ಗುಂಡ್ಲುಪೇಟೆ ಕ್ಷೇತ್ರದಲ್ಲಿ ₹1.90 ಕೋಟಿ ವೆಚ್ಚದ 7 ಕೆಲಸಕ್ಕೆ ಶಾಸಕ ಗಣೇಶ್‌ ಶಂಕು

KannadaprabhaNewsNetwork |  
Published : Jun 13, 2026, 01:30 AM IST
ಗುಂಡ್ಲುಪೇಟೆ ತಾಲೂಕಿನ ಸೋಮಹಳ್ಳಿಯಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಶಾಸಕ ಎಚ್.ಎಂ. ಗಣೇಶ್‌ ಪ್ರಸಾದ್‌ ಭೂಮಿಪೂಜೆ ನೆರವೇರಿಸಿದರು. | Kannada Prabha

ಸಾರಾಂಶ

1.9 ಕೋಟಿ ರು. ವೆಚ್ಚದಲ್ಲಿ 5 ಗ್ರಾಮಗಳಲ್ಲಿ ೭ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಚ್.ಎಂ. ಗಣೇಶ್‌ ಪ್ರಸಾದ್‌ ಸರಣಿ ಭೂಮಿ ಪೂಜೆ ನೆರವೇರಿಸಿದರು.

ಸಿಸಿ ರಸ್ತೆ, ಚರಂಡಿ ಸೇರಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ

---

ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ

1.9 ಕೋಟಿ ರು. ವೆಚ್ಚದಲ್ಲಿ 5 ಗ್ರಾಮಗಳಲ್ಲಿ ೭ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಚ್.ಎಂ. ಗಣೇಶ್‌ ಪ್ರಸಾದ್‌ ಸರಣಿ ಭೂಮಿ ಪೂಜೆ ನೆರವೇರಿಸಿದರು.

ತಾಲೂಕಿನ ಹುಣಸಿನಪುರ ಗ್ರಾಮದ ಸಾಮಾನ್ಯ ವರ್ಗದ ಬೀದಿಯಲ್ಲಿ 30 ಲಕ್ಷ ರು. ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಬಳಿಕ ಮಾತನಾಡಿದರು.

ತಾಲೂಕಿನ ಸೋಮಹಳ್ಳಿ ಗ್ರಾಮದ ಪರಿಶಿಷ್ಟ ಪಂಗಡದ ಬೀದಿಯಲ್ಲಿ 25 ಲಕ್ಷ ರು. ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಹಾಗೂ ಸೋಮಹಳ್ಳಿ ಗ್ರಾಮದಲ್ಲಿ 20 ಲಕ್ಷ ರು. ವೆಚ್ಚದಲ್ಲಿ ಬಾಬು ಜಗಜೀವನ ರಾಂ ಸಮುದಾಯ ಭವನಕ್ಕೆ ಗುದ್ದಲಿ ನೆರವೇರಿಸಲಾಗಿದೆ ಎಂದರು.

ಶ್ಯಾನಡ್ರಹಳ್ಳಿ ಗ್ರಾಮದಲ್ಲಿ ಸಾಮಾನ್ಯ ವರ್ಗದ ಬೀದಿಯಲ್ಲಿ 50 ಲಕ್ಷ ರು. ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ, ತೆರಕಣಾಂಬಿ ಗ್ರಾಮದ ಪರಿಶಿಷ್ಟ ಪಂಗಡದ ಬೀದಿಯಲ್ಲಿ 50 ಲಕ್ಷ ರು. ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಚಾಲನೆ ಸಿಗಲಿದೆ ಎಂದರು.

ತಾಲೂಕಿನ ತೆರಕಣಾಂಬಿ ಗ್ರಾಮದ ಕುಂಬಾರ ಸಮುದಾಯ ಭವಕ್ಕೆ 10 ಲಕ್ಷ ರು., ಸೋಮನಪುರ ಗ್ರಾಮದ ಪರಿಶಿಷ್ಟ ಪಂಗಡದ ಬೀದಿಯಲ್ಲಿ 25 ಲಕ್ಷ ರು. ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೂ ಭೂಮಿ ಪೂಜೆ ನೆರವೇರಿಸಲಾಗುವುದು ಎಂದರು.

ಶಾಸಕರೊಂದಿಗೆ ಕಾಡ ಮಾಜಿ ಅಧ್ಯಕ್ಷ ಎಚ್.ಎಸ್. ನಂಜಪ್ಪ, ಎಪಿಎಂಸಿ ಅಧ್ಯಕ್ಷ ಆರ್‌.ಎಸ್. ನಾಗರಾಜು, ಜಿಪಂ ಮಾಜಿ ಉಪಾಧ್ಯಕ್ಷ ಪಿ. ಮಹದೇವಪ್ಪ, ಎಪಿಎಂಸಿ ಮಾಜಿ ಅಧ್ಯಕ್ಷ ಎಸ್. ಶಿವನಾಗಪ್ಪ, ಮೃತ್ಯುಂಜಯ, ತಾಪಂ ಮಾಜಿ ಅಧ್ಯಕ್ಷ ಎಸ್.ಎಸ್. ಮಧುಶಂಕರ್‌, ಹಾಪ್‌ ಕಾಮ್ಸ್‌ ಮಾಜಿ ಅಧ್ಯಕ್ಷ ಸದಾಶಿವಪ್ಪ, ಕೋಟೆಕೆರೆ ಫ್ಯಾಕ್ಸ್‌ ಅಧ್ಯಕ್ಷ ಕೆ.ಎಂ. ಮಹದೇವಸ್ವಾಮಿ, ಮುಖಂಡ ದೇಪಾಪುರ ಸಿದ್ದಪ್ಪ, ಸೋಮಹಳ್ಳಿ ಸದಾನಂದ, ಮೂಗೂರು ಪುಟ್ಟಣ್ಣ, ಕುಮಾರಸ್ವಾಮಿ, ವಿಷಕಂಠ ಮೂರ್ತಿ, ಅಶೋಕ ಮರಳಾಪುರ, ವಡ್ಡಗೆರೆ ನಾಗಪ್ಪ, ಕೆ.ಎಂ. ಬಸವಣ್ಣ, ರಮೇಶ್‌ ನಾಯಕ ಸೇರಿದಂತೆ ಆಯಾಯ ಗ್ರಾಮದ ಕಾಂಗ್ರೆಸ್‌ ಕಾರ್ಯಕರ್ತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯೂರಿಯಾ ಅಭಾವ ಖಂಡಿಸಿ ರೈತ ಸಂಘ ಪ್ರತಿಭಟನೆ
ನೀಟ್‌ ಅಕ್ರಮ: ಸಂಸದರ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