ಮೊಟ್ಟೆ ವಿತರಣೆಗೆ ಶಾಸಕ ಗೋಪಾಲಕೃಷ್ಣ ಚಾಲನೆ

KannadaprabhaNewsNetwork |  
Published : Sep 28, 2024, 01:24 AM IST
ಚಿತ್ರಶೀರ್ಷಿಕೆ27ಎಂಎಲ್ ಕೆ3ಮೊಳಕಾಲ್ಮುರು ತಾಲೂಕಿನ ರಾಂಪುರ ಗ್ರಾಮದಲ್ಲಿಅಜೀಂ ಪ್ರೇಮ್ ಜಿ ಫೌಂಡೇಶನ್  ಸಹಭಾಗಿತ್ವದಲ್ಲಿ ಶಾಲಾ ಮಕ್ಕಳಿಗೆ ನೀಡಲಾಗುತ್ತಿರುವ ಮೊಟ್ಟೆ ವಿತರಣೆ ಗೆ ಶಾಸಕ ಎನ್ ವೈ ಗೋಪಾಲಕೃಷ್ಣ ಚಾಲನೆ ನೀಡಿದರು. | Kannada Prabha

ಸಾರಾಂಶ

ಅಪೌಷ್ಠಿಕತೆ ಹೋಗಲಾಡಿಸಲು ಅಜೀಂ ಪ್ರೇಮ್ ಜಿ ಫೌಂಡೇಶನ್ ಅವರು ವಾರದ ಪ್ರತಿ ದಿನವೂ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಗೆ ಮುಂದಾಗಿರುವುದು ಶ್ಲಾಘನೀಯ ಎಂದು ಶಾಸಕ ಎನ್ ವೈ. ಗೋಪಾಲಕೃಷ್ಣ ಹೇಳಿದರು.

ಕನ್ನಡಪ್ರಭ ವಾರ್ತೆ ಮೊಳಕಾಲ್ಮುರು

ಅಪೌಷ್ಠಿಕತೆ ಹೋಗಲಾಡಿಸಲು ಅಜೀಂ ಪ್ರೇಮ್ ಜಿ ಫೌಂಡೇಶನ್ ಅವರು ವಾರದ ಪ್ರತಿ ದಿನವೂ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಗೆ ಮುಂದಾಗಿರುವುದು ಶ್ಲಾಘನೀಯ ಎಂದು ಶಾಸಕ ಎನ್ ವೈ. ಗೋಪಾಲಕೃಷ್ಣ ಹೇಳಿದರು.

ತಾಲೂಕಿನ ರಾಂಪುರ ಗ್ರಾಮದ ಗಡ್ಡೆ ವೀರಭದ್ರಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶುಕ್ರವಾರ ಅಜೀಂ ಪ್ರೇಮ್ ಜಿ ಫೌಂಡೇಶನ್ ಸಹಭಾಗಿತ್ವದಲ್ಲಿ ಶಾಲಾ ಮಕ್ಕಳಿಗೆ ನೀಡಲಾಗುತ್ತಿರುವ ಮೊಟ್ಟೆ ವಿತರಿಸಿ ಮಾತನಾಡಿದರು.

ಶಾಲಾ ಮಕ್ಕಳಲ್ಲಿ ಅಪೌಷ್ಠಿಕತೆ ನಿವಾರಣೆ ಮಾಡಿ, ಪೌಷ್ಠಿಕತೆ ವೃದ್ಧಿಸಲು ಅಜೀಂ ಪ್ರೇಮ್ ಜಿ ಫೌಂಡೇಶನ್ ಅವರು ಪ್ರತಿ ದಿನವೂ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಗೆ ದಿಟ್ಟ ನಿರ್ಧಾರ ಮಾಡಿರುವುದು ಶ್ಲಾಘನೀಯ. ಇದರಿಂದ ಮಕ್ಕಳು ಸದೃಢವಂತಾರಾಗಲು ನೆರವಾಗಿದೆ. ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಿತ್ಯವೂ ಮೊಟ್ಟೆ ವಿತರಿಸಲಾಗುವುದು ಎಂದು ತಿಳಿಸಿದರು.

ಈ ಯೋಜನೆಗೆ ಎಲ್ಲಿಯೂ ಲೋಪಗಳಾಗದಂತೆ ಯಶಸ್ವಿಗೊಳಿಸಬೇಕು. ಮೊಟ್ಟೆ ವಿತರಣೆಯಿಂದ ಮಕ್ಕಳು ಶಿಕ್ಷಣ ಕುರಿತು ಉತ್ಸಾಹವಂತರಾಗಿ ಶಾಲೆಗೆ ಆಗಮಿಸುತ್ತಾರೆ ಎಂದರು. ಮಕ್ಕಳು ಯೋಜನೆಯ ಸೌಲಭ್ಯವನ್ನು ಸದ್ಭಳಕೆ ಮಾಡಿಕೊಂಡು ಸದೃಢವಂತರಾಗಬೇಕು ಎಂದು ತಿಳಿಸಿದರು.

ತಹಸೀಲ್ದಾರ್ ಜಗದೀಶ್, ತಾಪಂ ಇ.ಒ ಹನುಮಂತಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ನಿರ್ಮಲಾದೇವಿ, ಕ್ಷೇತ್ರ ಸಮನ್ವಯಾಧಿಕಾರಿ ತಿಪ್ಪೇಸ್ವಾಮಿ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಪಾತಲಿಂಗಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗವೇಣಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಶೋಕ್, ಮುಖ್ಯ ಶಿಕ್ಷಕ ಹನುಮಂತಪ್ಪ, ಎಸ್ ಡಿಎಂಸಿ ಅಧ್ಯಕ್ಷ ಹೊನ್ನೂರಪ್ಪ, ತಾಪಂ ವ್ಯವಸ್ಥಾಪಕ ನಂದೀಶ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!