ಕೆಂಚಾಂಬ ದೇವಸ್ಥಾನದ ಕಲ್ಯಾಣಿ ಸ್ವಚ್ಛಗೊಳಿಸಲು ಶಾಸಕ ಮಂಜು ಸಂಕಲ್ಪ

KannadaprabhaNewsNetwork |  
Published : Nov 28, 2024, 12:33 AM IST
27ಎಚ್ಎಸ್ಎನ್15 : ಆಲೂರು ತಾ. ಕೆ. ಹೊಸಕೋಟೆ ಶ್ರೀ ಕೆಂಚಾಂಬದೇವಿ ಕಲ್ಯಾಣಿಯನ್ನು ಶಾಸಕ ಸಿಮೆಂಟ್ ಮಂಜು ವೀಕ್ಷಿಸಿದರು.  | Kannada Prabha

ಸಾರಾಂಶ

ಬಿಜೆಪಿ ಕಾರ್ಯಕರ್ತರೆಲ್ಲರೂ ಒಂದು ದಿನ ಶ್ರೀ ಕೆಂಚಾಂಬದೇವಿ ಕಲ್ಯಾಣಿಯನ್ನು ಸ್ವಚ್ಛಗೊಳಿಸಲು ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಸಿಮೆಂಟ್ ಮಂಜು ಭರವಸೆ ನೀಡಿದ್ದಾರೆ ಎಂದು ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಚ್. ಡಿ. ಗೋಪಾಲ್ ತಿಳಿಸಿದರು. ಶಾಸಕರು ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕಲ್ಯಾಣಿಯಲ್ಲಿ ಕೊಳಕು ನಿರ್ಮಾಣವಾಗಿರುವುದನ್ನು ಗಮನಿಸಿ, ಪಕ್ಷದ ಎಲ್ಲ ಕಾರ್ಯಕರ್ತರು ಒಂದು ದಿನ ಕಲ್ಯಾಣಿಯನ್ನು ಶುಚಿಗೊಳಿಸೋಣ ಎಂದು ಕರೆ ನೀಡಿದರು.

ಕನ್ನಡಪ್ರಭ ವಾರ್ತೆ ಆಲೂರು

ತಾಲೂಕಿನ ಬಿಜೆಪಿ ಕಾರ್ಯಕರ್ತರೆಲ್ಲರೂ ಒಂದು ದಿನ ಶ್ರೀ ಕೆಂಚಾಂಬದೇವಿ ಕಲ್ಯಾಣಿಯನ್ನು ಸ್ವಚ್ಛಗೊಳಿಸಲು ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಸಿಮೆಂಟ್ ಮಂಜು ಭರವಸೆ ನೀಡಿದ್ದಾರೆ ಎಂದು ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಚ್. ಡಿ. ಗೋಪಾಲ್ ತಿಳಿಸಿದರು.

ಇತ್ತೀಚೆಗೆ ಶಾಸಕರು ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ದೇವಿ ದರ್ಶನ ಪಡೆದು ದೇವಸ್ಥಾನದ ಹಿಂಭಾಗದಲ್ಲಿರುವ ಕಲ್ಯಾಣಿಯನ್ನು ವೀಕ್ಷಿಸಿದರು. ಕಲ್ಯಾಣಿಯಲ್ಲಿ ಕೊಳಕು ನಿರ್ಮಾಣವಾಗಿರುವುದನ್ನು ಗಮನಿಸಿ, ಪಕ್ಷದ ಎಲ್ಲ ಕಾರ್ಯಕರ್ತರು ಒಂದು ದಿನ ಕಲ್ಯಾಣಿಯನ್ನು ಶುಚಿಗೊಳಿಸೋಣ ಎಂದು ಕರೆ ನೀಡಿದರು.

ಕಲ್ಯಾಣಿ ಸುತ್ತ ಯಾರೂ ಪ್ರವೇಶ ಮಾಡದಂತೆ ಭದ್ರವಾದ ತಂತಿ ಬೇಲಿಯನ್ನು ನಿರ್ಮಾಣ ಮಾಡಲು ಸಮಿತಿ ವತಿಯಿಂದ ಮನವಿ ಮಾಡಲಾಗಿದೆ. ಬೇಲಿ ನಿರ್ಮಾಣ ಮಾಡದಿದ್ದರೆ ನೀರು ಮಲಿನವಾಗುತ್ತದೆಯಲ್ಲದೆ, ಪ್ರಾಣಾಪಾಯವಾಗುವ ಸಂಭವವಿದೆ ಎಂದು ಗೋಪಾಲ್ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ಯಾರಂಟಿಗಳ ಜತೆಗೆ ಹಲವು ಹೊಸ ಯೋಜನೆಗಳೂ ಉಂಟು
ಕೇರಳ ರೀತಿ ಮನೆಯಲ್ಲೇ ರೋಗಿಗಳಿಗೆ ಆರೈಕೆ