ತಾಲೂಕಿನ ಮಧ್ಯರಂಗನಾಥಸ್ವಾಮಿ ದೇವಸ್ಥಾನದ ಕಾಮಗಾರಿ ಪೂರ್ಣಗೊಂಡಿದ್ದು ಮೇ 21ರಂದು ಲೋಕಾರ್ಪಣೆಗೊಳ್ಳಲಿದ್ದು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಲಿದ್ದಾರೆ ಎಂದು ಹನೂರು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು.
ಶಿವನಸಮುದ್ರದಲ್ಲಿರುವ ಪುರಾಣ ಪ್ರಸಿದ್ಧ ದೇಗುಲ
ಹನೂರು ಶಾಸಕ ಮಂಜುನಾಥ್ರಿಂದ ಪರಿಶೀಲನೆ
---
ಕನ್ನಡಪ್ರಭ ವಾರ್ತೆ ಕೊಳ್ಳೇಗಾಲ
ತಾಲೂಕಿನ ಮಧ್ಯರಂಗನಾಥಸ್ವಾಮಿ ದೇವಸ್ಥಾನದ ಕಾಮಗಾರಿ ಪೂರ್ಣಗೊಂಡಿದ್ದು ಮೇ 21ರಂದು ಲೋಕಾರ್ಪಣೆಗೊಳ್ಳಲಿದ್ದು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಲಿದ್ದಾರೆ ಎಂದು ಹನೂರು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು.
ಮಧ್ಯರಂಗನಾಥಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದ ನಂತರ ಮಾತನಾಡಿದ ಅವರು, 21ರಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ದೇಗುಲ ಲೋಕಾರ್ಪಣೆ ಮಾಡಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸದಿದ್ದಾರೆ ಎಂದರು.ಈ ವೇಳೆ ತಹಶೀಲ್ದಾರ್ ಬಸವರಾಜು, ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್, ನಿರ್ಮಿತಿ ಕೇಂದ್ರದ ಎಂಜಿನಿಯರ್ ರವಿಕುಮಾರ್, ಸತ್ತೇಗಾಲ ಗ್ರಾ.ಪಂ ಮಾಜಿ ಅಧ್ಯಕ್ಷ ಮಲ್ಲೇಶ್, ಪಿಎಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ನಂಜುಂಡ ಸ್ವಾಮಿ, ವಿಜಯ ಕುಮಾರ್, ಅರ್ಚಕ ಮಧುಸೂದನ್, ಶ್ರೀನಿವಾಸ್ ಶಾಸ್ತ್ರಿ ಇನ್ನಿತರರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.