ಕನ್ನಡಪ್ರಭ ವಾರ್ತೆ ಹನೂರು
ವಿವಿಧೆಡೆ ಪರಿಶೀಲನೆ: ರಾಮನ ಗುಡ್ಡೆ ಹಾಗೂ ಉಡುತೊರೆ ಜಲಾಶಯದ ರೈತರ ಜಮೀನಿಗೆ ತೆರಳುವ ನಾಲೆಗಳನ್ನು ಪರಿಶೀಲಿಸಲು ಬಸಪ್ಪನ ದೊಡ್ಡಿ, ಅಜ್ಜಿಪುರ, ಗಂಗನದೊಡ್ಡಿ, ಕೆ.ಗುಂಡಾಪುರ ಹಾಗೂ ಮಂಚಾಪುರ ಸೇರಿದಂತೆ ರಾಮಪುರ ಇನ್ನಿತರ ಗ್ರಾಮಗಳಲ್ಲಿ ಶಾಸಕ ಮಂಜುನಾಥ್ ಅಧಿಕಾರಿಗಳ ಜೊತೆ ತೆರಳಿ ಪರಿಶೀಲಿಸಿ ಕೂಡಲೇ ಸಂಬಂಧಪಟ್ಟ ನೀರಾವರಿ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ತುರ್ತಾಗಿ ಈ ಭಾಗದ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸುವಂತೆ ತಿಳಿಸಿದರು.
ಜಲಾಶಯದ ನೀರು ಬಿಡಲು ರೈತರಿಂದ ಒತ್ತಾಯ: ಕರ್ನಾಟಕ ರಾಜ್ಯ ರೈತ ಸಂಘ ಹನೂರು ಘಟಕದ ಅಧ್ಯಕ್ಷ ಅಮ್ಜದ್ ಖಾನ್, ಶಾಸಕ ಎಂಆರ್ ಮಂಜುನಾಥ್ ಅವರನ್ನು ಭೇಟಿ ಮಾಡಿ ಜಲಾಶಯದಲ್ಲಿರುವ ನೀರನ್ನು ನಾಲೆಗಳಿಗೆ ಬಿಡುವ ಮೂಲಕ ರೈತರಿಗೆ ಅನುಕೂಲ ಕಲ್ಪಿಸಿ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಮನವಿ ಮಾಡಿದರು. ಶಾಸಕರು ಸಂಬಂಧಪಟ್ಟ ನೀರಾವರಿ ಇಲಾಖೆ ಅಧಿಕಾರಿಗಳ ಜೊತೆ ಮಾತನಾಡಿ, ಇರುವ ಜಲಾಶಯದ ನೀರನ್ನು ನಾಲೆಗಳಿಗೆ ಬಿಡಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಇಲಾಖೆ ಎಇಇ ನಿರಂಜನ್, ಎಇ ಅಭಿಲಾಶ್ ಹಾಗೂ ಲ್ಯಾಂಡರ್ಮಿ ಎಇಇ ಚಿಕ್ಕವೀರಯ್ಯ, ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಚಿನ್ನಣ್ಣ ಹಾಗೂ ಮುಖಂಡರಾದ ಚಿಂಚಳ್ಳಿ ಗುರುಮಲ್ಲಪ್ಪ, ಮಣಗಳ್ಳಿ ಶಿವಪ್ಪ, ಶಾಗ್ಯ ನಾಗೇಂದ್ರ ಬಾಬು ಹಾಗೂ ಉದ್ದನೂರು ಗಿರೀಶ್ ಮತ್ತು ಚಿನ್ನವೆಂಕಟ್ ಇನ್ನಿತರರು ಇದ್ದರು.