಬ್ದುಲ್ ಸುಭಾನ್, ಸದಸ್ಯರಾದ ಫಾರೂಕ್ ಅಹಮದ್, ಕುಚ್ಚಲೇ ಗೌಡ, ಈರೇಗೌಡ, ಮುಖಂಡರಾದ ಪುಟ್ಟರಾಜು, ನಾಗೇಶ್, ಹರೀಶ್, ಶ್ರೀಧರ್, ಶಿವಕುಮಾರ್, ಹರವೆ ಶಿವಣ್ಣ, ಸ್ವಾಮಿ ನಾಯಕ, ರಾಮೇನಹಳ್ಳಿ ನಟರಾಜ್, ಎಳನೀರು ಚಂದ್ರ ನಾಯಕ ಸೇರಿದಂತೆ 300ಕ್ಕೂ ಹೆಚ್ಚು ಕಾರ್ಯಕರ್ತರು ಇದ್ದರು.