ಕನ್ನಡಪ್ರಭ ವಾರ್ತೆ ಮಳವಳ್ಳಿ
ರಾಜೀವ್ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪರಶುರಾಂ ಸೇರಿದಂತೆ ಇತರೆ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಮಾತನಾಡಿ, ಹಲವು ವರ್ಷಗಳಿಂದ ನೆನಗುದಿಗೆ ಬಿದ್ದಿದ್ದ ಖಾಲಿ ನಿವೇಶನವನ್ನು ಬಿಪಿಎಲ್ ಚೀಟಿ ಹೊಂದಿರುವ ಬಡವರಿಗೆ ಹಂಚಿಕೆ ಮಾಡಲು ಈಗಾಗಲೇ ಅರ್ಜಿ ಅಹ್ವಾನಿಸಲಾಗಿದೆ ಎಂದರು.
ಶೀಘ್ರದಲ್ಲಿಯೇ ನಿವೇಶನ ಹಂಚಿಕೆ ಮಾಡಲಾಗುವುದು. ಈಗಾಗಲೇ ರಾಜೀವ್ಗಾಂಧಿ ವಸತಿ ನಿಗಮದ ಅಧಿಕಾರಿಗಳು ಭೇಟಿ ನೀಡಿ ನಿವೇಶನಕ್ಕೆ ಮೂಲ ಸೌಲಭ್ಯ ಸೇರಿದಂತೆ ಅಗತ್ಯ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.ಪುರಸಭೆಯಿಂದ ಕಾನೂನು ತೊಡಕುಗಳು ಬಾರದಂತೆ ಎಚ್ಚರಿಕೆ ವಹಿಸಬೇಕು. ಅರ್ಹ ಫಲಾನುಭವಿಗಳಿಗೆ ನಿವೇಶನ ಸಿಗುವಂತೆ ನೋಡಿಕೊಳ್ಳಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ನಾಗರತ್ನ ಅವರಿಗೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ನಾಗರತ್ನ, ತಾಪಂ ಇಒ ಶ್ರೀನಿವಾಸ್ ಸೇರಿದಂತೆ ಇತರರು ಇದ್ದರು.
ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಪಟ್ಟಣದ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಶಾಸಕರು ಮಾತನಾಡಿ, ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಎಲ್ಲಾ ಸಮುದಾಯಗಳ ವರ್ಗದವರು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಹಕಾರ ನೀಡಬೇಕು. ಅಧಿಕಾರಿಗಳು ಕಾರ್ಯಕ್ರಮಕ್ಕೆ ಗೈರಾಗಬಾರದು ಎಂದು ಸೂಚಿಸಿದರು.
ಸಭೆಯಲ್ಲಿ ತಹಸೀಲ್ದಾರ್ ಡಾ.ಎಸ್.ಯು.ಅಶೋಕ್, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಡಾ.ಕೆ.ದಿವಾಕರ್, ಜಿಲ್ಲಾ ದಿಶಾ ಸಮಿತಿ ಸದಸ್ಯ ನರಸನಾಯಕ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಚ್.ಕೆ.ಅಶೋಕ್, ಪುರಸಭಾ ಸದಸ್ಯರಾದ ಗಿರೀಶ್, ಕೆ.ಆರ್.ಹೇಮಂತ್ ಕುಮಾರ್, ಬಿಇಒ ವೈ.ಕೆ.ತಿಮ್ಮೇಗೌಡ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಸಿ.ಎನ್.ಯತೀಶ್, ಪಶು ವೈದ್ಯಾಧಿಕಾರಿ ಎಚ್.ಎಸ್.ದೇವರಾಜು, ತಾಲೂಕು ಭೂದಾಖಲೆಗಳ ಸಹಾಯಕ ನಿರ್ದೇಶಕ ಸಿದ್ದಯ್ಯ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಡಾ.ಲೋಕೇಶ್, ಬಿಸಿಎಂ ಅಧಿಕಾರಿ ಎಂ.ಎನ್.ವೆಂಕಟೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.