ಕೆಎಸ್ ಆರ್ ಟಿಸಿ ಅಧಿಕಾರಿಗಳೊಂದಿಗೆ ಶಾಸಕ ಎಚ್.ಟಿ.ಮಂಜು ಚರ್ಚೆ

KannadaprabhaNewsNetwork |  
Published : Mar 25, 2025, 12:47 AM IST
24ಕೆಎಂಎನ್ ಡಿ18 | Kannada Prabha

ಸಾರಾಂಶ

ಸಾರಿಗೆ ಬಸ್ ಸಂಚಾರದಲ್ಲಿನ ಸಮಸ್ಯೆಗಳ ಬಗ್ಗೆ ಶಾಸಕ ಎಚ್.ಟಿ.ಮಂಜು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವಿಭಾಗೀಯ ನಿಯಂತ್ರಣಾಧಿಕಾರಿ ಎಸ್.ಬಿ.ನಾಗರಾಜು ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಿ ಚರ್ಚಿಸಿದರು.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಸಾರಿಗೆ ಬಸ್ ಸಂಚಾರದಲ್ಲಿನ ಸಮಸ್ಯೆಗಳ ಬಗ್ಗೆ ಶಾಸಕ ಎಚ್.ಟಿ.ಮಂಜು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವಿಭಾಗೀಯ ನಿಯಂತ್ರಣಾಧಿಕಾರಿ ಎಸ್.ಬಿ.ನಾಗರಾಜು ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಿ ಚರ್ಚಿಸಿದರು.

ಪಟ್ಟಣದ ತಾಲೂಕು ಪಂಚಾಯತಿ ಆವರಣದ ಶಾಸಕರ ಕಚೇರಿಯಲ್ಲಿ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಶಾಸಕರು, ತಾಲೂಕಿನ ವಿವಿಧೆಡೆ ಸಾರಿಗೆ ಬಸ್ ಸಂಚಾರ ವ್ಯವಸ್ಥೆ ಮಾಹಿತಿ ಪಡೆದರು. ಶಾಲಾ ಕಾಲೇಜುಗಳ ಮಕ್ಕಳಿಗೆ ಉಂಟಾಗಿರುವ ಬಸ್ ಸಮಸ್ಯೆಯನ್ನು ಪರಿಹರಿಸಲು ಅಗತ್ಯ ಕ್ರಮ ವಹಿಸುವಂತೆ ಸೂಚಿಸಿದರು.

ತಾಲೂಕಿನ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು ಪ್ರಾಥಮಿಕ ಹಂತದಿಂದ ಕಾಲೇಜು ಹಂತದವರೆಗೆ ಕಲಿಯಲು ಪಟ್ಟಣದ ಶಾಲಾ ಕಾಲೇಜುಗಳಿಗೆ ನಿತ್ಯ ಬರುತ್ತಾರೆ. ವಿದ್ಯಾರ್ಥಿಗಳಲ್ಲದೆ ಸಂತೆ ವ್ಯಾಪಾರ ಸೇರಿದಂತೆ ತಮ್ಮ ದೈನಂದಿನ ವ್ಯವಹಾರಗಳಿಗೆ ರೈತ ಸಮುದಾಯವೂ ಪಟ್ಟಣಕ್ಕೆ ಬಂದು ಹೋಗುತ್ತದೆ ಎಂದರು.

ರೈತರು ಮತ್ತು ವಿದ್ಯಾರ್ಥಿಗಳಿಗೆ ಅಗತ್ಯವಾಗಿರುವ ಸಮಯದಲ್ಲಿ ಬಸ್ ವ್ಯವಸ್ಥೆಯಿಲ್ಲದೆ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಪಟ್ಟಣದಲ್ಲಿ ಬಸ್ ಡಿಪೋ ಇದ್ದರೂ ಗ್ರಾಮೀಣ ಸಾರಿಗೆ ವ್ಯವಸ್ಥೆ ನಿರ್ವಹಣೆ ಸಮರ್ಪಕವಾಗಿಲ್ಲ. ಅಗತ್ಯ ಇರುವ ಮಾರ್ಗಗಳಲ್ಲಿ ಬಸ್ ರೂಟ್ ಹೆಚ್ಚಿಸಬೇಕು. ಶಾಲಾ ಕಾಲೇಜಿನ ವಿದ್ಯಾರ್ಥಿಗಳ ಅನುಕೂಲಕ್ಕೆ ತಕ್ಕಂತೆ ಬೆಳಗ್ಗೆ ಮತ್ತು ಸಂಜೆ ರೂಟ್ ಆಪರೇಟ್ ಮಾಡಬೇಕು ಎಂದು ತಾಕೀತು ಮಾಡಿದರು.

ಕೆ.ಆರ್.ಪೇಟೆ- ಹರಿಹರಪುರ- ಮಡುವಿನಕೋಡಿ ಮಾರ್ಗವಾಗಿ ಬೂಕನಕೆರೆ, ಕೆ.ಆರ್.ಪೇಟೆ- ಎತ್ತುಗೋನಹಳ್ಳಿ, ಕೆ.ಆರ್.ಪೇಟೆ- ಕಿಕ್ಕೇರಿ- ಸಾಸಲು ಮಾರ್ಗವಾಗಿ ಶ್ರವಣಬೆಳಗೊಳ, ಕೆ.ಆರ್.ಪೇಟೆ- ಚಿಕ್ಕಗಾಡಿಗನಹಳ್ಳಿಗೆ ಹೊಸ ಬಸ್ ರೂಟ್ ಆಪರೇಟ್ ಮಾಡುವುದಾಗಿ ಮೈಸೂರು ವಿಭಾಗೀಯ ನಿಯಂತ್ರಣಾಧಿಕಾರಿ ನಾಗರಾಜು ತಿಳಿಸಿದರು.

ಮೈಸೂರು - ಚನ್ನರಾಯಪಟ್ಟಣ ರಾಜ್ಯ ಹೆದ್ದಾರಿಯಲ್ಲಿ ಬರುವ ಮಾದಾಪುರ ಗೇಟ್ ಬಳಿ ವೇಗದೂತ ಬಸ್‌ಗಳ ನಿಲುಗಡೆಗೆ ಕ್ರಮವಹಿಸುವುದಾಗಿ ಹೇಳಿದರು.

ಸಭೆಯಲ್ಲಿ ವಿಭಾಗೀಯ ಸಂಚಾರ ನಿಯಂತ್ರಣಧಿಕಾರಿ ಪರಮೇಶ್ವರಪ್ಪ, ಕೆ.ಆರ್.ಪೇಟೆ ಬಸ್ ಡಿಪೋ ವ್ಯವಸ್ಥಾಪಕಿ ವನಿತ, ಸಂಚಾರ ನಿಯಂತ್ರಕ ರವಿ ಸೇರಿದಂತೆ ಗ್ರಾಮೀಣ ಭಾಗದ ವಿವಿಧ ಜನ ಮುಖಂಡರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಟಿ ಆತ್ಮ*ತ್ಯೆಗೆ ಸರ್ಕಾರಿ ನೌಕರಿಗೆ ಸೇರುವಂತೆ ಕುಟುಂಬ ಒತ್ತಡ ಕಾರಣ?
ನಮ್ಮವರಿಗೆ ಇಲ್ಲದ ಪರಿಹಾರ ಅವರಿಗೆ ಏಕೆ : ಬಿಜೆಪಿ ಆಕ್ರೋಶ