ಮೊರಾರ್ಜಿ ವಸತಿ ಶಾಲೆಗೆ ಶಾಸಕ ಹಂಪನಗೌಡ ಬಾದರ್ಲಿ ಭೇಟಿ

KannadaprabhaNewsNetwork |  
Published : Aug 01, 2026, 01:30 AM IST
31ಕೆಪಿಎಂಎಸ್ಕೆ03:  | Kannada Prabha

ಸಾರಾಂಶ

ಬಡ ಕುಟುಂಬದ ಮಕ್ಕಳು ವಿದ್ಯಾಭ್ಯಾಸಕ್ಕಾಗಿ ಹಾಸ್ಟೆಲ್‌ಗೆ ಬಂದಿದ್ದಾರೆ. ಅವರನ್ನು ನಿಮ್ಮ ಮಕ್ಕಳಂತೆ ನೋಡಿಕೊಳ್ಳಬೇಕು. ಚೆನ್ನಾಗಿ ಬೇಯಿಸಿದ ಊಟ ಕೊಡಬೇಕು. ಇಲ್ಲದಿದ್ದರೆ ನಿಮ್ಮನ್ನು ಕೆಲಸದಿಂದ ತೆಗೆದುಹಾಕಲು ಅಧಿಕಾರಿಗಳಿಗೆ ಸೂಚಿಸಬೇಕಾಗುತ್ತದೆ ಎಂದು ಶಾಸಕ ಹಂಪನಗೌಡ ಬಾದರ್ಲಿ ಮುಖ್ಯ ಅಡುಗೆಯವರಿಗೆ ಎಚ್ಚರಿಕೆ ನೀಡಿದರು.

ಕನ್ನಡಪ್ರಭ ವಾರ್ತೆ ಸಿಂಧನೂರು

ಬಡ ಕುಟುಂಬದ ಮಕ್ಕಳು ವಿದ್ಯಾಭ್ಯಾಸಕ್ಕಾಗಿ ಹಾಸ್ಟೆಲ್‌ಗೆ ಬಂದಿದ್ದಾರೆ. ಅವರನ್ನು ನಿಮ್ಮ ಮಕ್ಕಳಂತೆ ನೋಡಿಕೊಳ್ಳಬೇಕು. ಚೆನ್ನಾಗಿ ಬೇಯಿಸಿದ ಊಟ ಕೊಡಬೇಕು. ಇಲ್ಲದಿದ್ದರೆ ನಿಮ್ಮನ್ನು ಕೆಲಸದಿಂದ ತೆಗೆದುಹಾಕಲು ಅಧಿಕಾರಿಗಳಿಗೆ ಸೂಚಿಸಬೇಕಾಗುತ್ತದೆ ಎಂದು ಶಾಸಕ ಹಂಪನಗೌಡ ಬಾದರ್ಲಿ ಮುಖ್ಯ ಅಡುಗೆಯವರಿಗೆ ಎಚ್ಚರಿಕೆ ನೀಡಿದರು.

ನಗರದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 55ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಗುರುವಾರ ವಿಷ ಮಿಶ್ರಿತ ಆಹಾರ ಸೇವಿಸಿ ಅಸ್ವಸ್ಥರಾದ ಘಟನೆಯ ಹಿನ್ನೆಲೆಯಲ್ಲಿ ಶುಕ್ರವಾರ ಶಾಸಕ ಹಂಪನಗೌಡ ಬಾದರ್ಲಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಭೇಟಿ ನೀಡಿ ವಿದ್ಯಾರ್ಥಿನಿಯರೊಂದಿಗೆ ಚರ್ಚಿಸಿ ಹಾಸ್ಟೆಲ್ ವ್ಯವಸ್ಥೆ ಕುರಿತು ಮಾಹಿತಿ ಪಡೆದರು.

