ಬಸ್ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟಿನ್ ಉದ್ಘಾಟಿಸಿದ ಶಾಸಕ ಜೆ.ಎನ್. ಗಣೇಶ್

KannadaprabhaNewsNetwork |  
Published : Jun 25, 2025, 11:47 PM IST
ಕುರುಗೋಡು ೦೧ ಪಟ್ಟಣದ ಶಾಸಕ ಜೆ.ಎನ್.ಗಣೇಶ್ ಬಸ್ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದರು | Kannada Prabha

ಸಾರಾಂಶ

ಮುಂದಿನ ದಿನಗಳಲ್ಲಿ ಎಮ್ಮಿಗನೂರು ಗ್ರಾಮದಲ್ಲಿ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲಾಗುವುದು.

ಕನ್ನಡಪ್ರಭ ವಾರ್ತೆ ಕುರುಗೋಡು

ಮುಂದಿನ ದಿನಗಳಲ್ಲಿ ಎಮ್ಮಿಗನೂರು ಗ್ರಾಮದಲ್ಲಿ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲಾಗುವುದು ಎಂದು ಶಾಸಕ ಜೆ.ಎನ್. ಗಣೇಶ್ ಹೇಳಿದರು.

ಪಟ್ಟಣದಲ್ಲಿ ಬಸ್ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟಿನ್ ಉದ್ಘಾಟಿಸಿ ಅವರು ಮಾತನಾಡಿದರು.

ಕಂಪ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಎರಡು ವರ್ಷದಲ್ಲಿ ೩೬೪ ಕಾಮಗಾರಿಗಳಿಗೆ ಭೂಮಿ ಪೂಜೆ ಮಾಡಿದರೂ ರಾಜ್ಯ ಸರ್ಕಾರ ನೀಡಿದ ಅನುದಾನ ಉಳಿಯುತ್ತಿದೆ ಎಂದು ಹೇಳಿದರು.

ರಾಜ್ಯ ಸರ್ಕಾರದ ಅಭಿವೃದ್ಧಿಪರ ಚಿಂತನೆಗಳನ್ನು ಸಹಿಸದ ವಿರೋಧ ಪಕ್ಷದವರು ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ವಿರೋಧ ಪಕ್ಷದ ನಾಯಕರು ಕಂಪ್ಲಿ ವಿಧಾನಸಭಾ ಕ್ಷೇತ್ರಕ್ಕೆ ಬಂದು ಅಭಿವೃದ್ಧಿ ಕಾರ್ಯ ನೋಡಿ ನಂತರ ಆರೋಪಮಾಡಲಿ ಎಂದು ಸವಾಲು ಹಾಕಿದರು.

ಜಿಲ್ಲಾ ಖನಿಜ ನಿಧಿಯಲ್ಲಿ ₹೩೦೦ ಕೋಟಿ ಹಣವಿದೆ. ಅದರ ಅನುದಾನ ಪಡೆದು ಪಟ್ಟಣದಲ್ಲಿ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಿಸಲಾಗುವುದು. ಕುಡಿಯುವ ನೀರಿನ ಬೃಹತ್ ಕೆರೆ ನಿರ್ಮಾಣ ಮಾಡಲಾಗುವುದು.

ಸ್ವಾತಂತ್ರ್ಯ ನಂತರ ದಿನಗಳಲ್ಲಿ ದೇಶ ಅನೇಕ ಸಮಸ್ಯೆ ಎದುರಿಸುತ್ತಿತ್ತು. ಅಂದು ನೆಹರೂ ನೇತೃತ್ವದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಕಾಮಗಾರಿ ಮಾಡಿತ್ತು. ಅವರ ದೂರದೃಷ್ಟಿಯ ಫಲವಾಗಿ ರಸ್ತೆ, ಸಾರಿಗೆ, ಶಾಲಾ-ಕಾಲೇಜು, ಬೃಹತ್ ಜಲಾಶಯಗಳು ನಿರ್ಮಾಣವಾಗಿವೆ ಎಂದರು.

ಪುರಸಭೆ ಅಧ್ಯಕ್ಷ ಟಿ.ಶೇಖಣ್ಣ, ಉಪಾಧ್ಯಕ್ಷ ಚನ್ನಪಟ್ಟಣ ಮಲ್ಲಿಕಾರ್ಜುನ, ಮುಖ್ಯಾಧಿಕಾರಿ ಎಂ. ಹರ್ಷವರ್ಧನ ಮತ್ತು ಪುರಸಭೆ ಸದಸ್ಯರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ
‘ಜಿ ರಾಮ್‌ ಜಿ’ ವಿರುದ್ಧ ಸಮರಕ್ಕೆ ನಾಳೆ ಕೈ ವಿಶೇಷ ಸಂಪುಟ ಸಭೆ