ಕನ್ನಡಪ್ರಭ ವಾರ್ತೆ ಮದ್ದೂರು
ತಾಲೂಕಿನ ವಳೆಗೆರೆಹಳ್ಳಿಯಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಕ್ಷೇತ್ರ ವ್ಯಾಪ್ತಿ ಪ್ರತಿ ಗ್ರಾಮದಲ್ಲೂ ಸಹ ನಾಲೆಗಳ ದುರಸ್ತಿ ಮತ್ತು ರಸ್ತೆ ಅಭಿವೃದ್ಧಿಗಾಗಿ ಗ್ರಾಮಸ್ಥರು ಅಹವಾಲು ಸಲ್ಲಿಸುತ್ತಿದ್ದಾರೆ. ಪ್ರತಿ ಇಲಾಖೆವಾರು ಪಟ್ಟಿ ಮಾಡಿ ಅನುದಾನ ಬಳಸಿಕೊಂಡು ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು ಎಂದರು.
ವಿಧಾನಸಭಾ ಅಧಿವೇಶನ ಮುಂದಿನ ಐದು ದಿನಗಳಲ್ಲಿ ಮುಕ್ತಾಯಗೊಳ್ಳಲಿದೆ. ಆನಂತರ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳ ಸಭೆ ಕರೆದು ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗುವುದು. ಮುಂದಿನ ಎರಡು ತಿಂಗಳಲ್ಲಿ ಬಾಕಿ ಉಳಿದಿರುವ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಸ್ಪಷ್ಟಪಡಿಸಿದರು.ಈ ವೇಳೆ ಜಿಲ್ಲಾ ಸಹಕಾರ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ಮನ್ಮುಲ್ ನಿರ್ದೇಶಕ ಹರೀಶ್, ಗ್ರಾಪಂ ಅಧ್ಯಕ್ಷೆ ವಸಂತಮ್ಮ, ಸದಸ್ಯರಾದ ವಿ.ಜೆ.ಸುನಿಲ್ ಕುಮಾರ್, ಮಮತಾ, ವಿ.ಆರ್.ಸುನಿಲ್ ಕುಮಾರ್, ಮುಖಂಡರಾದ ವಿ.ಸಿ.ಉಮಾಶಂಕರ, ಉದ್ಯಮಿ ಪ್ರಣಾಂ ಸತೀಶ್, ವಿ. ಎ. ಅಲೋಕ, ನಿತಿನ್ ಗೌಡ, ಹಾಗೂ ಗ್ರಾಮದ ಮುಖಂಡರು ಇದ್ದರು.ಮುಸ್ಲಿಮರು ಮನುಷ್ಯರಲ್ಲವೇ: ಶಾಸಕ ಕೆ.ಎಂ.ಉದಯ್
ಮುಸ್ಲಿಮರು ಬೇರೆ ಧರ್ಮದವರಾಗಿದ್ದರೂ ಅವರು ಮನುಷ್ಯರಲ್ಲವೇ ಎಂದು ಶಾಸಕ ಕೆ.ಎಂ.ಉದಯ್ ಭಾನುವಾರ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಕೇವಲ ಮುಸ್ಲಿಮರಿಗಾಗಿ ಮಾತ್ರವಲ್ಲ. ಎಲ್ಲಾ ವರ್ಗದವರಿಗೂ ಅನ್ವಯವಾಗುವಂತೆ 4 ಲಕ್ಷ 90 ಸಾವಿರ ಕೋಟಿ ರು. ಅನುದಾನ ಮೀಸಲಿಟ್ಟಿದ್ದಾರೆ ಎಂದರು.
ಮುಸ್ಲಿಮರು ಕೇವಲ ಕೆಲವು ಉದ್ಯೋಗಕ್ಕೆ ಮಾತ್ರ ಸೀಮಿತರಾಗಿದ್ದಾರೆ. ಅವರು ಆರ್ಥಿಕವಾಗಿ ಅಭಿವೃದ್ಧಿ ಒಂದೇ ಎಂಬ ಉದ್ದೇಶದಿಂದ ಮೀಸಲಾತಿ ಕಲ್ಪಿಸಲಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ತಪ್ಪಿಲ್ಲ ಎಂದು ಸ್ಪಷ್ಟಪಡಿಸಿದರು.
ಈ ವೇಳೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮಮತಾ ಶಂಕರೇಗೌಡ. ಮಾಜಿ ಅಧ್ಯಕ್ಷ ಪುಟ್ಟರಾಜು ಇದ್ದರು.