ಹಾಸ್ಟೆಲ್‌ ಸ್ವಚ್ಛತೆ, ಊಟದ ವ್ಯವಸ್ಥೆ, ಅಭ್ಯಾಸ ಕುರಿತಾಗಿ ಹಲವು ಬಗೆಯ ಪ್ರಶ್ನೆಗಳನ್ನು ಕೇಳಿ ವಿದ್ಯಾರ್ಥಿನಿಯೊಂದಿಗೆ ಮಾಹಿತಿ ಪಡೆದರು. ಪ್ರಾಚಾರ್ಯರು ಮತ್ತು ಮೇಲ್ವಿಚಾರಕರಿಂದ ತಮಗೆ ಯಾವುದೇ ತೊಂದರೆ ಇಲ್ಲ. ಅಡುಗೆ ಮಾಡುವ ಮಹಿಳೆಯರು ಮಾತ್ರ ತಮಗೆ ತೊಂದರೆ ಕೊಡುತ್ತಿದ್ದಾರೆ, ಹಲವಾರು ಬಾರಿ ನಿಂದಿಸಿದ್ದಾರೆ, ಮಂಡಾಳ ಮತ್ತು ಅವಲಕ್ಕಿ ಒಗ್ಗರಣೆಗಳನ್ನು ರುಚಿಯಾಗಿ ಮಾಡುವುದಿಲ್ಲ ಎಂದು ವಿದ್ಯಾರ್ಥಿನಿಯರು ತಮ್ಮ ಅಳಲನ್ನು ತೋಡಿಕೊಂಡರು.

ಆರೋಗ್ಯ ಸೇವೆಗಳ ಗುಣಮಟ್ಟ ಕಾಪಾಡಲು ಸೂಚನೆ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ನಂದಿತಾ ಹಾಗೂ ಅವರ ಅಧಿಕಾರಿಗಳ ತಂಡವು ಸಿಂಧನೂರಿನ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ಮಾಡಿ ಆಸ್ಪತ್ರೆಯ ಸ್ಥಿತಿಗತಿ ಪರಿಶೀಲನೆ ನಡೆಸಿದರು.

ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ಚಂದ್ರಶೇಖರಯ್ಯ, ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ಯಶೋದಾ, ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಿವುಕುಮಾರ ನಾರ, ಸಿಂಧನೂರು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅಯ್ಯನಗೌಡ,ಇಲಾಖೆ, ಆಸ್ಪತ್ರೆಯ ಅಧಿಕಾರಿ, ಸಿಬ್ಬಂದಿ, ತಜ್ಞ ವೈದ್ಯರು ಹಾಜರಿದ್ದರು.

ಮಸ್ಕಿ ವಸತಿ ಶಾಲೆಗೆ ಶಾಸಕ ತುರ್ವಿಹಾಳ ಭೇಟಿ

ಮಸ್ಕಿ: ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸೇರಿದಂತೆ ವಿವಿಧ ವಸತಿ ಶಾಲೆಗಳಿಗೆ ಖಾದಿ ಗ್ರಾಮೋದ್ಯೋಗ ನಿಗಮದ ಅಧ್ಯಕ್ಷ ಶಾಸಕ ಆರ್ ಬಸನಗೌಡ ತುರುವಿಹಾಳ ಶುಕ್ರವಾರ ಭೇಟಿ ನೀಡಿ ಆಹಾರ ಧಾನ್ಯಗಳನ್ನು ಪರಿಶೀಲನೆ ನಡೆಸಿದರು.

ಗ್ಯಾರಂಟಿ ಯೋಜನೆ ಸಮಿತಿಯ ತಾಲೂಕು ಅಧ್ಯಕ್ಷ ಮೈಬುಸಾಬ್ ಮುದ್ದಾಪುರ್, ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ಹನುಮಂತಪ್ಪ ಮುದ್ದಾಪುರ್, ಪ್ರಾಂಶುಪಾಲರಾದ ನಾಗೇಶ್ ಸೇರಿದಂತೆ ಇನ್ನಿತರ ಶಿಕ್ಷಕರು, ಮುಖಂಡರು ಇದ್ದರು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಸ್ತುನಿಷ್ಠ ವರದಿ ಪತ್ರಿಕೋದ್ಯಮದ ಮೂಲ ಧರ್ಮ: ರಶ್ಮಿ ಎಸ್‌.
33 ವರ್ಷಗಳ ಸರ್ಕಾರಿ ಸೇವೆ ತೃಪ್ತಿ ತಂದಿದೆ: ರವಿಕುಮಾರ್‌ ಅಭಿಮತ