ಬಿಸಿಯೂಟ ಸಿಬ್ಬಂದಿ ಬಾಕಿ ವೇತನ ಪಾವತಿಗೆ ಶಾಸಕ ಸೂಚನೆ

KannadaprabhaNewsNetwork |  
Published : Oct 27, 2024, 02:36 AM IST
ಪ್ರಕಟಿತ ವರದಿ | Kannada Prabha

ಸಾರಾಂಶ

ಅಕ್ಷರ ದಾಸೋಹ ಸಿಬ್ಬಂದಿಯ ಬಾಕಿ ವೇತನ ಪಾವತಿಸುವಂತೆ ವಿರಾಜಪೇಟೆ ಶಾಸಕ ಎ.ಎಸ್‌. ಪೊನ್ನಣ್ಣ ಸೂಚಿಸಿದರು. ಮಾಧ್ಯಮ ವರದಿ ಗಮನಿಸಿದ ಶಾಸಕ ಪೊನ್ನಣ್ಣ ತಕ್ಷಣ ಸ್ಪಂದಿಸಿದರು.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ಅಕ್ಷರ ದಾಸೋಹ ಸಿಬ್ಬಂದಿಯ ಬಾಕಿ ವೇತನ ಪಾವತಿಸುವಂತೆ ವಿರಾಜಪೇಟೆ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್‌ ಪೊನ್ನಣ್ಣ ಸೂಚಿಸಿದ್ದಾರೆ.

ಅಕ್ಷರ ದಾಸೋಹ ಸಿಬ್ಬಂದಿಯ ವೇತನ ಬಾಕಿ ಕುರಿತು ಶನಿವಾರ ಪ್ರಕಟವಾದ ಮಾಧ್ಯಮ ವರದಿ ಗಮನಿಸಿದ ಶಾಸಕ, ತಕ್ಷಣ ಸ್ಪಂದಿಸಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ಮಾತನಾಡಿ ಮುಂದಿನ ಬುಧವಾರದೊಳಗೆ ಬಾಕಿ ವೇತನ ಪಾವತಿಸುವಂತೆ ಆದೇಶಿಸಿದ್ದಾರೆ.

ಶಾಸಕರ ಕಾರ್ಯವೈಖರಿಯ ಬಗ್ಗೆ ಅಕ್ಷರ ದಾಸೋಹದ ಬಿಸಿಯೂಟ ನಿರ್ವಹಿಸುವ ಸಿಬ್ಬಂದಿ ಸಂಘದ ತಾಲೂಕು ಮಾಜಿ ಉಪಾಧ್ಯಕ್ಷೆ ಯಶೋದಾ, ಅಕ್ಷರ ದಾಸೋಹ ಸಿಬ್ಬಂದಿ ಖತೀಜಾ, ಶೋಭಾ, ಅಶ್ವಿನಿ ಮತ್ತಿತರರು ಹರ್ಷ ವ್ಯಕ್ತಪಡಿಸಿದ್ದಾರೆ.

ಅಕ್ಷರದಾಸೋಹ ಸಿಬ್ಬಂದಿ ವೇತನ ಬಾಕಿ ಸಮಸ್ಯೆ ಕುರಿತು ‘ಕನ್ನಡಪ್ರಭ’ ಶನಿವಾರ ‘ವೇತನ ನೀಡಲು ವಿಳಂಬ: ಜೀವನ ನಿರ್ವಹಣೆ ಸಂಕಷ್ಟ’ ಶೀರ್ಷಿಕೆಯಲ್ಲಿ ವಿಸ್ತೃತ ವರದಿ ಪ್ರಕಟಿಸಿತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