ಅಂಗನವಾಡಿ ಕಟ್ಟಡ ಕಾಮಗಾರಿ ಭೂಮಿ ಪೂಜೆ

KannadaprabhaNewsNetwork |  
Published : Feb 28, 2026, 03:00 AM IST
ಅಂಗನವಾಡಿ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ | Kannada Prabha

ಸಾರಾಂಶ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 55ನೇ ಅತ್ತಾವರ ವಾರ್ಡಿನ ಮಹಾಕಾಳಿ ಪಡ್ಪುವಿನಲ್ಲಿ ಸುಮಾರು 17 ಲಕ್ಷ ರು. ವೆಚ್ಚದ ಅಂಗನವಾಡಿ ಕೇಂದ್ರ ಕಟ್ಟಡದ ಕಾಮಗಾರಿಯ ಗುದ್ದಲಿ ಪೂಜೆ ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ನಡೆಯಿತು.

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 55ನೇ ಅತ್ತಾವರ ವಾರ್ಡಿನ ಮಹಾಕಾಳಿ ಪಡ್ಪುವಿನಲ್ಲಿ ಸುಮಾರು 17 ಲಕ್ಷ ರು. ವೆಚ್ಚದ ಅಂಗನವಾಡಿ ಕೇಂದ್ರ ಕಟ್ಟಡದ ಕಾಮಗಾರಿಯ ಗುದ್ದಲಿ ಪೂಜೆ ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ನಡೆಯಿತು.ನಂತರ ಮಾತನಾಡಿದ ಶಾಸಕರು, 2022-23ನೇ ಸಾಲಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಸವರಾಜ್ ಬೊಮ್ಮಾಯಿಯವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಅಂಗನವಾಡಿ ಕಟ್ಟಡಗಳ ನಿರ್ಮಾಣ ಕ್ರಿಯಾಯೋಜನೆ ಮೂಲಕ ಮಂಜೂರಾದ ಈ ಕೇಂದ್ರದಲ್ಲಿ ಬೋಧನಾ ಕೊಠಡಿ, ಕಿಚನ್, ಶೌಚಾಲಯ ಸಹಿತ ಸುಸಜ್ಜಿತ ಕಟ್ಟಡ ನಿರ್ಮಾಣವಾಗಲಿದೆ. ಈ ಕಾಮಗಾರಿಗೆ ರಾಜ್ಯದಲ್ಲಿ ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ತಡೆ ನೀಡಿದ ವಿಳಂಬವಾಗಿತ್ತು. ಇದೀಗ ಅನೇಕ ಬಾರಿ ಮನವಿ ಮಾಡಿದ ನಂತರ ಹಿಂದಿನ ಅನುದಾನ ಮತ್ತೆ ಬಿಡುಗಡೆಗೊಂಡಿದ್ದು, ಶೀಘ್ರದಲ್ಲಿ ಕಾಮಗಾರಿ ಮುಗಿದು ಇಲ್ಲಿನ ಮಕ್ಕಳು ಅಂಗನವಾಡಿಯಲ್ಲಿ ಆಡಿ ಬೆಳೆಯಲಿದ್ದಾರೆ. ಆ ಮೂಲಕ ಇಲ್ಲಿಗೊಂದು ಅಂಗನವಾಡಿ ಕೇಂದ್ರ ಬೇಕೆಂದು ಅನೇಕ ಬಾರಿ ಮನವಿ ಮಾಡಿದ್ದ ನಿಕಟಪೂರ್ವ ಪಾಲಿಕೆ ಸದಸ್ಯ ಶೈಲೇಶ್ ಶೆಟ್ಟಿಯವರ ಪ್ರಯತ್ನವೂ ಸಹಕಾರಗೊಳ್ಳಲಿದೆ ಎಂದರು.

ಈ ಸಂದರ್ಭದಲ್ಲಿ ಪ್ರಮುಖರಾದ ಪುಷ್ಪರಾಜ್ ಶೆಟ್ಟಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ವೇತಾ, ನಾರಾಯಣ ಶೆಟ್ಟಿ, ಪುಂಡಲೀಕ ಸುವರ್ಣ, ರಾಜರತ್ನ ಸನಿಲ್, ದೇವದಾಸ್ ಶೆಟ್ಟಿ, ರಾಜಗೋಪಾಲ್, ಪ್ರಮೋದ್ ಕೊಟ್ಟಾರಿ, ನಿತಿನ್, ಕಿಶನ್, ಅಶೋಕ್, ದಿನೇಶ್, ಪೂಜಾ, ಉಷಾ, ಸುಂದರಿ, ಪ್ರೇಮಲತಾ ನಾಯ್ಕ್, ಲೋಲಾಕ್ಷಿ, ಯೋಗೀಶ್, ಪ್ರವೀಣ್ ಪಟ್ನ, ಮಧು ಕುಲಾಲ್, ನಾರಾಯಣ ಕುಂದರ್, ಪಾಂಡೇಶ್ವರ ವಲಯದ ಮೇಲ್ವಿಚಾರಕಿ ಅಶ್ವಿನಿ ಹಾಗೂ ಅನುಪಮಾ, ಮಹಾಕಾಳಿ ಪಡ್ಪು ಅಂಗನವಾಡಿ ಶಿಕ್ಷಕಿ ಸುಮಿತ್ರ ಶೆಟ್ಟಿ, ಸಹಾಯಕಿ ರೇಖಾ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೇಸಿಗೆಯಲ್ಲಿ ಕುಡಿವ ನೀರಿನ ಬಗ್ಗೆ ಎಚ್ಚರವಿರಲಿ
ಶಾಲಾ ಕಾಲೇಜುಗಳು ಮೊದಲು ನಶಾಮುಕ್ತವಾಗಲಿ:ಡಾ.ಭಗವಾನ್