ಕೋಡಿಬಿದ್ದ ಮರಳೂರು ಕೆರೆಗೆ ಶಾಸಕ ಜ್ಯೋತಿ ಗಣೇಶ್ ಬಾಗಿನ ಅರ್ಪಣೆ

KannadaprabhaNewsNetwork |  
Published : Oct 29, 2025, 01:00 AM IST
್ಿ್ಿ್ಿಿ | Kannada Prabha

ಸಾರಾಂಶ

ಮರಳೂರು ಅಮಾನಿಕೆರೆ ತುಂಬಿರುವುದು ಗಂಗಸಂದ್ರ, ಮರಳೂರು, ಕುಮ್ಮಂಜಿಪಾಳ್ಯ ಸೇರಿದಂತೆ ಈ ಭಾಗದ ಹಳ್ಳಿಗಳ ರೈತರಿಗೆ ತುಂಬಾ ಅನುಕೂಲವಾಗಲಿದೆ. ಕೆರೆ ಭರ್ತಿಯಾಗಿರುವುದರಿಂದ ಅಂತರ್ಜಲವೂ ವೃದ್ಧಿಯಾಗಿ ಕೊಳವೆ ಬಾವಿಗಳಲ್ಲಿ ನೀರು ಬರುತ್ತದೆ. ಹಾಗಾಗಿ ಈ ಭಾಗದ ರೈತರು ಸಹ ಸಂತಸಗೊಂಡಿದ್ದಾರೆ .

ಕನ್ನಡಪ್ರಭ ವಾರ್ತೆ ತುಮಕೂರು

ನಗರದ ಮರಳೂರು ಅಮಾನಿಕೆರೆ ಮಳೆಯಿಂದ ಕೋಡಿ ಬಿದ್ದಿರುವ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ ಶಾಸಕ ಜಿ.ಬಿ. ಜ್ಯೋತಿಗಣೇಶ್ ಅವರು ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು.

ಗ್ರಾಮದ ಪ್ರಧಾನರಾದ ಅಶೋಕ್ ಕುಮಾರ್, ಮಹಾನಗರ ಪಾಲಿಕೆಯ 28ನೇ ವಾರ್ಡ್ ನ ಮಾಜಿ ಸದಸ್ಯ ಧರಣೇಂದ್ರ ಕುಮಾರ್ ಸೇರಿದಂತೆ ಈ ಭಾಗದ ಗ್ರಾಮಸ್ಥರ ಸಮ್ಮುಖದಲ್ಲಿ ಶಾಸಕ ಜ್ಯೋತಿ ಗಣೇಶ್ ಗಂಗಾಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಜ್ಯೋತಿ ಗಣೇಶ್ , ಮರಳೂರು ಅಮಾನಿಕೆರೆ ಕಳೆದ 25- 30 ವರ್ಷಗಳಲ್ಲಿ ಇದು 3ನೇ ಬಾರಿಗೆ ಭರ್ತಿಯಾಗಿದೆ. ಕಳೆದ ವರ್ಷವೂ ಸುರಿದ ಭಾರೀ ಮಳೆಯಿಂದಾಗಿ ಕೆರೆ ತುಂಬಿತ್ತು. ಆ ಸಂದರ್ಭದಲ್ಲೂ ಸಹ ಕೆರೆಗೆ ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಿಸಲಾಗಿತ್ತು. ಅದೇ ರೀತಿ ಇಂದು ಸಹ ಗ್ರಾಮಸ್ಥರ ಸಮ್ಮುಖದಲ್ಲಿ ಕೆರೆಗೆ ಬಾಗಿನ ಅರ್ಪಿಸಲಾಗಿದೆ ಎಂದರು.

ಮರಳೂರು ಅಮಾನಿಕೆರೆ ತುಂಬಿರುವುದು ಗಂಗಸಂದ್ರ, ಮರಳೂರು, ಕುಮ್ಮಂಜಿಪಾಳ್ಯ ಸೇರಿದಂತೆ ಈ ಭಾಗದ ಹಳ್ಳಿಗಳ ರೈತರಿಗೆ ತುಂಬಾ ಅನುಕೂಲವಾಗಲಿದೆ. ಕೆರೆ ಭರ್ತಿಯಾಗಿರುವುದರಿಂದ ಅಂತರ್ಜಲವೂ ವೃದ್ಧಿಯಾಗಿ ಕೊಳವೆ ಬಾವಿಗಳಲ್ಲಿ ನೀರು ಬರುತ್ತದೆ. ಹಾಗಾಗಿ ಈ ಭಾಗದ ರೈತರು ಸಹ ಸಂತಸಗೊಂಡಿದ್ದಾರೆ ಎಂದರು.

