ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 40ನೇ ಕೋರ್ಟ್ ವಾರ್ಡಿನ ಸೆಂಟ್ರಲ್ ರೈಲ್ವೆ ನಿಲ್ದಾಣದ ಎದುರು ರಿಕ್ಷಾ ಮಾಲೀಕ-ಚಾಲಕರ ಹಾಗೂ ಸಾರ್ವಜನಿಕರ ಬೇಡಿಕೆಯ ಮೇರೆಗೆ 18 ಲಕ್ಷ ರು. ವಿಶೇಷ ಅನುದಾನದಲ್ಲಿ ಆಟೋ ಪಾರ್ಕ್ ಅಭಿವೃದ್ಧಿಗೊಳ್ಳಲಿದ್ದು, ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಶಿಲಾನ್ಯಾಸ ನಡೆಯಿತು.ನಂತರ ಮಾತನಾಡಿದ ಶಾಸಕರು, ಇಲ್ಲಿ ನಿರ್ಮಾಣಗೊಳ್ಳಲಿರುವ ಸುಸಜ್ಜಿತ ಮೇಲ್ಛಾವಣಿಯಿಂದಾಗಿ ರಿಕ್ಷಾ ಚಾಲಕರು ಉರಿ ಬಿಸಿಲು ಹಾಗೂ ಮಳೆಗಾಲದಲ್ಲಿ ಆಶ್ರಯ ಪಡೆಯಲು ಅನುಕೂಲವಾಗಲಿದೆ. ಇಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ರೈಲ್ವೆ ಇಲಾಖೆಯ ಅನುಮತಿ ಕಡ್ಡಾಯವಾಗಿದ್ದು, ಆ ನಿಟ್ಟಿನಲ್ಲಿ ರೈಲ್ವೆ ಅಧಿಕಾರಿ ಯಾಧವ್ ಸಹಕಾರ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಇಲ್ಲಿಗೊಂದು ಕುಡಿಯುವ ಶುದ್ಧ ನೀರಿನ ಘಟಕವನ್ನೂ ನಿರ್ಮಿಸಲಾಗುವುದು ಎಂದರು.