ಮಳೆ ಹಾನಿ ಸ್ಥಳಕ್ಕೆ ಶಾಸಕ ಹಿಟ್ನಾಳ ಭೇಟಿ

KannadaprabhaNewsNetwork |  
Published : Aug 23, 2026, 02:15 AM IST
22ಕೆಕೆಆರ್1: ಕೊಪ್ಪಳ ಶಾಸಕ ಕೆ ರಾಘವೇಂದ್ರ ಹಿಟ್ನಾಳ ಮಳೆಯಿಂದ ಹಾನಿಗೊಳಗಾದ ಕೊಪ್ಪಳ -ಹಿರೇಸಿಂದೋಗಿ ರಸ್ತೆ ವೀಕ್ಷಣೆ ಮಾಡಿದರು.  | Kannada Prabha

ಸಾರಾಂಶ

ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ,ಅಗತ್ಯವಿರುವ ಕಡೆಗಳಲ್ಲಿ ತುರ್ತು ದುರಸ್ತಿ ಕಾಮಗಾರಿ ಕೈಗೊಳ್ಳಲಾಗುವುದು.

ಕೊಪ್ಪಳ: ನಗರದಲ್ಲಿ ಸುರಿದ ಮಳೆಯಿಂದ ವಿವಿಧ ಪ್ರದೇಶಗಳಲ್ಲಿ ರಸ್ತೆ ಹಾಗೂ ಚರಂಡಿ ವ್ಯವಸ್ಥೆಗೆ ಹಾನಿಯಾಗಿದ್ದು, ಮಳೆ ನೀರು ಸರಾಗವಾಗಿ ಹರಿದು ಹೋಗದೆ ಸಾರ್ವಜನಿಕರಿಗೆ ತೊಂದರೆಯಾಗಿರುವ ಹಿನ್ನೆಲೆ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಗರದ ವಿವಿಧ ಬಡಾವಣೆಗಳಿಗೆ ತೆರಳಿ ಮಳೆಯಿಂದ ಹಾನಿಗೊಳಗಾದ ರಸ್ತೆ, ಚರಂಡಿ ಹಾಗೂ ಮಳೆ ನೀರು ಹರಿಯುವ ವ್ಯವಸ್ಥೆ ಶಾಸಕರು ಸ್ಥಳದಲ್ಲೇ ಪರಿಶೀಲಿಸಿದರು. ಸ್ಥಳೀಯ ನಿವಾಸಿಗಳಿಂದ ಸಮಸ್ಯೆಗಳ ಕುರಿತು ಮಾಹಿತಿ ಪಡೆದುಕೊಂಡರು. ಮಳೆಯಿಂದ ಹಾನಿಗೊಳಗಾದ ರಸ್ತೆ ಹಾಗೂ ಚರಂಡಿ ವ್ಯವಸ್ಥೆ ತ್ವರಿತವಾಗಿ ದುರಸ್ತಿಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮಳೆ ನೀರು ಸರಾಗವಾಗಿ ಹರಿದು ಹೋಗಲು ಅಗತ್ಯ ಕ್ರಮ ಕೈಗೊಳ್ಳಬೇಕು ಹಾಗೂ ಹಾನಿಗೊಳಗಾದ ರಸ್ತೆಗಳ ದುರಸ್ತಿಗೆ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ,ಅಗತ್ಯವಿರುವ ಕಡೆಗಳಲ್ಲಿ ತುರ್ತು ದುರಸ್ತಿ ಕಾಮಗಾರಿ ಕೈಗೊಳ್ಳಲಾಗುವುದು. ನಗರದಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿ ಹಾಗೂ ಸಾರ್ವಜನಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಸನ್ನ ಗಡಾದ್, ಜಿಪಂ ಮಾಜಿ ಸದಸ್ಯ ಗವಿಸಿದ್ದಪ್ಪ ಕರಡಿ, ನಗರಸಭೆ ಮಾಜಿ ಅಧ್ಯಕ್ಷ ಅಮ್ಜದ್ ಪಟೇಲ್, ಮಹೇಂದ್ರ ಚೋಪ್ರಾ, ಕತೀಬ್ ಬಾಷು, ನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ ಕಾಟನ್ ಪಾಷಾ, ಶಿವಕುಮಾರ್ ಶೆಟ್ಟರ್, ಅರುಣ್ ಅಪ್ಪುಶೆಟ್ಟಿ, ಅಜೀಮ್ ಅತ್ತರ್, ಅಜ್ಜಪ್ಪ ಕೊಪ್ಪಳ, ವೀರಣ್ಣ ಸಂಡೂರ್, ಮಹೆಬೂಬ್ ಅರಗಂಜಿ, ಹಾಜಿ ಹುಸೈನ್, ಮಲ್ಲು ಪೂಜಾರ್,ಯೋಜನಾ ನಿರ್ದೇಶಕ ಮಂಜುನಾಥ್ ಗುಂಡೂರು, ಜೆಯಿ ಸೋಮಲಿಂಗಪ್ಪ, ಅಕ್ಬರ್ ಪಲ್ಟಾನ್ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಂಡರಗಿ: ಬಿಸಿಯೂಟದ ಉಪ್ಪಿಟ್ಟಿನಲ್ಲಿ ಹಲ್ಲಿ ಪತ್ತೆ, 160 ವಿದ್ಯಾರ್ಥಿಗಳು ಅಸ್ವಸ್ಥ
ದೇಗುಲಗಳು ಶಾಂತಿ, ನೆಮ್ಮದಿ ನೀಡುವ ಪವಿತ್ರ ಕೇಂದ್ರಗಳು: ಫಕೀರ ಸಿದ್ಧರಾಮ ಸ್ವಾಮೀಜಿ