ಮರಳೂರು ಅಮಾನಿಕೆರೆಯನ್ನು ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಸಲುವಾಗಿ ಮುಂದಿನ ದಿನಗಳಲ್ಲಿ ಬಳಕೆ ಮಾಡಿಕೊಳ್ಳಲಾಗುವುದು. ಹಾಗಾಗಿ ಕೆರೆಯನ್ನು ಸಂಪೂರ್ಣವಾಗಿ ಅಚ್ಚುಕಟ್ಟುಗೊಳಿಸಿ ಹೇಮಾವತಿ ನೀರನ್ನು ಹರಿಸಿ, ಕುಡಿಯುವ ನೀರು ಪೂರೈಕೆಗೆ ಬಳಸಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಮರಳೂರು ಗ್ರಾಮಕ್ಕೆ ಈ ಕೆರೆ ತಾಯಿ ಇದ್ದಂತೆ. ಕಳೆದ 3- 4 ವರ್ಷಗಳಿಂದ ಉತ್ತಮ ಮಳೆಯಾಗುತ್ತಿರುವುದರಿಂದ ಕೆರೆ ಕೋಡಿಯಾಗುತ್ತಿದೆ. ತುಮಕೂರಿನ ದಕ್ಷಿಣ ಭಾಗದ ಆರೇಳು ವಾರ್ಡ್ ಗೆ ನೀರು ಒದಗಿಸಲು ಹೇಮಾವತಿ ನೀರನ್ನು ಕೆರೆಗೆ ತುಂಬಿಸುವ ಕಾರ್ಯ ಮಾಡಲಾಗುವುದು. ಗಂಗಸಂದ್ರ, ಮೆಳೇಕೋಟೆ ಟೂಡಾ ಜಾಗದಲ್ಲಿ ನೀರು ಶುದ್ಧೀಕರಣ ಘಟಕ ನಿರ್ಮಿಸಲಾಗುವುದು ಎಂದರು.

ಬುಗುಡನಹಳ್ಳಿ ಕೆರೆಗೆ ನೀರು ಬರುವುದು ನಿಂತು ಹೋದರೆ ಇಡೀ ತುಮಕೂರು ಕೆರೆಗೆ ನೀರು ನಿಂತು ಹೋಗುತ್ತದೆ. ಮುಂಬರುವ ದಿನಗಳಲ್ಲಿ ಮರಳೂರು ಕೆರೆಗೆ ಹೇಮಾವತಿ ನೀರು ತುಂಬಿಸಿ ನಗರದ ಜನತೆಗೆ ನೀರು ಪೂರೈಸುವ ಕೆಲಸವನ್ನು ಮಾಡಲಾಗುವುದು ಎಂದರು.

ಪಾಲಿಕೆ ಮಾಜಿ ಸದಸ್ಯ ಧರಣೇಂದ್ರ ಕುಮಾರ್ ಮಾತನಾಡಿ, ಮರಳೂರು ಅಮಾನಿಕೆರೆ ಈ ಭಾಗದ ರೈತರಿಗೆ ಜೀವನಾಡಿ. ಕಳೆದ 25- 30 ವರ್ಷಗಳಲ್ಲಿ 3ನೇ ಬಾರಿಗೆ ಕೆರೆ ತುಂಬಿರುವುದು ನಮ್ಮೆಲ್ಲರಿಗೂ ಹರ್ಷ ತಂದಿದೆ. ಈ ಕೆರೆಯಲ್ಲಿ ನೀರು ತುಂಬಿದ್ದರೆ ಅಂತರ್ಜಲ ಮಟ್ಟವೂ ವೃದ್ಧಿಯಾಗಿ ರೈತರ ತೋಟ, ಜಮೀನುಗಳಿಗೆ ಬೋರ್‌ವೆಲ್‌ಗಳಿಂದ ನೀರು ಹರಿಸಲು ಅನುಕೂಲವಾಗುತ್ತದೆ ಎಂದರು.

ಮಳೆಯಿಂದ ಮರಳೂರು ಕೆರೆ ತುಂಬುತ್ತಿರುವುದರಿಂದ ಕೆರೆಯ ಸ್ವಚ್ಛತೆ ಕಾಪಾಡಿ ತುಮಕೂರು ನಗರಕ್ಕೆ ನೀರು ಒದಗಿಸುವ ಕಾರ್ಯಕ್ಕೆ ಮುಂದಾಗಲಾಗುತ್ತಿದೆ. ಕೆರೆಯ ಏರಿ ಮೇಲೆ ಕುಣಿಗಲ್ ರಸ್ತೆ ಹೋದು ಹೋಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ತಡೆಗೋಡೆ ನಿರ್ಮಿಸಬೇಕು. ಕೆರೆಯ ಕೋಡಿ ಭಾಗದಲ್ಲಿ ಕಲ್ಯಾಣಿ ನಿರ್ಮಾಣ ಮಾಡಬೇಕು ಎಂದು ಮನವಿ ಮಾಡಿದರು. ಸಣ್ಣ ನೀರಾವರಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಮೂಡ್ಲಗಿರಿಯಪ್ಪ, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ತಿಪ್ಪೇಸ್ವಾಮಿ, ಸಂತೋಷ್, ಗ್ರಾಮಸ್ಥರಾದ ಕೃಷ್ಣಮೂರ್ತಿ, ಚಿಕ್ಕಣ್ಣಯ್ಯ, ರಾಮಣ್ಣ, ರವಿಗೌಡ, ಮರಳೂರು ನಾಗರಾಜು, ಕೃಷ್ಣಪ್ಪ, ಚೇರ್‌ಮನೆ ಭೀಮಣ್ಣ, ಪ್ರಧಾನ್ ಅಶೋಕ್ ಕುಮಾರ್, ಮರಳೂರು ರಾಜು, ಕುಮಾರ್, ಸುರೇಶ್, ರವೀಶಯ್ಯ ಸೇರಿದಂತೆ ಅಕ್ಕಪಕ್ಕದ ಗ್ರಾಮಸ್ಥರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!