ರಸ್ತೆ ಅಭಿವೃದ್ಧಿ, ಒಳಚರಂಡಿ ಕಾಮಗಾರಿ ಪರಿಶೀಲಿಸಿದ ಶಾಸಕ ಕೆ.ಎಂ.ಉದಯ್

KannadaprabhaNewsNetwork |  
Published : Jun 08, 2026, 01:45 AM IST
7ಕೆಎಂಎನ್ ಡಿ19 | Kannada Prabha

ಸಾರಾಂಶ

ಮಳೆಯಿಂದಾಗಿ ಒಳಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದೆ. ಈ ಬಗ್ಗೆ ನಗರಸಭೆ ಅಧಿಕಾರಿಗಳಿಗೆ ದೂರು ನೀಡಿದರೂ ಸಹ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಶಾಸಕರಿಗೆ ಸಾರ್ವಜನಿಕರ ದೂರು.

ಕನ್ನಡ ಪ್ರಭ ವಾರ್ತೆ ಮದ್ದೂರು

ನಗರದ ಸರ್ಕಾರಿ ಪ್ರೌಢ ಶಾಲೆಯಿಂದ ಗೊರವನಹಳ್ಳಿವರೆಗೆ ನಿರ್ಮಾಣವಾಗುತ್ತಿರುವ ರಸ್ತೆ ಅಭಿವೃದ್ಧಿ ಮತ್ತು ಒಳಚರಂಡಿ ಕಾಮಗಾರಿ ಶಾಸಕ ಕೆ.ಎಂ.ಉದಯ್ ಪರಿಶೀಲಿಸಿದರು.

ನಗರಸಭೆ ಆಯುಕ್ತೆ ರಾಧಿಕಾ ಸೋಮಶೇಖರ್ ಹಾಗೂ ಅಧಿಕಾರಿಗಳೊಂದಿಗೆ ಭೇಟಿ ನೀಡಿ ರಸ್ತೆ ಮತ್ತು ಒಳಚರಂಡಿ ಗುಣಮಟ್ಟ ಪರಿಶೀಲಿಸಿದ ವೇಳೆ ಸಾರ್ವಜನಿಕರು ಮಳೆಯಿಂದಾಗಿ ಒಳಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದೆ. ಈ ಬಗ್ಗೆ ನಗರಸಭೆ ಅಧಿಕಾರಿಗಳಿಗೆ ದೂರು ನೀಡಿದರೂ ಸಹ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಶಾಸಕರಿಗೆ ದೂರಿದರು.

ನಂತರ ಸಾರ್ವಜನಿಕರೊಂದಿಗೆ ಮಾತುಕತೆ ನಡೆಸಿದ ಶಾಸಕರು ಮುಂದಿನ ಒಂದು ವಾರದೊಳಗೆ ರಸ್ತೆ ಮತ್ತು ಒಳಚರಂಡಿ ವ್ಯವಸ್ಥೆ ಸಮಸ್ಯೆ ಬಗೆಹರಿ, ಈ ಹಿಂದೆ ನಡೆದ ಒಳಚರಂಡಿ ಕಾಮಗಾರಿಗಳಲ್ಲಿ ಕೆಲವೊಂದು ಲೋಪದೋಷಗಳು ಇದ್ದು, ರಸ್ತೆಗಳ ಕೆಳಗೆ ಚರಂಡಿಗಳಲ್ಲಿ ನಿರ್ಮಾಣ ಮಾಡಿರುವುದರಿಂದ ಮಳೆಗಾಲದಲ್ಲಿ ಪದೇ, ಪದೇ ಸಮಸ್ಯೆಯಾಗುತ್ತಿದೆ. ಹೀಗಾಗಿ ರಸ್ತೆ ರಸ್ತೆಗಿಂತ ಎತ್ತರವಾಗಿ ಒಳಚರಂಡಿ ನಿರ್ಮಾಣ ಮಾಡುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಂತರ ಶಾಸಕರು ಕೆಮ್ಮಣ್ಣುನಾಲೆ ಅಧುನಿಕರಣ ಕಾಮಗಾರಿ ವೀಕ್ಷಣೆ ಮಾಡಿದರು. ಈ ವೇಳೆ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಎಇಇ ನದಾಫ್, ನೀರಾವರಿ ಇಲಾಖೆಯ ನಾಗರಾಜು, ಲೋಕೋಪಯೋಗಿ ಇಲಾಖೆ ಹನುಮಂತು, ನಗರಸಭೆ ಎಇಇ ರಾಜಶೇಖರ್, ಕಂದಾಯ ಅಧಿಕಾರಿ ಪುಟ ಸ್ವಾಮಿ, ಪುರಸಭೆ ಮಾಜಿ ಸದಸ್ಯ ಎಂ.ಬಿ. ಸಚಿನ್ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಲ್ವಳ್ಳಿ ಭಾಗದ ಕೆರೆಗಳ ನೀರಿಗಾಗಿ ಬೃಹತ್ ಸಮಾವೇಶ
ನಮ್ಮೆಲ್ಲರ ಬದುಕು ಮರಗಿಡಗಳಲ್ಲಿದೆ ಎಂಬ ಅರಿವಿರಲಿ: ಎಂ.ಆರ್.ಮಹದೇವು