ಕುಡಿಯುವ ನೀರಿನ ಸೌಲಭ್ಯಕ್ಕೆ ಶಾಸಕ ಮಂಜು ಸೂಚನೆ

KannadaprabhaNewsNetwork |  
Published : Aug 24, 2026, 01:45 AM IST
23ಎಚ್ಎಸ್ಎನ್12 :  | Kannada Prabha

ಸಾರಾಂಶ

ಅರಕಲಗೂಡು ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಶಾಸಕ ಎ. ಮಂಜು ಭಾಗವಹಿಸಿ, ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಾರ್ವಜನಿಕ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು. ತಾಲೂಕಿನ ಎಲ್ಲಾ ಗ್ರಾಮಗಳಲ್ಲಿರುವ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಮಾಹಿತಿ ಪಡೆದು, ಜನರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಂಡು, ಸಮಸ್ಯೆ ಇರುವ ಗ್ರಾಮಗಳಿಗೆ ತುರ್ತಾಗಿ ನೀರಿನ ಸೌಲಭ್ಯ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಅರಕಲಗೂಡು

ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಶಾಸಕ ಎ. ಮಂಜು ಭಾಗವಹಿಸಿ, ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಾರ್ವಜನಿಕ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಸಭೆಯಲ್ಲಿ ಪ್ರಮುಖವಾಗಿ ಕೆಳಕಂಡ ವಿಷಯಗಳ ಬಗ್ಗೆ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು. ಆರೋಗ್ಯ ಉಪಕೇಂದ್ರ ಕಟ್ಟಡಗಳ ನಿವೇಶನ ಹಸ್ತಾಂತರ: ಆರೋಗ್ಯ ಉಪಕೇಂದ್ರಗಳ ಕಟ್ಟಡ ನಿರ್ಮಾಣಕ್ಕೆ ಮಂಜೂರಾಗಿರುವ ನಿವೇಶನಗಳನ್ನು ಸಂಬಂಧಿಸಿದ ಇಲಾಖೆಗೆ ಹಸ್ತಾಂತರಿಸದೆ ವಿಳಂಬ ಮಾಡುತ್ತಿರುವ ಕುರಿತು ಅಧಿಕಾರಿಗಳ ಗಮನಕ್ಕೆ ತಂದು, ಶೀಘ್ರವಾಗಿ ನಿವೇಶನ ಹಸ್ತಾಂತರಿಸಿ ಕಾಮಗಾರಿಗಳಿಗೆ ಅನುವು ಮಾಡಿಕೊಡುವಂತೆ ಸೂಚಿಸಿದರು.

ಕುಡಿಯುವ ನೀರಿನ ಸಮಸ್ಯೆ:

ತಾಲೂಕಿನ ಎಲ್ಲಾ ಗ್ರಾಮಗಳಲ್ಲಿರುವ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಮಾಹಿತಿ ಪಡೆದು, ಜನರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಂಡು, ಸಮಸ್ಯೆ ಇರುವ ಗ್ರಾಮಗಳಿಗೆ ತುರ್ತಾಗಿ ನೀರಿನ ಸೌಲಭ್ಯ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಏತ ನೀರಾವರಿ ಕಾಮಗಾರಿಗಳು:

ನೀರಾವರಿ ಇಲಾಖೆಯ ವತಿಯಿಂದ ನಡೆಯುತ್ತಿರುವ ಏತ ನೀರಾವರಿ ಕಾಮಗಾರಿಗಳ ಪ್ರಗತಿ, ಬಾಕಿ ಇರುವ ಕಾಮಗಾರಿಗಳು ಹಾಗೂ ಅವುಗಳ ಅನುಷ್ಠಾನದ ಕುರಿತು ಪರಿಶೀಲಿಸಿ, ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಿದರು.

ದರಖಾಸ್ತು ಸಮಿತಿ ಪ್ರಗತಿ:

ದರಖಾಸ್ತು ಸಮಿತಿಯಲ್ಲಿರುವ ಅರ್ಜಿಗಳ ವಿಲೇವಾರಿ ಹಾಗೂ ಪ್ರಗತಿಯ ಕುರಿತು ಮಾಹಿತಿ ಪಡೆದು, ಬಾಕಿ ಇರುವ ಅರ್ಜಿಗಳನ್ನು ನಿಯಮಾನುಸಾರ ಶೀಘ್ರವಾಗಿ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಅಂಗನವಾಡಿ ಕಟ್ಟಡಗಳಿಗೆ ನಿವೇಶನ:

ಅಂಗನವಾಡಿ ಕೇಂದ್ರಗಳ ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ನಿವೇಶನಗಳನ್ನು ಹಸ್ತಾಂತರಿಸುವಲ್ಲಿ ಆಗುತ್ತಿರುವ ವಿಳಂಬವನ್ನು ನಿವಾರಿಸಿ, ಶೀಘ್ರವಾಗಿ ನಿವೇಶನ ಹಸ್ತಾಂತರಿಸಿ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡುವಂತೆ ಸೂಚಿಸಿದರು.

ತಾಲೂಕಿನ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುವುದರ ಜೊತೆಗೆ ಸಾರ್ವಜನಿಕರ ಮೂಲಭೂತ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಜನರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಶಾಸಕರಾದ ಎ. ಮಂಜಣ್ಣನವರು ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೇಮಾವತಿ ಜಲಾಶಯದಿಂದ ಕೆರೆಕಟ್ಟೆಗಳಿಗೆ ನೀರು: ಶಾಸಕ ಎಚ್.ಟಿ.ಮಂಜು ಪರಿಶೀಲನೆ
ಎಚ್ಡಿಕೆಯಿಂದ ಶ್ರೀಅಭಯ ಆಂಜನೇಯಸ್ವಾಮಿ ದೇಗುಲ ಲೋಕಾರ್ಪಣೆ